ಮಾಡದಡಿ ಗುಡ್ಡೆ ಗೆಳೆಯರಿಂದ ಕೃಷಿ ಕಾಯಕ

ಹಡಿಲು ಭೂಮಿಯಲ್ಲಿ ಬಂಗಾರದ ಬೆಳೆ

Team Udayavani, Dec 2, 2021, 4:45 AM IST

ಮಾಡದಡಿ ಗುಡ್ಡೆ ಗೆಳೆಯರಿಂದ ಕೃಷಿ ಕಾಯಕ

ಸುರತ್ಕಲ್‌: ಇತ್ತೀಚಿನ ದಿನಗಳಲ್ಲಿ ಕೂಲಿಯಾಳುಗಳ ಕೊರತೆಯಿಂದ ನೂರಾರು ಎಕರೆ ಕೃಷಿ ಭೂಮಿ ಹಡಿಲು ಬಿದ್ದಿದೆ. ಆದರೆ ಈ ಯುವಜನರು 5 ವರ್ಷಗಳಿಂದ ಹವ್ಯಾಸಿ ಕೃಷಿ ಕಾಯಕ ನಡೆ ಸುತ್ತಾ ಹಡಿಲು ಭೂಮಿಯಲ್ಲಿ ಬಂಗಾರದ ಬೆಳೆ ಬೆಳೆಯುತ್ತಿದ್ದಾರೆೆ.

ಸುರತ್ಕಲ್‌ನ ಗಾಂಧಿನಗರ, ಕುಂಜತ್ತ ಬೈಲ್‌ನಲ್ಲಿ ನಗರ ಮಧ್ಯೆ ಇರುವ ಕೃಷಿ ಪ್ರದೇಶ. ಸುರತ್ಕಲ್‌ ಕೃಷಿ ಇಲಾಖೆ ಹೋಬಳಿ ವ್ಯಾಪ್ತಿಯ ಈ ಗದ್ದೆಯಲ್ಲಿ ಹಲವು ವರ್ಷಗಳಿಂದ 2-3 ಭತ್ತ ಬೆಳೆಯಲಾಗುತ್ತಿತ್ತು. ಕಾಲ ಕ್ರಮೇಣ ಕೂಲಿಯಾಳುಗಳ ಕೊರತೆ, ಲಾಭಕ್ಕಿಂತ ನಷ್ಟ ಹೆಚ್ಚೆಂಬ ಲೆಕ್ಕಾಚಾರಗಳು ಜನರನ್ನು ಕೃಷಿಯಿಂದ ಹಿಂದೆ ಉಳಿಯುವಂತೆ ಮಾಡಿತು.

ಈ ಮಧ್ಯೆ ಮಾಡದಡಿ ಗುಡ್ಡೆ ಫ್ರೆಂಡ್ಸ್‌ ಯುವಕರು 5 ವರ್ಷಗಳಿಂದ ಹವ್ಯಾಸಿ ಕೃಷಿ ಕಾಯಕದಲ್ಲಿ ತೊಡಗಿದರು. ಈ ವರ್ಷ ಈ ವರ್ಷ ಒಂದೇ ಪ್ರದೇಶದಲ್ಲಿ 68 ಕ್ವಿಂಟಾಲ್‌ ಭತ್ತ ಬೆಳೆದಿದ್ದಾರೆ.ಯಾವುದೇ ಪ್ರತಿಫಲಾಪೇಕ್ಷೆಯಿಲ್ಲದೆ ಭೂಮಿಯ ಮಾಲಕರು ಯುವಜನರಿಗೆ ಕೃಷಿ ಮಾಡಲು ಅವಕಾಶ ಕಲ್ಪಿಸಿ ಪ್ರೋತ್ಸಾಹ ನೀಡಿರುವುದು ವಿಶೇಷ ಸಂಗತಿ.

ವಿವಿಧ ವೃತ್ತಿಯ 10-15 ಯುವಕರ ತಂಡದ್ದು ಇದು ಹವ್ಯಾಸಿ ಕೃಷಿ ಕಾಯಕ. ಹದಿನೆಂಟು ಎಕರೆ ಪ್ರದೇಶದಲ್ಲಿ ಕಜ ಉಮಾ ಭತ್ತ ಬಿತ್ತಿ ಅಂದಾಜು 200 ಕ್ವಿಂಟಾಲ್‌ ಬೆಳೆ ತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಮೊದಲ ಬಾರಿ ನಾಟಿ ಮಾಡುವಾಗ ಹಡಿಲು ಭೂಮಿ ಹದ ಮಾಡಲು ಹೆಚ್ಚಿನ ವೆಚ್ಚ ಭರಿಸಿದ್ದರಿಂದ ಲಾಭ ಸಿಗಲಿಲ್ಲ. ಯಂತ್ರಗಳ ಮೂಲಕ ಹದಗೊಳಿಸಿ ಫಸಲು ಕೈಗೆ ಬಂದಾಗ ಸಿಕ್ಕ ಆನಂದ ವರ್ಣಿಸಲಾಗದು. ನಾವು ಬೆಳೆದ ಭತ್ತವದು ಎನ್ನುತ್ತಾರೆ ಅಖೀಲ್‌.

ಶಾಸಕರ ಸಹಕಾರ
ಈ ಸಾಹಸಕ್ಕೆ ಬೆಂಬಲವಾಗಿ ಮಾರ್ಗ ದರ್ಶನ ನೀಡಿದವರು ಕೃಷಿಕ ಮರಕಡದ ಜಗದೀಶ್‌. ಶಾಸಕ ಡಾ| ಭರತ್‌ ಶೆಟ್ಟಿ ವೈ ಅವರ ಸಹಕಾರವೂ ಇದೆ. ಈ ಬಾರಿಯೂ ಮಳೆಗಾಲದಲ್ಲಿ ಹಲವು ಎಕರೆ ಕೃಷಿ ಭೂಮಿ ಇಡ್ಯಾ, ಗಾಂಧಿನಗರ, ಮರಕಡದಲ್ಲಿ ಹಸಿರಾಗಿ ಕಂಗೊಳಿಸಿದೆ.

ಅಕ್ಕಿ ವಿತರಣೆ
ಕೊರೊನಾ ಲಾಕ್‌ಡೌನ್‌ ಸಂದರ್ಭ ಈ ತಂಡ ಬೆಳೆದ ಅಕ್ಕಿಯನ್ನು ಹಲವು ಬಡ ಕುಟುಂಬಗಳಿಗೆ ವಿತರಿಸಿ ಮಾನವೀಯತೆ ಮೆರೆದಿತ್ತು. ಬೈ ಹುಲ್ಲನ್ನು 2 ವರ್ಷಗಳಿಂದ ಪಜಿರು ಗೋ ಆಶ್ರಮಕ್ಕೆ ಉಚಿತವಾಗಿ ನೀಡಲಾಗುತ್ತಿದೆ. ಮನಸ್ಸಿಗೆ ಖುಷಿ ಕೊಡುವ ಕೆಲಸವಿದು. ಅದಕ್ಕೇ ನಿರಂತರವಾಗಿ ಮಾಡುತ್ತಿದ್ದೇವೆ ಎನ್ನುತ್ತಾರೆ ಮಾಡದಡಿ ಗುಡ್ಡೆ ಫ್ರೆಂಡ್ಸ್‌ ಸಂಘದವರ ಮಾತು. ಹೀಗೆ ಯುವ ತಂಡಗಳು ಕೈಗೊಳ್ಳುತ್ತಿರುವ ಹಡಿಲು ಭೂಮಿ ಸಾಗುವಳಿ ರಾಜ್ಯಕ್ಕೆ ಮಾದರಿಯಾಗುತ್ತಿದೆ. ಕೃಷಿ ಯಂತ್ರ, ಬೇಕಾದ ಸೌಲಭ್ಯ ಸಿಕ್ಕಲ್ಲಿ ಕರಾವಳಿಯಲ್ಲಿ ಮತ್ತೆ ಕೃಷಿ ನಳನಳಿಸಲಿದೆ. ಪ್ರತ್ಯೇಕ ಬ್ರಾಂಡ್‌ನ‌ ಗುಣಮಟ್ಟದ ಅಕ್ಕಿ ಗ್ರಾಹಕರಿಗೆ ಲಭ್ಯವಾಗಲೂಬಹುದು. ಆ ಮೂಲಕ ಕೃಷಿ ಸಂಸ್ಕೃತಿಯ ಜೊತೆಗೆ ಗ್ರೀನ್‌ ಕಾಲರ್‌ ಉದ್ಯೋಗಕ್ಕೆ ಬರುವವರ ಸಂಖ್ಯೆ ಯೂ ಹೆಚ್ಚಳ ಆಗಬಹುದು ಎಂಬುದು ಹಲವರ ಅಭಿಪ್ರಾಯ.

ಒಂದು ಕಾಲಕ್ಕೆ ಕೃಷಿಯೇ ಜೀವನ ಪದ್ಧತಿಯಾಗಿತ್ತು. ಆದರೆ ಕಾಲಕ್ರಮೇಣ ಭತ್ತ ಬೆಳೆಯುವುದು ಬಿಟ್ಟು ಇಲ್ಲಿನ ಜನ ಇತರ ವಾಣಿಜ್ಯ ಚಟುವಟಿಕೆಗಳಲ್ಲೇ ಆಸಕ್ತರಾದರು. 5 ವರ್ಷಗಳಲ್ಲಿ ಸ್ಥಳೀಯ ಯುವಕರು ಹಡಿಲು ಭೂಮಿಯಲ್ಲಿ ಕೃಷಿ ಮಾಡುತ್ತಿದ್ದಾರೆ. ಈ ಮೂಲಕ ಗದ್ದೆಗಿಳಿದು ತಾವು ಬೆಳೆದ ಫಸಲನ್ನು ಬಳಸಿ, ಬೈ ಹುಲ್ಲನ್ನು ಗೋ ಶಾಲೆಗೆ ನೀಡಿ ಮಾದರಿಯಾಗಿದ್ದಾರೆ.
-ಜಗದೀಶ್‌, ಕೃಷಿಕ ಹಾಗೂ
ತಂಡದ ಮಾರ್ಗದರ್ಶಕರು

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.