ಹಡಿಲು ಗದ್ದೆಗಳಲ್ಲಿ ಭತ್ತದ ಕೃಷಿ ಅಭಿಯಾನ

ಕೃಷಿ ಇಲಾಖೆಯಿಂದ ಕ್ರಮ: 1,000 ಎಕ್ರೆ ಗುರಿ

Team Udayavani, Jun 20, 2020, 5:43 AM IST

ಹಡಿಲು ಗದ್ದೆಗಳಲ್ಲಿ ಭತ್ತದ ಕೃಷಿ ಅಭಿಯಾನ

ಮಹಾನಗರ: ದಕ್ಷಿಣ ಕನ್ನಡ ಜಿಲ್ಲಾ ಕೃಷಿ ಇಲಾಖೆಯು ಹಡಿಲು ಗದ್ದೆಗಳಲ್ಲಿ ಭತ್ತದ ಕೃಷಿ ಅಭಿಯಾನವನ್ನು ಆರಂಭಿಸಿದ್ದು, ಆಸಕ್ತ ರೈತರ ಸಹಕಾರದೊಂದಿಗೆ ಜಿಲ್ಲೆಯಲ್ಲಿ ಈ ಸಾಲಿನಲ್ಲಿ 1,000 ಎಕ್ರೆ ಹಡಿಲು ಗದ್ದೆಗಳಲ್ಲಿ ಭತ್ತದ ಕೃಷಿಯ ಗುರಿ ಇರಿಸಿಕೊಂಡಿದೆ.

ಈಗಾಗಲೇ 100 ಎಕರೆ ಹಡಿಲು ಗದ್ದೆಗಳಲ್ಲಿ ಭತ್ತ ಬೆಳೆಯುವಂತೆ ರೈತರನ್ನು ಪ್ರೇರೇಪಿಸುವಲ್ಲಿ ಇಲಾಖೆ ಯಶಸ್ವಿ ಯಾಗಿದೆ. ಜಿಲ್ಲಾ ಕೃಷಿ ಜಂಟಿ ನಿರ್ದೇಶಕರು ಹಾಗೂ ಸಹಾಯಕ ಕೃಷಿ ನಿರ್ದೇಶಕರು ಜಿಲ್ಲೆಯ ವಿವಿಧೆಡೆ ಸಂಚರಿಸಿ ಹಡಿಲು ಗದ್ದೆಗಳನ್ನು ಗುರುತಿಸುವ ಕಾರ್ಯದಲ್ಲಿ ತೊಡಗಿದ್ದಾರೆ.

ಸೂರಿಂಜೆ, ಮೂಲ್ಕಿ, ಅತಿಕಾರಿಬೆಟ್ಟು ಮೊದಲಾದೆಡೆ ಈಗಾಗಲೇ ಹಡಿಲು ಗದ್ದೆಗಳನ್ನು ಗುರುತಿಸಿ ಮತ್ತೆ ಭತ್ತ ಬೆಳೆಯುವಂತೆ ರೈತರನ್ನು ಹುರಿದುಂಬಿಸಿದ್ದು, ಉತ್ತಮ ಸ್ಪಂದನೆ ಲಭ್ಯವಾಗಿದೆ ಎಂದು ಕೃಷಿ ಅಧಿಕಾರಿಗಳು ಹೇಳಿದ್ದಾರೆ.

ದ.ಕ. ಜಿಲ್ಲೆಯಲ್ಲಿ ಭತ್ತದ ಕೃಷಿ ವರ್ಷದಿಂದ ವರ್ಷಕ್ಕೆ ಇಳಿಮುಖವಾಗುತ್ತಿದೆ. ಆರು ವರ್ಷಗಳ ಹಿಂದೆ ಜಿಲ್ಲೆಯಲ್ಲಿ 34,000 ಹೆಕ್ಟೇರ್‌ನಲ್ಲಿ ಭತ್ತ ಬೆಳೆಯಲಾಗುತ್ತಿದ್ದರೆ 2020ನೇ°ಮುಂಗಾರು ಹಂಗಾಮಿನಲ್ಲಿ 10,260 ಹೆಕ್ಟೇರ್‌ಗೆ ಕುಸಿದಿದೆ.

ವಿವಿಧ ಕಾರಣಗಳಿಂದಾಗಿ ರೈತರು ಭತ್ತದ ಬೆಳೆಯಿಂದ ವಿಮುಖರಾಗುತ್ತಿದ್ದು ಗದ್ದೆಗಳನ್ನು ಹಡಿಲು ಬಿಡುವಪ್ರಮಾಣ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಭತ್ತದ ಬೆಳೆಯತ್ತ ರೈತರನ್ನು ಮತ್ತೆ ಆಕರ್ಷಿಸಲು ಕೃಷಿ ಇಲಾಖೆ ಕಾರ್ಯೋನ್ಮುಖವಾಗಿದೆ. ಬೇರೆ ಊರುಗಳಲ್ಲಿ ಉದ್ಯೋಗದಲ್ಲಿದ್ದ ಮಂದಿ ಕೊರೊನಾದಿಂದಾಗಿ ಊರಿಗೆ ಮರಳುತ್ತಿದ್ದು ಕೃಷಿಯತ್ತ ಆಸಕ್ತಿ ತೋರ್ಪಡಿಸುತ್ತಿರುವುದು ಈ ಅಭಿಯಾನಕ್ಕೆ ಪೂರಕವಾಗಿದೆ.

ಅಭಿಯಾನ ಹೇಗಿರುತ್ತದೆ
ಮೊದಲಿಗೆ ಜಿಲ್ಲೆಯ ಹಡೀಲು ಗದ್ದೆಗಳ ಬಗ್ಗೆ ಕೃಷಿ ಸಹಾಯಕರಿಂದ ಮಾಹಿತಿ ಪಡೆದುಕೊಳ್ಳಲಾಗುತ್ತದೆ. ಬಳಿಕ ಕೃಷಿ ಇಲಾಖೆಯ ಜಿಲ್ಲಾ ಜಂಟಿ ನಿರ್ದೇಶಕರು ಸೇರಿದಂತೆ ಅಧಿಕಾರಿಗಳು ಭೇಟಿ ನೀಡಿ ರೈತರನ್ನು ಸೇರಿಸಿ ಹಡಿಲು ಬಿದ್ದಿರುವ ಗದ್ದೆಗಳಲ್ಲಿ ಭತ್ತ ಬೆಳೆಯುವಂತೆ ಪ್ರೇರೇಪಿಸುತ್ತಾರೆ. ಈ ಕಾರ್ಯದಲ್ಲಿ ಭತ್ತದ ಕೃಷಿ ಆಸಕ್ತರು ಹಾಗೂ ಪ್ರಗತಿಪರ ರೈತರ ನೆರವನ್ನು ಇಲಾಖೆ ಪಡೆದುಕೊಳ್ಳುತ್ತಿದೆ.

ಸಹಾಯಧನ ಯೋಜನೆಗಳು ಪ್ರಗತಿಯಲ್ಲಿ
ಈಗಾಗಲೇ ಕೆಲವು ಪ್ರಗತಿಪರ ಕೃಷಿಕರು ಇಲಾಖೆಯೊಂದಿಗೆ ಕೈಜೋಡಿಸಿದ್ದಾರೆ. ರೈತರಿಗೆ ಸಹಾಯಧನದಲ್ಲಿ ಬಿತ್ತನೆ ಬೀಜ, ಯಂತ್ರಧಾರೆ ಯೋಜನೆಯಲ್ಲಿ ಉಳುಮೆ ಯಂತ್ರ ಸೌಲಭ್ಯ ಮುಂತಾದ ನೆರವು ಒದಗಿಸಲಾಗುತ್ತದೆ. ಸಹಾಯಧನ ಆಧಾರಿತ ಯೋಜನೆಗಳನ್ನು ಇದಕ್ಕೆ ಜೋಡಿಸುವ ಪ್ರಯತ್ನ ಕೂಡ ಕೃಷಿ ಇಲಾಖೆಯಿಂದ ಜಾರಿಯಲ್ಲಿದೆ.

 ಆರಂಭಿಕ ಯಶಸ್ಸು
ಹಡಿಲು ಗದ್ದೆಗಳಲ್ಲಿ ಭತ್ತದ ಬೆಳೆಯುವಂತೆ ರೈತರನ್ನು ಪ್ರೇರೇಪಿಸುವ ಅಭಿಯಾನ ಆರಂಭವಾಗಿದೆ. ಇದಕ್ಕೆ ಪ್ರಗತಿಪರ ರೈತರ ನೆರವು ಪಡೆದುಕೊಳ್ಳಲಾಗುತ್ತಿದೆ. ನಮ್ಮ ಪ್ರಯತ್ನಕ್ಕೆ ಆರಂಭಿಕ ಯಶಸ್ಸು ದೊರಕಿದ್ದು ಕೆಲವೆಡೆ ಹಡಿಲು ಗದ್ದೆಗಳಲ್ಲಿ ಭತ್ತ ಕೃಷಿ ಪ್ರಕ್ರಿಯೆ ಆರಂಭಗೊಂಡಿದೆ.
 - ಡಾ| ಸೀತಾ,
ಕೃಷಿ ಜಂಟಿ ನಿರ್ದೇಶಕರು, ದ.ಕ. ಜಿಲ್ಲೆ

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.