Palestine: 2 ದೇಶ ಸ್ಥಾಪಿಸಿ; ಶಾಂತಿ ಉಂಟಾಗಲಿ: ಅರಿಂದಂ ಬಗಚಿ
Team Udayavani, Oct 20, 2023, 12:27 AM IST
ಹೊಸದಿಲ್ಲಿ: ಪ್ಯಾಲೆಸ್ತೀನ್ ವಿಚಾರದಲ್ಲಿ ಹಿಂದಿನಿಂದಲೂ ಕೇಂದ್ರ ನಿಲುವು ಬದಲಾಗಿಲ್ಲ. ಎರಡು ದೇಶಗಳನ್ನು ಸ್ಥಾಪಿಸಿ, ಪ್ಯಾಲೆಸ್ತೀನಿಯರಿಗೆ ಪ್ರತ್ಯೇಕ ಮಾನ್ಯತೆ ನೀಡುವುದರ ಬಗ್ಗೆ ಸರಕಾರ ಬೆಂಬಲ ನೀಡುತ್ತದೆ ಎಂದು ಕೇಂದ್ರ ಸರಕಾರ ಹೇಳಿದೆ.
ಹೊಸದಿಲ್ಲಿಯಲ್ಲಿ ಗುರುವಾರ ಮಾತನಾಡಿದ ಕೇಂದ್ರ ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಂ ಬಗಚಿ, ಯುದ್ಧದ ಪರಿಸ್ಥಿತಿ ಮುಕ್ತಾಯಗೊಳಿಸುವ ನಿಟ್ಟಿನಲ್ಲಿ ಇಸ್ರೇಲ್ ಮತ್ತು ಪ್ಯಾಲೆಸ್ತೀನ್ ಮಾತುಕತೆ ನಡೆಸಬೇಕು ಎನ್ನುವುದು ನಮ್ಮ ಸಲಹೆ ಎಂದರು. ಇದರಿಂದಾಗಿ ಇಸ್ರೇಲ್ಗೂ ನೆಮ್ಮದಿಯ ದಿನಗಳು ಉಂಟಾಗಬೇಕು ಎಂದಿದ್ದಾರೆ.
“ಇಸ್ರೇಲ್ ಮತ್ತು ಹಮಾಸ್ ಉಗ್ರರ ನಡುವಿನ ಯುದ್ಧದಲ್ಲಿ ಅಮಾಯಕ ಜನರಿಗೆ ತೊಂದರೆ ಆಗಬಾರದು. ಈ ನಿಟ್ಟಿನಲ್ಲಿ ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ಬಗೆಗಿನ ಕಾನೂನುಗಳನ್ನು ಕಡ್ಡಾಯವಾಗಿ ಪಾಲನೆ ಮಾಡುವಂತೆ ನಿಗಾ ವಹಿಸಬೇಕು. ಅ.7ರಿಂದ ಮಧ್ಯಪ್ರಾಚ್ಯದಲ್ಲಿ ಉಂಟಾಗಿರುವ ಬೆಳವಣಿಗೆಗಳು ಕಳವಳಕಾರಿಯಾಗಿದೆ. ಅಂತಾರಾಷ್ಟ್ರೀಯ ಸಮುದಾಯ ಎಲ್ಲ ರೀತಿಯ ಭಯೋತ್ಪಾದನೆಗೆ ಬೆಂಬಲ ನೀಡುವುದರ ವಿರುದ್ಧ ಬಹಿರಂಗವಾಗಿ ಧ್ವನಿ ಎತ್ತಬೇಕು ಎಂದು ಬಗಚಿ ಹೇಳಿದ್ದಾರೆ.
1,200 ಮಂದಿ ಆಗಮನ: “ಆಪರೇಷನ್ ಅಜಯ್’ ಅನ್ವಯ ಇಸ್ರೇಲ್ನಿಂದ ಇದುವರೆಗೆ ಐದು ವಿಮಾನಗಳಲ್ಲಿ 1,200 ಮಂದಿ ಆಗಮಿಸಿದ್ದಾರೆ. ಈ ಪೈಕಿ 18 ಮಂದಿ ನೇಪಾಲಿಗಳೂ ಸೇರಿದ್ದಾರೆ ಎಂದರು. ಗಾಜಾ ಪಟ್ಟಿಯಲ್ಲಿ ನಾಲ್ವರು ಭಾರತೀಯರು ಸಿಕ್ಕಿಹಾಕಿಕೊಂಡಿದ್ದಾರೆ. ಅಲ್ಲಿನ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಸದ್ಯಕ್ಕೆ ಅವರನ್ನು ಪಾರು ಮಾಡದಂಥ ಸ್ಥಿತಿ ಇದೆ. ಅವಕಾಶ ಸಿಕ್ಕಿದ ಕೂಡಲೇ ಅವರನ್ನು ತೆರವುಗೊಳಿಸಲಾಗುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi ಮಹಿಳಾ ಆಯೋಗದ 223 ಉದ್ಯೋಗಿಗಳ ವಜಾ: ಲೆ.ಗವರ್ನರ್ ಆದೇಶದಲ್ಲೇನಿದೆ?
Video: Gymನಲ್ಲಿ ವರ್ಕ್ ಔಟ್ ಮಾಡುತ್ತಿದ್ದ ವ್ಯಕ್ತಿ ಇದ್ದಕಿದ್ದಂತೆ ಕುಸಿದು ಬಿದ್ದು ಮೃತ್ಯು
LS Polls: ಇನ್ನು 24 ಗಂಟೆಯಲ್ಲಿ ಅಮೇಥಿ, ರಾಯ್ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಫೈನಲ್
LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ
ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ
MUST WATCH
ಹೊಸ ಸೇರ್ಪಡೆ
Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು
Pens: ಬಹುರೂಪದಲ್ಲಿ ಲಭ್ಯವಿರುವ ಬಹುಪಯೋಗಿ ಲೇಖನಿ
70 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ; ನಿರ್ವಹಣೆಯಿಲ್ಲದೆ ಸೊರಗಿದ ಮಲ್ಲಿಕಟ್ಟೆ ಪಾರ್ಕ್
Rajinikanth ಬಯೋಪಿಕ್ಗೆ ಭರ್ಜರಿ ತಯಾರಿ; ಬಾಲಿವುಡ್ ನಿರ್ಮಾಪಕನಿಂದ ಸಿನಿಮಾ ನಿರ್ಮಾಣ
Udupi: ಪರಿಸರ ಸ್ನೇಹಿ ಸಿಎನ್ಜಿ ಬಸ್ ಸಂಚಾರ-ಸಿಎನ್ಜಿ ಲಭ್ಯತೆ ಸಮಸ್ಯೆ