Jammu: ಕಾರ್ಯಾಚರಣೆ ದಿಕ್ಕು ತಪ್ಪಿಸಲು ತನ್ನ ಶಿಬಿರಕ್ಕೇ ಬೆಂಕಿ ಇಟ್ಟ ಪಾಕ್‌ ಸೇನೆ!

ಅಂತಾರಾಷ್ಟ್ರೀಯ ಗಡಿಯಲ್ಲಿ ಭಾರತದೊಳಕ್ಕೆ ಉಗ್ರರನ್ನು ನುಸುಳಿಸಲು ಈ ಕುಕೃತ್ಯ

Team Udayavani, Dec 24, 2023, 12:21 AM IST

army

ಜಮ್ಮು: ಭಾರತ ಮತ್ತು ಪಾಕಿಸ್ಥಾನದ ಅಂತಾರಾಷ್ಟ್ರೀಯ ಗಡಿ ಪ್ರದೇಶದಲ್ಲಿ ನಾಲ್ವರು ಶಸ್ತ್ರಧಾರಿ ಭಯೋತ್ಪಾದಕರ ನುಸುಳುವಿಕೆ ಯತ್ನವನ್ನು ಭಾರತೀಯ ಸೇನೆ ವಿಫ‌ಲಗೊಳಿಸಿದೆ. ಅಲ್ಲದೇ ನಾಲ್ವರ ಪೈಕಿ ಇಬ್ಬರು ಉಗ್ರರನ್ನು ಸೇನೆ ಹೊಡೆದುರುಳಿಸಿದ್ದು, ಮತ್ತಿಬ್ಬರು ಪರಾರಿಯಾಗಿದ್ದಾರೆ.

ಜಮ್ಮು – ಕಾಶ್ಮೀರದ ಅಖೂ°ರ್‌ನ ಖೂರ್‌ ಸೆಕ್ಟರ್‌ನಲ್ಲಿ ಶನಿವಾರ ಬೆಳಗಿನ ಜಾವ ಈ ಘಟನೆ ನಡೆದಿದೆ. ಅಲ್ಲದೆ ಉಗ್ರರ ನುಸುಳುವಿಕೆ ಯತ್ನದ ವೇಳೆ ಪಾಕ್‌ ಸೇನೆಯು ನುಸುಳುಕೋರರಿಗೆ ಬೆಂಗಾವಲಾಗಿ ನಿಂತಿತ್ತು ಎಂಬ ಅಂಶವೂ ಬಯಲಾಗಿದೆ ಎಂದು ಸೇನೆಯ ವೈಟ್‌ ನೈಟ್‌ ಕಾಪ್ಸ್‌ನ ಅಧಿಕಾರಿಗಳು ಟ್ವೀಟ್‌ ಮಾಡಿದ್ದಾರೆ.

ಕುತೂಹಲಕಾರಿ ಅಂಶವೆಂದರೆ, ಖೂರ್‌ ಸೆಕ್ಟರ್‌ನಲ್ಲಿ ನುಸುಳುಕೋರರು ಮತ್ತು ಸೇನೆಯ ನಡುವೆ ಗುಂಡಿನ ಕಾಳಗ ಮತ್ತು ಉಗ್ರರಿಗಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದ್ದಂತೆಯೇ ಭೂಸೇನೆಯ ಅಧಿಕಾರಿಗಳು ಮತ್ತು ಯೋಧರ ಗಮನ ಬೇರೆಡೆಗೆ ಸೆಳೆಯುವ ಪ್ರಯತ್ನವಾಗಿ ಪಾಕ್‌ ಸೇನೆಯು ಗಡಿಯಾಚೆಗಿನ ಅರಣ್ಯ ಪ್ರದೇಶದಲ್ಲಿರುವ ತನ್ನದೇ ಸೇನಾಶಿಬಿರಕ್ಕೆ ಬೆಂಕಿ ಹಚ್ಚಿದೆ. ಭಾರತದ ಕಡೆಯಿರುವ ಕಣ್ಗಾವಲು ಸಾಧನಗಳ ದಿಕ್ಕು ತಪ್ಪಿಸುವ ಉದ್ದೇಶದಿಂದಲೇ ಪಾಕ್‌ ಈ “ಬೆಂಕಿಯ ನಾಟಕ”ವಾಡಿದೆ.

ಖಚಿತ ಸುಳಿವು: ಪೂಂಛ್‌ನಲ್ಲಿ ಗುರುವಾರ ಐವರು ಯೋಧರು ಹುತಾತ್ಮರಾದ ಬಳಿಕ ರಜೌರಿ ಮತ್ತು ಪೂಂಛ್‌ನಲ್ಲಿ ಉಗ್ರರಿಗಾಗಿ ಶೋಧ ಕಾರ್ಯಾಚರಣೆ ಬಿರುಸಿನಿಂದ ನಡೆಯುತ್ತಿತ್ತು. ಅದಕ್ಕೆ ಪೂರಕವಾಗಿ ಖೂರ್‌ ಸೆಕ್ಟರ್‌ನಲ್ಲಿ ನಾಲ್ವರು ಭಯೋತ್ಪಾದಕರು ಶಸ್ತ್ರಸಜ್ಜಿತರಾಗಿ ಅಂತಾರಾಷ್ಟ್ರೀಯ ಗಡಿ ಮೂಲಕ ಒಳನುಸುಳಲು ಪ್ರಯತ್ನಿಸುತ್ತಿದ್ದಾರೆ ಎಂಬ ವಿಚಾರ ತಿಳಿಯುತ್ತಿದ್ದಂತೆಯೇ ಭೂಸೇನೆಯ ವೈಟ್‌ ನೈಟ್‌ ಕಾರ್ಪ್ಸ್‌ನ ಅಧಿಕಾರಿಗಳು ಮತ್ತು ಸಿಬಂದಿ ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ.

ಈ ಪ್ರದೇಶದಲ್ಲಿ ಅಳವಡಿಸಲಾಗಿರುವ ರಹಸ್ಯ ಕೆಮರಾಗಳಿಂದ ನಾಲ್ವರು ಭಯೋತ್ಪಾದಕರು ಇದ್ದದ್ದು ದೃಢಪಟ್ಟಿದೆ. ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರನ್ನು ಹತ್ಯೆಗೈಯ್ಯಲಾಗಿದ್ದು, ಉಳಿದ ಇಬ್ಬರು ತಮ್ಮವರ ಶವಗಳನ್ನು ಎಳೆದುಕೊಂಡು ಹೋಗಿದ್ದಾರೆ ಎಂದೂ ಸೇನೆ ತಿಳಿಸಿದೆ. ಪ್ರತೀ ಬಾರಿ ಗಡಿ ನಿಯಂತ್ರಣ ರೇಖೆಯ ಕಡೆಯಿಂದ ಉಗ್ರರು ಒಳನುಸುಳುವ ಯತ್ನ ನಡೆಸುತ್ತಾರೆ. ಆದರೆ ಈ ಬಾರಿ ಅಂತಾರಾಷ್ಟ್ರೀಯ ಗಡಿಯಿಂದಲೂ ಉಗ್ರರನ್ನು ಭಾರತದೊಳಕ್ಕೆ ಕಳುಹಿಸುವ ಪ್ರಯತ್ನವನ್ನು ಪಾಕ್‌ ಸೇನೆ ನಡೆಸಿದೆ.

ರಾಜಕೀಯ ಪಕ್ಷಗಳ ಪ್ರತಿಭಟನೆ

ಜಮ್ಮು – ಕಾಶ್ಮೀರದ ವಿವಿಧ ರಾಜಕೀಯ ಪಕ್ಷಗಳು ಶನಿವಾರ ತೀವ್ರ ಪ್ರತಿಭಟನೆ ನಡೆಸಿದ್ದು, ಮೂವರು ನಾಗರಿಕರ ಸಾವಿನ ಬಗ್ಗೆ ನಿಷ್ಪಕ್ಷ ತನಿಖೆಯಾಗಬೇಕು ಎಂದು ಆಗ್ರಹಿಸಿವೆ. ಸೇನೆಯು ವಿಚಾರಣೆಗೆಂದು 15 ಮಂದಿಯನ್ನು ವಶಕ್ಕೆ ಪಡೆದಿತ್ತು. ಅದರಲ್ಲಿ ಮೂವರು ನಿಗೂಢವಾಗಿ ಸಾವನ್ನಪ್ಪಿದ್ದಾರೆ. ಉಳಿದವರೆಲ್ಲರೂ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಆರೋಪಿಸಿದ್ದಾರೆ.

ಮೂವರು ನಾಗರಿಕರ ನಿಗೂಢ ಸಾವು; ಪರಿಹಾರ ಘೋಷಣೆ

ಪೂಂಛ್‌ನಲ್ಲಿ ಗುರುವಾರ ಸೇನಾ ವಾಹನಗಳ ಮೇಲೆ ಉಗ್ರರು ನಡೆಸಿದ ದಾಳಿಯಲ್ಲಿ ಐವರು ಯೋಧರು ಹುತಾತ್ಮರಾದ ಪ್ರಕರಣದ ಬೆನ್ನಲ್ಲೇ, ಅದೇ ಸ್ಥಳದಲ್ಲಿ ಶನಿವಾರ ಮೂವರು ನಾಗರಿಕರ ಮೃತದೇಹ ಪತ್ತೆಯಾಗಿದೆ. ಅಚ್ಚರಿಯೆಂದರೆ, ಗುರುವಾರದ ಪ್ರಕರಣ ಸಂಬಂಧ ಸೇನೆಯು ವಶಕ್ಕೆ ಪಡೆದಿದ್ದ ನಾಗರಿಕರೇ ಈಗ ಶವವಾಗಿ ಪತ್ತೆಯಾಗಿದ್ದಾರೆ ಎಂದು ಮೃತರ ಕುಟುಂಬ ಸದಸ್ಯರು ಆರೋಪಿಸಿದ್ದಾರೆ. ಇದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಇದರ ಬೆನ್ನಲ್ಲೇ, ಜಮ್ಮು- ಕಾಶ್ಮೀರ ಆಡಳಿತವು, ಮೃತ ನಾಗರಿಕರ ಕುಟುಂಬಗಳಿಗೆ ತಲಾ 10 ಲಕ್ಷ ರೂ. ಪರಿಹಾರ ಮತ್ತು ಕುಟುಂಬದ ತಲಾ ಒಬ್ಬ ಸದಸ್ಯನಿಗೆ ಉದ್ಯೋಗ ನೀಡುವ ಭರವಸೆ ನೀಡಿದ್ದಾರೆ. ಇನ್ನೊಂದೆಡೆ ನಾಗರಿಕರ ಸಾವಿಗೆ ಸಂಬಂಧಿಸಿದ ತನಿಖೆಯಲ್ಲಿ ಸಂಪೂರ್ಣ ಸಹಕಾರ ನೀಡುವುದಾಗಿ ಸೇನೆ ತಿಳಿಸಿದೆ.

ಟಾಪ್ ನ್ಯೂಸ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.