ಪಾರ್ಕಿಂಗ್‌-ಟ್ರಾಫಿಕ್‌ ಸಮಸ್ಯೆ ಪರಿಹಾರಕ್ಕೆ ಪಾಲಿಕೆ-ಪೊಲೀಸರ ಸಲಹಾ ಸಮಿತಿ ರಚನೆ


Team Udayavani, Feb 17, 2021, 4:35 AM IST

ಪಾರ್ಕಿಂಗ್‌-ಟ್ರಾಫಿಕ್‌ ಸಮಸ್ಯೆ ಪರಿಹಾರಕ್ಕೆ ಪಾಲಿಕೆ-ಪೊಲೀಸರ ಸಲಹಾ ಸಮಿತಿ ರಚನೆ

ಲಾಲ್‌ ಬಾಗ್: ನಗರದಲ್ಲಿ ಪಾರ್ಕಿಂಗ್‌; ನೋ ಪಾರ್ಕಿಂಗ್‌ ವಲಯ ಸಹಿತ ಟ್ರಾಫಿಕ್‌ ವ್ಯವಸ್ಥೆ ಸುಧಾರಣೆ ಮಾಡುವ ಉದ್ದೇಶದಿಂದ ಮಹಾನಗರ ಪಾಲಿಕೆ ಹಾಗೂ ಪೊಲೀಸ್‌ ಇಲಾಖೆಯ ನೇತೃತ್ವದಲ್ಲಿ ಸಲಹಾ ಸಮಿತಿಯೊಂದನ್ನು ರಚನೆ ಮಾಡಲು ತೀರ್ಮಾನಿಸಲಾಗಿದೆ.

ಮಂಗಳೂರು ನಗರದಲ್ಲಿ ಟ್ರಾಫಿಕ್‌ ಸಮಸ್ಯೆ ಕುರಿತಂತೆ ಸೂಕ್ತ ನಿರ್ಣಯ ಕೈಗೊ ಳ್ಳಲು ಮೇಯರ್‌ ದಿವಾಕರ ಪಾಂಡೇಶ್ವರ ಅವರ ಅಧ್ಯಕ್ಷತೆಯಲ್ಲಿ ಮಂಗ ಳೂರು ಮಹಾನಗರ ಪಾಲಿಕೆಯಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.
ಸಭೆಯಲ್ಲಿ ಮಂಗಳೂರು ಡಿಸಿಪಿ (ಅಪರಾಧ ಮತ್ತು ಸಂಚಾರ) ವಿನಯ ಗಾಂವ್ಕರ್‌ ಮಾತನಾಡಿ, ನಗರದಲ್ಲಿ ಈ ಹಿಂದೆ 61 ಕಡೆ ನೋ ಪಾರ್ಕಿಂಗ್‌ ವಲಯ ವಾಗಿ ಗುರುತಿಸಲಾಗಿತ್ತು. ಬಳಿಕ ಪರಿಷ್ಕರಿಸಿ 54 ಕಡೆಗಳಿಗೆ ಸೀಮಿತಗೊಳಿಸಲಾಗಿದೆ. ಮುಂದಿನ ದಿನಗಳಲ್ಲಿ ಸಲಹಾ ಸಮಿತಿ ಯನ್ನು ರಚನೆ ಮಾಡಿ ಅಂತಿಮ ನಿರ್ದೇಶನ ನೀಡಲಾಗುವುದು ಎಂದರು.

ನಗರದಲ್ಲಿ ವಾಹನ ದಟ್ಟಣೆ ಹೆಚ್ಚಾಗುತ್ತಿದೆ. ಮಂಗಳೂರು, ಪುತ್ತೂರು ಮತ್ತು ಬಂಟ್ವಾಳ ಸಾರಿಗೆ ಇಲಾಖೆ ವ್ಯಾಪ್ತಿಯಲ್ಲಿ ಪೊಲೀಸ್‌ ಇಲಾಖೆಯಿಂದ ಇತ್ತೀಚೆಗೆ ಸರ್ವೇ ನಡೆಸಿದ್ದು, ಆ ಪ್ರಕಾರ ಲಾಕ್‌ಡೌನ್‌ ಬಳಿಕ ದ್ವಿಚಕ್ರ ವಾಹನ ಮತ್ತು ಮಿನಿ ನಾಲ್ಕು ಚಕ್ರ ವಾಹನಗಳ ಸಂಖ್ಯೆ ಶೇ. 20ರಷ್ಟು ಏರಿಕೆಯಾಗಿದೆ. ಆ ವಾಹನಗಳೆಲ್ಲ ರಸ್ತೆಗಿಳಿದು ವಾಹನ ದಟ್ಟಣೆ ಉಂಟಾಗುತ್ತಿದೆ ಎಂದರು.

ಹೊಸ ಕೆಮರಾ ಅಳವಡಿಕೆ
ಕಾಂಕ್ರೀಟ್‌ ರಸ್ತೆ ಹಾಗೂ ಹಂಪ್ಸ್‌ಗೆ ಮಾರ್ಕಿಂಗ್‌ ಕೆಲಸವನ್ನು ಸದ್ಯದಲ್ಲೇ ಪೂರ್ಣಗೊಳಿಸುತ್ತೇವೆ. ಹಳೆಯ ವಾಹನ ಗಳನ್ನು ರಸ್ತೆ ಬದಿ ನಿಲ್ಲಿಸಲಾಗುತ್ತಿದೆ ಎಂಬ ದೂರು ಬರುತ್ತಿದ್ದು, ಸಾರಿಗೆ ಇಲಾಖೆ ಮೂಲಕ ತೆರವುಗೊಳಿಸಲಾಗುವುದು. ಪೊಲೀಸ್‌ ಇಲಾಖೆ ಮುಂಭಾಗ ಹಳೆಯ ವಾಹನ ಇದ್ದರೆ, ನ್ಯಾಯಾಲಯದ ನಿರ್ದೇಶನದಂತೆ ತೆರವು ಮಾಡುತ್ತೇವೆ. ನಗರದಲ್ಲಿ ಸದ್ಯ 171 ಸಿಸಿ ಕೆಮರಾಗಳಿದ್ದು, ಅವು ಹಳೆಯದಾಗಿವೆ. ಸ್ಮಾರ್ಟ್‌ಸಿಟಿ ಯೋಜನೆಯಲ್ಲಿ ಹೈಡೆಫಿನೇಶನ್‌ ಹೊಸ ಕೆಮರಾಗಳು ಬರಲಿವೆ ಎಂದರು.

ಪಾಲಿಕೆ ಸದಸ್ಯ ನವೀನ್‌ ಡಿ”ಸೋಜಾ ಮಾತನಾಡಿ, ನಗರದಲ್ಲಿ ಪಾರ್ಕಿಂಗ್‌ ಮತ್ತು ನೋ ಪಾರ್ಕಿಂಗ್‌ ವಲಯವಾಗಿ ಗುರುತು ಮಾಡಿದ್ದರೂ ಅನೇಕ ಕಡೆ ಇನ್ನೂ ಸೂಚನ ಫಲಕ ಅಳವಡಿಸಿಲ್ಲ. ವಾಹನಗಳನ್ನು ಟೋಯಿಂಗ್‌ ಮಾಡುವಾಗ ಸಿಬಂದಿ ಸೌಜನ್ಯದಿಂದ ವರ್ತಿಸುತ್ತಿಲ್ಲ. ಟೋಯಿಂಗ್‌ ವೇಳೆ ಕೆಲವೊಂದು ವಾಹನಗಳಿಗೆ ಹಾನಿ ಉಂಟಾಗುತ್ತಿದ್ದು, ಇದಕ್ಕೆ ಯಾರು ಹೊಣೆ? ರಸ್ತೆ ವಿಸ್ತರಣೆಯ ಉದ್ದೇಶಕ್ಕೆ ಕಂಕನಾಡಿಯಿಂದ ಫ‌ಳ್ನೀರು ವರೆಗೆ ಅನೇಕ ಮಂದಿ ಜಾಗ ಬಿಟ್ಟು ಕೊಟ್ಟಿದ್ದಾರೆ. ಸದ್ಯ ಆ ಪ್ರದೇಶದಲ್ಲಿ ಅನಧಿಕೃತವಾಗಿ ಗೂಡಂಗಡಿ ನಿರ್ಮಾಣವಾಗಿದ್ದು, ಸೂಕ್ತ ಕ್ರಮ ಕೈಗೊಳ್ಳಬೇಕಿದೆ ಎಂದರು.

ಮಾಜಿ ಮೇಯರ್‌ ಭಾಸ್ಕರ್‌ ಕೆ. ಮಾತನಾಡಿ, ನಗರದಲ್ಲಿರುವ ಫುಟ್‌ಪಾತ್‌ ಪಾದಚಾರಿಗಳಿಗೆ ಬಳಕೆಯಾಗುತ್ತಿಲ್ಲ. ಟ್ರಾಫಿಕ್‌ ಸಭೆಗೆ ಬಸ್‌ ಮಾಲಕರ ಸಂಘದ ಅಧ್ಯಕ್ಷರು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಪ್ರಮುಖರನ್ನು ಆಹ್ವಾನಿಸಬೇಕಿತ್ತು ಎಂದು ಸಲಹೆ ನೀಡಿದರು.

ಮನಪಾ ಸದಸ್ಯ ವಿನಯರಾಜ್‌ ಮಾತನಾಡಿ, ಕೆಲವೊಂದು ಕಡೆ ವಾಣಿಜ್ಯ ಕೇಂದ್ರಗಳಲ್ಲಿ ಪಾರ್ಕಿಂಗ್‌ ವ್ಯವಸ್ಥೆ ಇಲ್ಲ. ಆದರೂ, ಅಲ್ಲಿಗೆ ಪಾಲಿಕೆ ಅಧಿಕಾರಿಗಳು ಡೋರ್‌ ನಂಬರ್‌, ಉದ್ದಿಮೆ ಪರವಾನಿಗೆ ನೀಡಿದ್ದಾರೆ ಎಂದರು.

ಸ್ಥಾಯೀ ಸಮಿತಿ ಸದಸ್ಯ ಕಿರಣ್‌ ಕುಮಾರ್‌ ಮಾತನಾಡಿ, ಕೊಟ್ಟಾರಚೌಕಿ ಮೇಲ್ಸೇತುವೆ ಅವೈಜ್ಞಾನಿಕವಾಗಿದೆ. ಮೇಲ್ಸೇತುವೆ ಆರಂಭವಾಗುವ ಕೋಡಿ ಕಲ್‌ ಕ್ರಾಸ್‌ ಬಳಿ ಬಸ್‌ ನಿಲುಗಡೆ ಮಾಡುತ್ತಿದ್ದು, ಆ ಪ್ರದೇಶ ಅಪಘಾತ ವಲಯವಾಗುತ್ತಿದೆ ಎಂದರು. ಪಾಲಿಕೆ ಸದಸ್ಯ ಅನಿಲ್‌ ಕುಮಾರ್‌ ಮಾತನಾಡಿ, ಪೊಲೀಸರು ಸಾರ್ವ ಜನಿಕರಲ್ಲಿ ಜನಸ್ನೇಹಿಯಾಗಿ ವರ್ತಿಸದೆ ಏಕ ವಚನ ಬಳಸುತ್ತಾರೆ ಎಂದರು.

ಚರ್ಚೆಗೆ ಬಂದ ಇತರ ವಿಷಯಗಳು
– ಬಜಾಲ್‌-ಪೈಸಲ್‌ನಗರಕ್ಕೆ, ವೀರ ನಗರಕ್ಕೆ ರಾತ್ರಿ 7 ಗಂಟೆ ಬಳಿಕ ಬಸ್‌ ಸೇವೆ ಇಲ್ಲ.
– ಕೆಪಿಟಿ-ಬಜಪೆ ರಸ್ತೆಯಲ್ಲಿ ಅಳವಡಿಸಿದ ಬ್ಯಾರಿಕೇಡ್‌ ವಾಹನ ಚಾಲಕರಿಗೆ ಕಾಣದೆ ಅಪಘಾತ ಸಂಭವಿಸುವ ಸಾಧ್ಯತೆ ಇದೆ.
– ಜಿಲ್ಲಾಧಿಕಾರಿ ಕಚೇರಿಯಿಂದ ಹ್ಯಾಮಿಲ್ಟನ್‌ ವೃತ್ತದ ವರೆಗಿನ ಪ್ರದೇಶದಲ್ಲಿ ನೋ ಪಾರ್ಕಿಂಗ್‌ ವಲಯ ಗುರುತಿಸಿಲ್ಲ.
– ಅಂಬೇಡ್ಕರ್‌ ವೃತ್ತದಲ್ಲಿ ಝೀಬ್ರಾ ಕ್ರಾಸ್‌ ಇಲ್ಲ, ಉಡುಪಿ ಕಡೆಯಿಂದ ಬರುವ ಬಸ್‌ಗಳ ನಿಲ್ದಾಣಕ್ಕೆ ಕೂಳೂರು ಬಳಿ ಜಾಗ ಪರಿಶೀಲಿಸಿ.
– ಚೊಕ್ಕಬೆಟ್ಟು-ಕಾಟಿಪಳ್ಳ ರಸ್ತೆ ಬದಿಯಲ್ಲೇ ವಾಹನ ನಿಲ್ಲಿಸಲಾಗುತ್ತದೆ
– ಜಿಎಚ್‌ಎಸ್‌ ರಸ್ತೆಗೆ ಹಂಪ್ಸ್‌ ಅಗತ್ಯವಿದೆ.
– ಬಂದರು ರಸ್ತೆಯ ಪೊಲೀಸ್‌ ಠಾಣೆ ಬಳಿಯೇ ಲಾರಿ ನಿಲ್ಲಿಸಲಾಗುತ್ತಿದ್ದು, ಟ್ರಾಫಿಕ್‌ ಜಾಮ್‌ ಉಂಟಾಗುತ್ತಿದೆ.
– ಬೋಂದೆಲ್‌-ಪಚ್ಚನಾಡಿ ನಡುವಣ ಜನ ಸಂಚಾರ ಅಧಿಕವಾಗಿರುವ ಸಮಯದಲ್ಲಿ ಬಸ್‌ ಇಲ್ಲ.

ಟಾಪ್ ನ್ಯೂಸ್

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-sdssd

Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.