ಕಾಳಸಂತೆಯಲ್ಲಿ ಮಾರಾಟವಾಗುತ್ತಿದೆ ಆಮ್ಲಜನಕ ಸಿಲಿಂಡರ್‌!


Team Udayavani, Jun 19, 2020, 2:31 PM IST

ಕಾಳಸಂತೆಯಲ್ಲಿ ಮಾರಾಟವಾಗುತ್ತಿದೆ ಆಮ್ಲಜನಕ ಸಿಲಿಂಡರ್‌!

ಲಿಮಾ: ಕೋವಿಡ್‌ನಿಂದಾಗಿ ಜನರು ತತ್ತರಿಸಿದ್ದು, ಹಲವರು ಮಾನವೀಯ ನೆರವಿಗೆ ಯತ್ನಿಸಿದ್ದರೆ ಪೆರುವಿನಲ್ಲಿ ಇದರ ದುರ್ಲಾಭ ಎತ್ತಲು ಆಮ್ಲಜನಕ ಮಾರಾಟಗಾರರು ಮುಂದಾಗಿದ್ದಾರೆ. ಇದರಿಂದ ರೋಗಿಗಳ ಸಂಬಂಧಿಕರು ಪರದಾಡುವಂತಾಗಿದೆ. ಈಗ ಅಲ್ಲಿ ಆಮ್ಲಜನಕ ಸಿಲಿಂಡರ್‌ ಒಂದರ ಬೆಲೆ ಸಾವಿರ ಪಟ್ಟು ಹೆಚ್ಚಾಗಿದ್ದು, ಜೀವ ಉಳಿಸಲು ಬೇರೆ ದಾರಿ ಕಾಣದೆ ಜನ ದುಬಾರಿ ಬೆಲೆ ಕೊಟ್ಟು ಕಾಳಸಂತೆಯಲ್ಲಿ ಖರೀದಿಸುತ್ತಿದ್ದಾರೆ.

ಸರಕಾರಿ ಆಸ್ಪತ್ರೆಗಳಲ್ಲಿ ಬೇಕಾದಷ್ಟು ಆಮ್ಲಜನಕ ಸಿಲಿಂಡರ್‌ ಸಿಗುತ್ತಿಲ್ಲ ಇದರಿಂದ ರೋಗಿಗಳ ಸಂಬಂಧಿಕರು 8 ಕ್ಯೂಬಿಕ್‌ ಮೀಟರ್‌ ಆಮ್ಲಜನಕ ಸಿಲಿಂಡರ್‌ಗೆ ಸುಮಾರು 90 ಸಾವಿರ ರೂ. ವರೆಗೂ ಕೊಡಬೇಕಾಗಿದೆ. ಸಾಮಾನ್ಯವಾಗಿ ಇಂತಹ ಸಿಲಿಂಡರ್‌ಗಳ ಬೆಲೆ 8ರಿಂದ 10 ಸಾವಿರ ರೂ.ವರೆಗೂ ಇದೆ. ಬೇಡಿಕೆ ಇರುವ ಸಂದರ್ಭಗಳಲ್ಲಾದರೆ ಒಂದೆರಡು ಸಾವಿರ ರೂ. ಏರಿಕೆಯಾಗಬಹುದು. ಆದರೆ ಇದು 1 ಸಾವಿರ ಪಟ್ಟು ಏರಿಕೆಯಾಗಿದ್ದು, ಅಮಾನವೀಯ ಎಂದು ಪೆರುವಿನ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಆದರೆ ಸಂಬಂಧಿಕರನ್ನು ಉಳಿಸಿಕೊಳ್ಳಲೇ ಬೇಕೆಂಬ ಪ್ರಯತ್ನದಿಂದ ಚಿಕಿತ್ಸೆಗೆ ಸಾಲ, ಆಮ್ಲಜನಕ ಖರೀದಿಗೂ ಸಾಲ ಮಾಡಲು ಮುಂದಾಗಿದ್ದಾರೆ.

ಪೆರುವಿನ ಆರೋಗ್ಯ ಸಚಿವರು ಹೇಳುವಂತೆ ದೇಶದಲ್ಲಿ ಈಗ ನಿತ್ಯ 180 ಟನ್‌ ಆಮ್ಲಜನಕದ ಕೊರತೆ ಇದೆಯಂತೆ. ಇದಕ್ಕಾಗಿ ವಿದೇಶಗಳಿಂದ ಪ್ಲ್ರಾಂಟ್‌ಗಳನ್ನು ಆಮದು ಮಾಡಲು 28 ಲಕ್ಷ ಡಾಲರ್‌ನ ಪ್ಯಾಕೇಜ್‌ ಘೋಷಿಸಲಾಗಿದೆ. ಆಸ್ಪತ್ರೆಗಳ ಆಕ್ಸಿಜನ್‌ ಪ್ಲ್ರಾಂಟ್‌ಗಳನ್ನು ನಿರ್ವಹಣೆ ಮಾಡದ್ದರಿಂದ ಸಮಸ್ಯೆ ಬಿಗಡಾಯಿಸಲು ಕಾರಣವಾಗಿದೆ.

ರೋಗಿಗಳ ಸಂಬಂಧಿಕರು ಆಸ್ಪತ್ರೆಗಳಲ್ಲಿದ್ದಾಗ, ಮನೆಯಲ್ಲಿದ್ದಾಗಲೂ ಸಿಲಿಂಡರ್‌ ಬಳಸುತ್ತಿದ್ದಾರೆ. ಇದಕ್ಕಾಗಿ ಅವರು ಸ್ವಂತಕ್ಕೆಂದು ಸಿಲಿಂಡರ್‌ ಖರೀದಿಸಿದ್ದು, ಅದನ್ನು ತುಂಬಿಕೊಳ್ಳುವಲ್ಲಿಯೂ ದೊಡ್ಡ ಸರತಿ ಸಾಲು ಇದೆ. ಮನೆಯವರು, ಸಂಬಂಧಿಕರು ಕ್ಯೂ ನಿಂತು, ದುಬಾರಿ ಹಣ ಕೊಟ್ಟು ಸಿಲಿಂಡರ್‌ ತೆಗೆದುಕೊಂಡು ಬರಬೇಕಾದ ದುಸ್ಥಿತಿ ಅಲ್ಲಿನವರದ್ದು. ಪೆರುವಿನಲ್ಲಿ ನಿತ್ಯ 4 ಸಾವಿರ ಕೋವಿಡ್‌ ಪ್ರಕರಣಗಳು ವರದಿಯಾಗುತ್ತಿದ್ದು, ಇದರಿಂದ ಪರಿಸ್ಥಿತಿ ಇನ್ನಷ್ಟು ಹದಗೆಡಲು ಕಾರಣವಾಗಿದೆ.

ಟಾಪ್ ನ್ಯೂಸ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.