ನಿವೇಶನಕ್ಕೆ ಕಾಯುತ್ತಿವೆ 7 ಸಾವಿರಕ್ಕೂ ಅಧಿಕ ಅರ್ಜಿ!

ಪುತ್ತೂರು-ಸುಳ್ಯ ನಗರದಲ್ಲಿ ಖಾಲಿ ಜಾಗದ ಕೊರತೆ

Team Udayavani, Jun 11, 2020, 6:14 AM IST

ನಿವೇಶನಕ್ಕೆ ಕಾಯುತ್ತಿವೆ 7 ಸಾವಿರಕ್ಕೂ ಅಧಿಕ ಅರ್ಜಿ!

ವಿಶೇಷ ವರದಿ-ಪುತ್ತೂರು/ಸುಳ್ಯ: ಮನೆ ಕಟ್ಟಿಕೊಳ್ಳಲು ನಿವೇಶನಕ್ಕಾಗಿ ಪುತ್ತೂರು ಮತ್ತು ಸುಳ್ಯ ನಗರ ಸ್ಥಳೀಯಾಡಳಿತಕ್ಕೆ ಸಲ್ಲಿಕೆಯಾದ ಅರ್ಜಿಗಳ ಒಟ್ಟು ಸಂಖ್ಯೆ ಬರೋಬ್ಬರಿ ಏಳು ಸಾವಿರಕ್ಕೂ ಅಧಿಕವಿದೆ.

ದಿನೇ ದಿನೇ ಬೆಳವಣಿಗೆ ಹೊಂದು ತ್ತಿರುವ ಉಭಯ ತಾಲೂಕುಗಳ ನಗರ ಪ್ರದೇಶಗಳಲ್ಲಿ ನಿವೇಶನ ರಹಿತರ ಪಟ್ಟಿಯು ವೃದ್ಧಿಯಾಗುತ್ತಿದ್ದು, ನಿವೇಶನ ಒದಗಿ ಸಲು ಜಾಗವೇ ಇಲ್ಲ ಎಂದು ಸ್ಥಳೀಯಾ ಡಳಿತಗಳು ಕೈಚೆಲ್ಲಿ ಕುಳಿತಿವೆ.

ಪುತ್ತೂರು ನಗರಸಭೆ
ಜಿಲ್ಲಾ ಕೇಂದ್ರವಾಗುವ ಅರ್ಹತೆ ಹೊಂದಿರುವ ಪುತ್ತೂರು ನಗರಸಭೆ ವ್ಯಾಪ್ತಿಯಲ್ಲಿ 3,500ಕ್ಕೂ ಮಿಕ್ಕ ಜನರು ನಿವೇಶನ ನೀಡುವಂತೆ ಅರ್ಜಿ ಸಲ್ಲಿಸಿ ದ್ದಾರೆ. ಹಲವು ವರ್ಷಗಳಿಂದ ಅರ್ಜಿ ವಿಲೇವಾರಿ ಆಗಿಲ್ಲ. ಕಾರಣ ನಗರ ದಲ್ಲಿ ಖಾಲಿ ಜಮೀನು ಲಭ್ಯವಿಲ್ಲ ಎನ್ನುವುದು. ಪ್ರಸ್ತುತ ಕೊಡಿಮರ ಬಳಿ 1 ಎಕ್ರೆ ಜಾಗ ಇದ್ದು ಇದನ್ನು ನಿವೇಶನ ರಹಿತರಿಗೆ ನೀಡುವ ನಿಟ್ಟಿನಲ್ಲಿ ಭೂ ಸಮ ತಟ್ಟು ಮಾಡಲಾಗುತ್ತಿದೆ. ಬೇರೆ ಕಡೆ ಗಳಲ್ಲಿ ಸೂಕ್ತ ಜಾಗವಿಲ್ಲ. 3,500 ಅರ್ಜಿ ಗಳ ಪೈಕಿ 2,500ರಷ್ಟು ಅರ್ಹ ಫಲಾನುಭವಿಗಳಿದ್ದರೂ ಅವರಿಗೆ ನೀಡಲು 1 ಎಕ್ರೆ ಸಾಲದು. ಹೀಗಾಗಿ ಹಂಚಿಕೆಯೇ ದೊಡ್ಡ ಸವಾಲಾಗಿ ಪರಿಣಮಿಸಿದೆ.

ಸುಳ್ಯ ನಗರ ಪಂಚಾಯತ್‌
ಸುಳ್ಯ ನಗರ ಪಂಚಾಯತ್‌ ವ್ಯಾಪ್ತಿ ಯಲ್ಲೂ 3 ಸಾವಿರಕ್ಕೂ ಮಿಕ್ಕಿ ಅರ್ಜಿ ಸಲ್ಲಿಕೆ ಆಗಿವೆ. ಈಗಲೂ ಅರ್ಜಿ ಸಲ್ಲಿಕೆ ಆಗುತ್ತಿದೆ ಹೊರತು ವಿಲೇವಾರಿಯಾಗುತ್ತಿಲ್ಲ. ಇಲ್ಲೂ ಜಾಗದ ಕೊರತೆ ಎನ್ನುವ ಸಬೂಬು ಇದೆ. ಆದರೆ ಜಾಗ ಇದ್ದು ಒತ್ತುವರಿ ಆಗಿದೆ ಎನ್ನುವುದು ನ.ಪಂ.ನ ಕೆಲವು ಸದಸ್ಯರ ಆರೋಪ. ಪರ್ಯಾಯ ವ್ಯವಸ್ಥೆ ಕೂಡ ಇಲ್ಲಿ ಗಗನಕುಸುಮವಾಗಿದೆ.

ಖಾಸಗಿ ಜಾಗ ಖರೀದಿಗೆ ಸರಕಾರಿ ಮೌಲ್ಯ ಸಾಲದು!
ಸರಕಾರಿ ಜಾಗವಿಲ್ಲದಿದ್ದರೆ ನಗರ ವ್ಯಾಪ್ತಿಯ ಗಡಿ ಗ್ರಾಮಗಳಲ್ಲಿ ಅಥವಾ ನಗರ ದೊಳಗೆ ಖಾಸಗಿ ಜಾಗ ಖರೀದಿ ಸಲು ಸರಕಾರ ಅವಕಾಶ ನೀಡಿದೆ. ಆದರೆ ಜಾಗದ ಸರಕಾರಿ ಮಾರುಕಟ್ಟೆ ಮೌಲ್ಯ ತೀರಾ ಕಡಿಮೆ ಇರುವ ಕಾರಣ ಆ ಮೊತ್ತಕ್ಕೆ ಯಾರೂ ಕೂಡ ಜಾಗ ನೀಡುತ್ತಿಲ್ಲ. ಮೌಲ್ಯ ಹೆಚ್ಚಿಸುವ ಮನವಿಗೂ ಸ್ಪಂದನೆ ಸಿಗುತ್ತಿಲ್ಲ. ಹಾಗಾಗಿ ಖಾಸಗಿ ಜಾಗ ಖರೀದಿ ಕೂಡ ನನೆಗುದಿಗೆ ಬಿದ್ದಿದೆ.

ಫ್ಲ್ಯಾಟ್‌ ಮಾದರಿ ಚಿಂತನೆ
ನಿವೇಶನ ಕೊರತೆಗೆ ಪರ್ಯಾಯವಾಗಿ ಫ್ಲ್ಯಾಟ್‌ ಮಾದರಿಯಲ್ಲಿ ಮನೆ ನಿರ್ಮಿಸಿ ನೀಡುವ ಚಿಂತನೆ ಕೂಡ ಉಭಯ ತಾಲೂಕುಗಳ ಸ್ಥಳೀಯಾಡಳಿತದ್ದು. ಬಹು ಮಹಡಿಯ ಕಟ್ಟಡದಲ್ಲಿ ವಸತಿಗೃಹ ನಿರ್ಮಿಸಿ ಹಂಚಿಕೆ ಮಾಡಿದರೆ ನಿವೇ ಶನದ ಅಗತ್ಯ ಉದ್ಭವಿಸುವುದಿಲ್ಲ. ಒಂದೇ ಕಡೆ ಹಲವು ಅರ್ಜಿದಾರರಿಗೆ ಮನೆ ಒದಗಿಸಬಹುದು. ಆದರೆ 7,000ಕ್ಕೂ ಮಿಕ್ಕಿ ಮಂದಿಗೆ ಫ್ಲ್ಯಾಟ್‌ ನಿರ್ಮಾ ಣಕ್ಕೆ ಕೋಟ್ಯಂತರ ರೂ. ಅನು ದಾನದ ಅಗತ್ಯವೂ ಇದೆ. ಅದನ್ನು ಹೊಂದಿ ಸಿದ ಬಳಿಕವಷ್ಟೇ ಯೋಜನೆ ರೂಪಿಸಬಹುದಾಗಿದೆ.

1 ಎಕ್ರೆ ಜಾಗ ಸಮತಟ್ಟು
2,500ಕ್ಕೂ ಮಿಕ್ಕಿ ಜನರಿಗೆ ನಿವೇಶನ ಅಗತ್ಯ ಇದೆ. ನಗರದಲ್ಲಿ ನಿವೇಶನಕ್ಕೆ ಸೂಕ್ತ ಜಾಗ ಇಲ್ಲ. ಜಾಗ ಒದಗಿಸಲು ಕಂದಾಯ ಇಲಾಖೆಗೆ ಮನವಿ ಮಾಡಲಾಗಿದೆ. ಪ್ರಸ್ತುತ ಕೊಡಿಮರದಲ್ಲಿ 1 ಎಕ್ರೆ ಜಾಗ ಇದ್ದು ಭೂ ಸಮತಟ್ಟು ಪ್ರಗತಿಯಲ್ಲಿದೆ.
– ರೂಪಾ ಶೆಟ್ಟಿ, ಪೌರಾಯುಕ್ತೆ, ನಗರಸಭೆ ಪುತ್ತೂರು

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

10

Missing: ಚುನಾವಣಾ ಕರ್ತವ್ಯದಲ್ಲಿದ್ದ ಸರಕಾರಿ ನೌಕರ ನಾಪತ್ತೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.