ಪನ್ನುನ್ ಕೇಸ್: ಭಾರತಕ್ಕೆ ಬೇಹುಗಾರಿಕಾ ಮುಖ್ಯಸ್ಥನನ್ನು ಕಳುಹಿಸಿದ್ದ ಬೈಡೆನ್
ರಾ ಮುಖ್ಯಸ್ಥರ ಜತೆಗೆ ಮಾತುಕತೆ
Team Udayavani, Dec 1, 2023, 9:58 PM IST
ನವದೆಹಲಿ/ವಾಷಿಂಗ್ಟನ್: ಖಲಿಸ್ತಾನಿ ಉಗ್ರ ಗುರುಪತ್ವಂತ್ ಸಿಂಗ್ ಪನ್ನುನ್ ಹತ್ಯೆಗೆ ಸಂಚು ರೂಪಿಸಿದ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಅವರು ತಮ್ಮ ಬೇಹುಗಾರಿಕಾ ಮುಖ್ಯಸ್ಥರನ್ನು ಭಾರತಕ್ಕೆ ಕಳುಹಿಸಿದ್ದರು ಎಂಬ ಅಂಶ ತಿಳಿದುಬಂದಿದೆ.
ಭಾರತದ ಸರ್ಕಾರಿ ಅಧಿಕಾರಿಯೊಬ್ಬರ ನಿರ್ದೇಶನದ ಮೇರೆಗೆ ಸುಪಾರಿ ಹಂತಕನೊಬ್ಬ ಖಲಿಸ್ತಾನಿ ಉಗ್ರ, ಸಿಖ್ಸ್ ಫಾರ್ ಜಸ್ಟಿಸ್ ನಾಯಕ ಪನ್ನುನ್ನನ್ನು ಹತ್ಯೆಗೈಯ್ಯಲು ಸಂಚು ರೂಪಿಸಿದ್ದ ಎಂಬ ವಿಚಾರ ಬೆಳಕಿಗೆ ಬಂದ ಕೂಡಲೇ ಅಮೆರಿಕದ ಕೇಂದ್ರ ಗುಪ್ತಚರ ಸಂಸ್ಥೆ(ಸಿಐಎ) ನಿರ್ದೇಶಕ ವಿಲಿಯಂ ಬರ್ನ್ಸ್ ಅವರು ಭಾರತಕ್ಕೆ ಆಗಮಿಸಿ, ಭಾರತದ ರಾ ಮುಖ್ಯಸ್ಥರನ್ನು ಭೇಟಿಯಾಗಿದ್ದರು. ಜತೆಗೆ, ಈ ಆರೋಪ ಕುರಿತು ಸೂಕ್ತ ತನಿಖೆ ನಡೆಸಿ, ತಪ್ಪಿತಸ್ಥರಿಗೆ ಶಿಕ್ಷೆಯಾಗುವಂತೆ ನೋಡಿಕೊಳ್ಳಿ ಎಂದೂ ಸಲಹೆ ನೀಡಿದ್ದರು ಎಂದು ವಾಷಿಂಗ್ಟನ್ ಪೋಸ್ಟ್ ವರದಿ ಮಾಡಿದೆ.
ಭಾರತದ ನಿರ್ಧಾರಕ್ಕೆ ಮೆಚ್ಚುಗೆ:
ಸರ್ಕಾರಿ ಅಧಿಕಾರಿ ವಿರುದ್ಧ ಕೇಳಿಬಂದಿರುವ ಆರೋಪ ಕುರಿತು ಉನ್ನತ ಮಟ್ಟದ ತನಿಖೆ ನಡೆಸುವುದಾಗಿ ಘೋಷಿಸಿರುವ ಭಾರತ ಸರ್ಕಾರದ ನಿರ್ಧಾರವನ್ನು ಅಮೆರಿಕ ಸ್ವಾಗತಿಸಿದೆ. ಇದೊಂದು ಉತ್ತಮ ಮತ್ತು ಸಮರ್ಪಕ ನಿರ್ಧಾರವಾಗಿದ್ದು, ಇದರ ಒಟ್ಟಾರೆ ಫಲಿತಾಂಶವನ್ನು ನಾವು ಎದುರು ನೋಡುತ್ತಿದ್ದೇವೆ ಎಂದು ಅಮೆರಿಕ ಶುಕ್ರವಾರ ಹೇಳಿದೆ. ಜತೆಗೆ, ಈ ಪ್ರಕರಣವು ಭಾರತ ಮತ್ತು ಅಮೆರಿಕದ ಬಾಂಧವ್ಯದ ಮೇಲೆ ಯಾವುದೇ ಪ್ರತಿಕೂಲ ಪರಿಣಾಮ ಬೀರುವುದಿಲ್ಲ ಎಂದೂ ಸ್ಪಷ್ಟಪಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್ ನಲ್ಲಿ ಪತ್ತೆ!
Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು
India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
MUST WATCH
ಹೊಸ ಸೇರ್ಪಡೆ
Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು
Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು
IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್
ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ
Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್ ನಲ್ಲಿ ಪತ್ತೆ!