Parliament: ಹಳೇ ಸಂಸತ್‌ ಭವನಕ್ಕೆ ಇಂದು ಭಾವನಾತ್ಮಕ ವಿದಾಯ-ಇಂದಿನಿಂದ ವಿಶೇಷ ಅಧಿವೇಶನ

ಹಳೇ ಕಟ್ಟಡದಲ್ಲಿ ಸೋಮವಾರ ಕಡೇ ಅಧಿವೇಶನ- ನಾಳೆಯಿಂದ ಹೊಸ ಭವನದಲ್ಲಿ ಸೆಷನ್‌

Team Udayavani, Sep 17, 2023, 8:48 PM IST

PARLIAMENT

ನವದೆಹಲಿ: ಭಾರತದ ಇತಿಹಾಸದಲ್ಲಿ ನಾನಾ ಕ್ರಾಂತಿಕಾರಕ ಬದಲಾವಣೆಗಳಿಗೆ ಸಾಕ್ಷಿಯಾಗಿದ್ದ 96 ವರ್ಷ ಹಿಂದಿನ ಸಂಸತ್‌ ಕಟ್ಟಡದಲ್ಲಿ ಸೋಮವಾರ ಕಡೇ ಅಧಿವೇಶನ ನಡೆಯಲಿದೆ. ನಾಲ್ಕು ತಿಂಗಳ ಹಿಂದಷ್ಟೇ ಹೊಸ ಕಟ್ಟಡದ ಉದ್ಘಾಟನೆಯಾಗಿದ್ದು, ಮಂಗಳವಾರದಿಂದ ಹೊಸ ಸಂಸತ್‌ ಭವನದಲ್ಲಿ ವಿಶೇಷ ಅಧಿವೇಶನದ ಕಾರ್ಯಕಲಾಪಗಳು ಮುಂದುವರಿಯಲಿವೆ.

ಸೋಮವಾರ ಹಳೇ ಕಟ್ಟಡದಲ್ಲಿ 5 ದಿನಗಳ ವಿಶೇಷ ಅಧಿವೇಶನ ಆರಂಭವಾಗಲಿದ್ದು, ಮೊದಲ ದಿನ 75 ವರ್ಷಗಳ ಸಂಸತ್‌ ಭವನದ ಇತಿಹಾಸದ ಬಗ್ಗೆ ಚರ್ಚೆಯಾಗಲಿದೆ. ಈ ಕಟ್ಟಡ 1927ರ ಜ.18ರಂದು ಲಾರ್ಟ್‌ ಇರ್ವಿನ್‌ರಿಂದ ಉದ್ಘಾಟನೆಯಾಗಿದ್ದು, ವಸಾಹತುಶಾಹಿ ಇತಿಹಾಸ, ಎರಡನೇ ಜಾಗತಿಕ ಮಹಾಯುದ್ಧ, ಸ್ವಾತಂತ್ರೊéàತ್ಸವದ ಸಂಭ್ರಮ, ಸಂವಿಧಾನದ ಅಳವಡಿಕೆ ಮತ್ತು ಹಲವಾರು ಪ್ರಮುಖ ಮಸೂದೆಗಳ ಅಂಗೀಕಾರಕ್ಕೆ ಸಾಕ್ಷಿಯಾಗಿದೆ.

ಕಡೇ ದಿನ, ಕಡೇ ಅಧಿವೇಶನ

ಇಂಥ ಹಲವಾರು ಮೈಲುಗಲ್ಲುಗಳಿಗೆ ಸಾಕ್ಷಿಯಾಗಿರುವ ಈ ಕಟ್ಟಡದಲ್ಲಿ ಹೆಚ್ಚು ಕಡಿಮೆ ಸೋಮವಾರವೇ ಕಡೇ ದಿನದ ಅಧಿವೇಶನ. ಆದರೆ, ಇದು ವಿಶೇಷ ಚರ್ಚೆಗೆ ಸಾಕ್ಷಿಯಾಗಲಿದೆ. ಉಳಿದಂತೆ ಯಾವುದೇ ಸಾಮಾನ್ಯ ಕಾರ್ಯಕಲಾಪಗಳು ನಡೆಯುವುದಿಲ್ಲ. ಅಧಿಕೃತವಾಗಿ ಮುಂಗಾರು ಅಧಿವೇಶನವೇ ಹಳೇ ಕಟ್ಟಡದ ಕಡೇ ಅಧಿವೇಶನದಂತಾಗುತ್ತದೆ. ಜು.20ರಿಂದ ಆರಂಭವಾಗಿದ್ದು, ಆ.11ರವರೆಗೆ ನಡೆಯಿತು. ಈ ಸಂದರ್ಭದಲ್ಲಿ 23 ದಿನ 17 ಕಲಾಪಗಳು ನಡೆದಿದ್ದವು.

ಮುಂಗಾರು ಅಧಿವೇಶನದಲ್ಲಿ ಭಾರತೀಯ ನ್ಯಾಯ ಸಂಹಿತಾ, ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ ಮತ್ತು ಭಾರತೀಯ ಸಾಕ್ಷ್ಯ ಮಸೂದೆಗಳು ಮಂಡನೆಯಾಗಿದ್ದು, ಇವುಗಳನ್ನು ಸಂಸದೀಯ ಸಮಿತಿಗಳಿಗೆ ಒಪ್ಪಿಸಲಾಗಿದೆ. ಇವುಗಳನ್ನು ಬಿಟ್ಟರೆ, ದೆಹಲಿ ಎಲ್‌ಜಿಗೆ ಹೆಚ್ಚಿನ ಅಧಿಕಾರ, ಲಿಥಿಯಂ ರೀತಿಯ ಪ್ರಮುಖ ಖನಿಜಗಳ ಗಣಿಗಾರಿಕೆಗೆ ಒಪ್ಪಿಗೆ, ಖಾಸಗಿ ದತ್ತಾಂಶ ಮಸೂದೆಗಳು ಅನುಮೋದನೆ ಪಡೆದಿದ್ದವು.

ಕಟ್ಟಡದ ಮೈಲುಗಲ್ಲುಗಳು

  1. ನೆಹರು ಅವರ ಉತ್ತಮ ಭವಿಷ್ಯದ ಸಂಕಲ್ಪ(ದಿ ಟ್ರಿಸ್ಟ್‌ ವಿತ್‌ ಡೆಸ್ಟಿನಿ) ಭಾಷಣ
  2. 1946ರ ಡಿ.9ರಂದು ಸಂವಿಧಾನ ಸಭೆಯ ಮೊದಲ ಸಮಾಲೋಚನೆ
  3. 1949ರ ನ.26ರಂದು ಸೆಂಟ್ರಲ್‌ ಹಾಲ್‌ನಲ್ಲಿ ಸಂವಿಧಾನಕ್ಕೆ ಒಪ್ಪಿಗೆ
  4. ಹಲವಾರು ಪ್ರಮುಖ ಮಸೂದೆಗಳಿಗೆ ಅನುಮೋದನೆ

ಮಹಿಳಾ ಮಸೂದೆಗೆ ಒತ್ತಾಯ

ಸೋಮವಾರದಿಂದ 5 ದಿನಗಳ ವಿಶೇಷ ಅಧಿವೇಶನ ಆರಂಭವಾಗಲಿರುವ ಹಿನ್ನೆಲೆಯಲ್ಲಿ ಭಾನುವಾರ ಸಂಜೆ ಸರ್ವಪಕ್ಷಗಳ ಸಭೆ ನಡೆಯಿತು. ಈ ಅಧಿವೇಶನದಲ್ಲಿ ಮಹಿಳಾ ಮಸೂದೆಗೆ ಒಪ್ಪಿಗೆ ಪಡೆಯುವಂತೆ ಕಾಂಗ್ರೆಸ್‌ ಸೇರಿದಂತೆ ಪ್ರತಿಪಕ್ಷಗಳ ನಾಯಕರು ಆಗ್ರಹಿಸಿದರು. ಸಭೆ ಬಳಿಕ ಮಾತನಾಡಿದ ಎನ್‌ಸಿಪಿ ನಾಯಕ ಪ್ರಫ‌ುಲ್‌ ಪಟೇಲ್‌, ಮಹಿಳಾ ಮಸೂದೆಗೆ ಒಪ್ಪಿಗೆ ಪಡೆಯುವಂತೆ ಮನವಿ ಮಾಡಲಾಗಿದೆ ಎಂದರು. ಜತೆಗೆ ಗಣೇಶ ಚತುರ್ಥಿ ದಿನ ಹೊಸ ಸಂಸತ್‌ ಭವನ ಉದ್ಘಾಟನೆಯಾಗುತ್ತಿರುವುದು ಸಂತಸ ತಂದಿದೆ ಎಂದು ಹೇಳಿದರು. ಕಾಂಗ್ರೆಸ್‌ ನಾಯಕ ಅಧೀರ್‌ ರಂಜನ್‌ ಚೌಧರಿ ಅವರೂ, ಮಹಿಳಾ ಮಸೂದೆಗೆ ಆಗ್ರಹಿಸಿರುವುದಾಗಿ ತಿಳಿಸಿದರು.

 

ಟಾಪ್ ನ್ಯೂಸ್

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Rahul Gandhi 3

PM Modiಗೆ ನಾಜಿ ಪ್ರಚಾರಕ ಗೋಬೆಲ್ಸ್‌ನೇ ಸ್ಫೂರ್ತಿ: ಕಾಂಗ್ರೆಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.