ಪದ್ಮಭೂಷಣ ಡಾ| ಎಂ. ಮಹಾದೇವಪ್ಪ ನಿಧನ


Team Udayavani, Mar 7, 2021, 12:52 AM IST

ಪದ್ಮಭೂಷಣ ಡಾ| ಎಂ. ಮಹಾದೇವಪ್ಪ ನಿಧನ

ಮೈಸೂರು: ಭತ್ತದಲ್ಲಿ ಹೈಬ್ರಿಡ್‌ (ಮಿಶ್ರ) ತಳಿಯನ್ನು ಸಂಶೋಧಿಸಿ “ಭತ್ತದ ಮಹಾದೇವಪ್ಪ’ ಎಂದೇ ಖ್ಯಾತರಾಗಿ ಪದ್ಮಶ್ರೀ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದ ಕೃಷಿ ವಿಜ್ಞಾನಿ ಡಾ| ಎಂ. ಮಹಾದೇವಪ್ಪ (83) ಅವರು ಮಾ. 6ರಂದು ನಿಧನ ಹೊಂದಿದರು. ಮೃತರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಮಾದಾಪುರ ಗ್ರಾಮದಲ್ಲಿ ಮಾರ್ಚ್‌ 7ರಂದು ಅಂತ್ಯಸಂಸ್ಕಾರ ನೆರವೇರಲಿದೆ. ಇವರು ಮಣಿಪಾಲದ ಭಾರತ ವಿಕಾಸ್‌ ಟ್ರಸ್ಟ್‌ನಲ್ಲಿ ಸಕ್ರಿಯರಾಗಿದ್ದರು.

ಚಾಮರಾಜನಗರ ಜಿಲ್ಲೆಯ ಮಾದಾಪುರದಲ್ಲಿ 1937ರ ಆ. 4ರಂದು ಜನಿಸಿದ್ದ ಇವರು, 1960ರಲ್ಲಿ ಹೆಬ್ಟಾಳಿನ ಕೃಷಿ ಕಾಲೇಜಿನಲ್ಲಿ ಪದವಿ ಪಡೆದು ದಾಖಲೆಯ ಅವಧಿಯಲ್ಲಿ ಕೊಯಮತ್ತೂರು ಕೃಷಿ ಕಾಲೇಜಿನಲ್ಲಿ ಪ್ರಥಮ ಸ್ಥಾನದಲ್ಲಿ ಮಾಸ್ಟರ್‌ ಮತ್ತು ಡಾಕ್ಟರೇಟ್‌ ಪದವಿ ಪಡೆದಿದ್ದರು. ಮುಂದೆ 40 ವರ್ಷಗಳವರೆಗೆ ಸತತವಾಗಿ ಅಧ್ಯಯನ, ಬೋಧನೆ, ಸಂಶೋಧನೆ, ಆಡಳಿತದಲ್ಲಿ ಸಾಧನೆ ಮಾಡಿದ್ದರು.

ಕೃಷಿ ಕ್ಷೇತ್ರದ ಸಾಧನೆಗಾಗಿ ಕೇಂದ್ರ ಸರಕಾರ ಪದ್ಮಶ್ರೀ, ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಿದೆ. ಧಾರವಾಡದ ಕೃಷಿ ವಿಶ್ವವಿದ್ಯಾನಿಲಯಕ್ಕೆ ಪ್ರಥಮ ಬಾರಿಗೆ ಎರಡು ಬಾರಿ ಕುಲಪತಿಗಳಾಗಿದ್ದರು. ಇವರು “ಮಧು’, “ಮಂಗಳ’, “ಪುಷ್ಪ’, “ಪ್ರಗತಿ’, “ವಿಕ್ರಮ’, “ಮುಕ್ತಿ’ “ಬಿಳಿಮುಕ್ತಿ’ “ಜಿ.ಎಂ.ಕೆ.-17′ ಮುಂತಾದ ಭತ್ತದ ತಳಿಗಳನ್ನು ಸಂಶೋಧಿಸಿದ್ದಾರೆ. ಇದಲ್ಲದೆ ರಾಷ್ಟ್ರದಲ್ಲೇ ಮೊದಲ ಬಾರಿಗೆ ಭತ್ತದಲ್ಲಿ ಹೈಬ್ರಿಡ್‌(ಮಿಶ್ರ) ತಳಿಯನ್ನು ಸಂಶೋಧಿಸಿದ ಕೀರ್ತಿ ಇವರಿಗೆ ಸಲ್ಲುತ್ತದೆ. ಫಿಲಿಫೈನ್ಸ್‌ನಲ್ಲಿರುವ ಅಂತಾರಾಷ್ಟ್ರೀಯ ಭತ್ತ ಸಂಶೋಧನ ಕೇಂದ್ರದಲ್ಲಿ ಎರಡೂವರೆ ವರ್ಷ ಸಂಶೋಧನೆ ನಡೆಸಿದ್ದರು.

ಇವರಿಗೆ ಪದ್ಮಶ್ರೀ(2005), ಪದ್ಮಭೂಷಣ(2014), ಹೂಕರ್‌ ಪ್ರಶಸ್ತಿ (1981), ಕರ್ನಾಟಕ ರಾಜೋತ್ಸವ ಪ್ರಶಸ್ತಿ (1984), ಭಾರತ ರತ್ನ ಎಂ.ವಿಶ್ವೇಶ್ವರಯ್ಯ ಸ್ಮಾರಕ ಪ್ರಶಸ್ತಿ (1999), ಸರ್‌ ಚೋಟುರಾಂ(1996), ಜೀವಮಾನ ಸಾಧನೆ (2009), ಎಲ್‌.ಟಿ.ಎ.(2011), ಕನ್ನಡ ಶ್ರೇಷ್ಠ ಕೃತಿ ಬರಹ ಪ್ರಶಸ್ತಿ(2005), ಕೆ.ಕೆ.ಎಂ.ಪ್ರಶಸ್ತಿ(1972), ನಾಗಮ್ಮ ದತ್ತಾತ್ರೇಯ ಪ್ರಶಸ್ತಿ(1989) ಸೇರಿ ಹಲವು ಪ್ರಶಸ್ತಿಗಳು ಸಂದಿವೆ. ರೇಷ್ಮೆ ವಿಜ್ಞಾನಗಳ ರಾಷ್ಟ್ರೀಯ ಅಕಾಡೆಮಿ, ಭಾರತೀಯ ವಿಜ್ಞಾನ ಬರಹಗಾರರ ಸಂಸ್ಥೆ ಸೇರಿ ಹಲವು ಪ್ರತಿಷ್ಠಿತ ರಾಷ್ಟ್ರೀಯ ಸಂಸ್ಥೆಗಳಿಂದ ಪ್ರಶಸ್ತಿ ಹಾಗೂ ಫೆಲೋಶಿಪ್‌ಗ್ಳನ್ನು ಪಡೆದಿದ್ದಾರೆ.

“ಕರ್ನಾಟಕದಲ್ಲಿ ಭತ್ತದ ಕೃಷಿ’, “ಭತ್ತದ ಕೃಷಿ’, “ಭತ್ತ’, “ಬೀಜೋತ್ಪಾದನೆ ಮತ್ತು ತಾಂತ್ರಿಕತೆ’, “ಭತ್ತದ ಉತ್ಪಾದನೆಯ ಸಮಸ್ಯೆಗಳು ಮತ್ತು ಪರಿಹಾರ’ ಸೇರಿ 20ಕ್ಕೂ ಹೆಚ್ಚು ಕೃತಿಗಳನ್ನು ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಬರೆದಿದ್ದಾರೆ.

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.