Pariksha Pe Charchaಕರಾವಳಿಯ ವಿದ್ಯಾರ್ಥಿಗಳು ಭಾಗಿ;ಪದಗಳಲ್ಲಿ ವರ್ಣಿಸಲಾಗದಂಥ ವಿಶೇಷ ಅನುಭವ


Team Udayavani, Jan 29, 2024, 11:57 PM IST

modiPariksha Pe Charchaಕರಾವಳಿಯ ವಿದ್ಯಾರ್ಥಿಗಳು ಭಾಗಿ;ಪದಗಳಲ್ಲಿ ವರ್ಣಿಸಲಾಗದಂಥ ವಿಶೇಷ ಅನುಭವ

ಕುಂದಾಪುರ: ನಮ್ಮನ್ನು ಎದುರು ಸಾಲಿನಲ್ಲಿ ಕುಳ್ಳಿರಿಸಿದ್ದರು. ಭಾಷಣ, ಸಂವಾದ ಮುಗಿದ ಕೂಡಲೇ ಒಬ್ಬಳು ಓಡಿ ಹೋಗಿ ವೇದಿಕೆಗೆ ತೆರಳಿ ಮೋದಿಯವರ ಕಾಲು ಹಿಡಿದಳು.

ಭದ್ರತೆಯವರು ಇತರರನ್ನು ಬಿಡಲಿಲ್ಲ. ಆಗ ಪ್ರಧಾನಿಯವರೇ ಮಕ್ಕಳ ಬಳಿ ಬಂದರು. ಅಷ್ಟು ದೊಡ್ಡ ವ್ಯಕ್ತಿಯ ಮುಂದೆ ನಿಲ್ಲುವಾಗ, ಹತ್ತಿರ ಬಂದಾಗ ಏನು ಮಾಡಲೂ ತೋಚಲಿಲ್ಲ. ತತ್‌ಕ್ಷಣ ಕಾಲಿಗೆ ಬಿದ್ದೆ. ಬೆನ್ನು ತಟ್ಟಿ ಆಲ್‌ ದಿ ಬೆಸ್ಟ್‌ ಎಂದರು.

ಹೀಗೆ ಒಂದೇ ಉಸುರಿಗೆ ತನ್ನೊಳಗಿನ ಭಾವನೆ ಗಳನ್ನೆಲ್ಲ ವಿವರಿಸಿದ್ದು ಕುಂದಾಪುರ ಎಜುಕೇಶನ್‌ ಸೊಸೈಟಿ ಪ್ರವರ್ತಿತ ಎಚ್‌.ಎಂ.ಎಂ. ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ.ಕೆ.ಆರ್‌. ಆಚಾರ್ಯ ಸ್ಮಾರಕ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಗಾರ್ಗಿ ದೇವಿ.

ತನ್ನ ಅನುಭವವನ್ನು “ಉದಯ ವಾಣಿ’ ಜತೆ ಹಂಚಿ ಕೊಂಡ ಗಾರ್ಗಿ, ಮೋದಿಯವರ ಪಾದಸ್ಪರ್ಶದ ಅನುಭವ ಹೇಳಲಾಗದು. ಆ ಕ್ಷಣ ನನ್ನ ಬದುಕಿನಲ್ಲಿ ಮರಳಿ ಬರು ವುದೋ, ಇಲ್ಲವೋ ಗೊತ್ತಿಲ್ಲ. ಆದರೆ ಅದು ಅವಿಸ್ಮರಣೀಯ ಎಂದು ಹೇಳಿದರು ಗಾರ್ಗಿ.

ಇಂತಹ ಅವಕಾಶ ಸಿಕ್ಕೀತೆಂದು ಕನಸಲ್ಲೂ ಭಾವಿಸಿರಲಿಲ್ಲ. ಅದು ಸಾಧ್ಯವಾದದ್ದು ಕಲೋತ್ಸವ ದಿಂದ. 2023-2024ನೇ ಸಾಲಿನ ಉತ್ಸವದಲ್ಲಿ ಭರತನಾಟ್ಯದಲ್ಲಿ ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸಿ, ರಾಷ್ಟ್ರ ಮಟ್ಟದ ಶಾಸ್ತ್ರೀಯ ನೃತ್ಯ ಸ್ಪರ್ಧೆಯಲ್ಲಿ ಕಂಚಿನ ಪದಕ ಪಡೆದಿದ್ದು, ಗಣರಾಜ್ಯೋತ್ಸವ ಹಾಗೂ ಪರೀಕ್ಷಾ ಪೇ ಚರ್ಚಾದಲ್ಲಿ ಭಾಗಿಯಾಗುವ ಅವಕಾಶ ದೊರೆತಿದೆ ಎಂದರು.

ಪ್ರಧಾನಿಯವರು ಬರುವ ಸ್ವಲ್ಪ ಮೊದಲು ನಮ್ಮ ನೃತ್ಯ
ಪ್ರದರ್ಶನ ಇತ್ತು. ಅವರ ಎದುರು ಪ್ರದರ್ಶನ ನೀಡಲಾಗ ಲಿಲ್ಲ. ಕಲೋತ್ಸವ ತಂಡದಿಂದ ಪ್ರಶ್ನೆ ಕೇಳಲಾಗಿತ್ತು. ಆದರೆ ನನಗೆ ವೈಯಕ್ತಿಕವಾಗಿ ಅವಕಾಶ ಸಿಗಲಿಲ್ಲ. ಇದೆಲ್ಲವೂ ನನ್ನ ಶಾಲೆ, ಮನೆಯ ವರಿಂದಾಗಿ ಸಾಧ್ಯವಾ ಯಿತು ಎನ್ನುತ್ತಾರೆ ಗಾರ್ಗಿದೇವಿ.

ಸುಳ್ಯ: ಪ್ರಧಾನಿ ನರೇಂದ್ರ ಮೋದಿ ಅವರ ಪರೀಕ್ಷಾ ಪೆ ಚರ್ಚಾ-7ರಲ್ಲಿ ಮುಡಿಪು ಜವಾಹರ್‌ ನವೋದಯ ವಿದ್ಯಾಲಯದ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿ ಸುಳ್ಯದ ಅಚಲ್‌ ಬಿಳಿನೆಲೆ ಅವರು ಚಂದ್ರಯಾನ-3ರ ವೈಜ್ಞಾನಿಕ ಮಾದರಿ ಪ್ರದರ್ಶಿಸಿದರು.

ಅಚಲ್‌ ಚಂದ್ರಯಾನ-3 ಕಾರ್ಯ ವೈಖರಿಯನ್ನು ಜನ ಸಾಮಾನ್ಯರಿಗೂ ಅರ್ಥವಾಗುವಂತೆ ವೈಜ್ಞಾನಿಕ ಮಾದರಿ ತಯಾರಿಸಿ ಪ್ರದರ್ಶಿಸಿದ್ದಾರೆ. 100ಕ್ಕೂ ಅಧಿಕ ಮಾರಿಗಳ ಪ್ರದರ್ಶನ ಮಾಡಲಾಗಿತ್ತು, ಇದರಲ್ಲಿ ಅಚಲ್‌ ಅವರದೂ ಒಂದಾಗಿತ್ತು. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ಸೇರಿದಂತೆ ಉನ್ನತ ಅಧಿಕಾರಿಗಳು, 2 ಸಾವಿರಕ್ಕೂ ಅಧಿಕ ಮಕ್ಕಳು ವೈಜ್ಞಾನಿಕ ಮಾದರಿಯನ್ನು ವೀಕ್ಷಿಸಿದರು.

ಎಲ್ಲ ಮಾದರಿಗಳನ್ನು ವೀಕ್ಷಿಸಿದ ಬಳಿಕ ವಿದ್ಯಾರ್ಥಿ ಗಳೊಂದಿಗೆ ಪ್ರಧಾನಿ ಮೋದಿ ಮಾತನಾಡುತ್ತಾ ಇಂದು ಇಲ್ಲಿ ಪ್ರದರ್ಶಿಸಲಾದ ವಿವಿಧ ಮಾದರಿಗಳು ಅದ್ಭುತವಾಗಿವೆ. ಇವುಗಳನ್ನು ವೀಕ್ಷಿಸಲು ಸಮಯ ಸಾಲದು ಎಂದು ಬಣ್ಣಿಸಿ, ವಿದ್ಯಾರ್ಥಿಗಳನ್ನು ಪ್ರಶಂಶಿಸಿದರು.

ಟಾಪ್ ನ್ಯೂಸ್

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.