ಅದಮಾರು ಮಠದ ಪರ್ಯಾಯ ಆರಂಭ


Team Udayavani, Jan 19, 2020, 3:07 AM IST

adamau

ಉಡುಪಿ: ಉಡುಪಿ ಶ್ರೀಕೃಷ್ಣ ಮಠದಲ್ಲಿ ಎರಡು ವರ್ಷಗಳಿಗೊಮ್ಮೆ ನಡೆಯುವ ಪರ್ಯಾಯ ಉತ್ಸವದಲ್ಲಿ ಅದಮಾರು ಮಠದ ಶ್ರೀ ಈಶ ಪ್ರಿಯತೀರ್ಥ ಶ್ರೀಪಾದರು ಶನಿವಾರ ಮುಂಜಾವ ಶ್ರೀಕೃಷ್ಣ ದೇವರ ಪೂಜಾಕೈಂಕರ್ಯದ ಸಂಕಲ್ಪ ಮಾಡಿದರು. 1,522ರಲ್ಲಿ ಎರಡು ವರ್ಷಗಳ ಪರ್ಯಾಯ ಪೂಜಾ ಕ್ರಮ ಆರಂಭವಾಗಿದ್ದು, ಈಗ 250ನೆಯ ಪರ್ಯಾಯ ಪೂಜಾವಧಿಯ ಅಧಿಕಾರ ಹಸ್ತಾಂತರಕ್ಕೆ ಸಂಬಂಧಿಸಿದಂತೆ ವಿವಿಧ ಧಾರ್ಮಿಕ ವಿಧಿಗಳು ಶನಿವಾರ ಬೆಳಗಿನ ಜಾವ ನಡೆದವು.

ಪರ್ಯಾಯದ ವಿಧಿ, ವಿಧಾನಗಳು
* ಶುಕ್ರವಾರ ಮಧ್ಯರಾತ್ರಿಯ ಬಳಿಕ ಕಾಪು ದಂಡತೀರ್ಥದಲ್ಲಿ ಪವಿತ್ರ ಸ್ನಾನ ಮಾಡಿ ಬಂದ ಶ್ರೀ ಈಶಪ್ರಿಯತೀರ್ಥರು, ಉಡುಪಿ ಜೋಡುಕಟ್ಟೆ ಮಂಟಪದಲ್ಲಿ ಪಟ್ಟದ ದೇವರ ಪೂಜೆ ನಡೆಸಿದರು.

* ಬಳಿಕ, ಪರ್ಯಾಯ ಮೆರವಣಿಗೆ ಆರಂಭಗೊಂಡಿತು. ವಿವಿಧ ಮಠಾಧೀಶರೂ ಮೆರವಣಿಗೆಯಲ್ಲಿ ಸಾಗಿ ಬಂದರು.

* ಮೆರವಣಿಗೆ ಶನಿವಾರ ಬೆಳಗ್ಗೆ ರಥಬೀದಿಯನ್ನು ತಲುಪಿದಾಗ, ಮೇನೆಯಿಂದ ಇಳಿದ ಶ್ರೀಪಾದರು ಹಾಸುಗಂಬಳಿಯ ಮೇಲೆ ನಡೆದುಕೊಂಡು ಬಂದು ಕನಕನಕಿಂಡಿಯಲ್ಲಿ ಶ್ರೀಕೃಷ್ಣ ದೇವರ ದರ್ಶನ ಪಡೆದರು. ಅಲ್ಲಿ ಶಿಬರೂರು ವಾಸುದೇವ ಆಚಾರ್ಯರು ಎರಡು ವರ್ಷಗಳ ಪರ್ಯಾಯ ಪೂಜಾ ವ್ರತವನ್ನು ಕೈಗೊಳ್ಳುವ ಸಂಕಲ್ಪವನ್ನು ಸ್ವಾಮೀಜಿಯವರಿಂದ ಮಾಡಿಸಿದರು. ಬಳಿಕ, ನವಗ್ರಹದಾನಗಳನ್ನು ನೀಡಲಾಯಿತು.

* ಅಲ್ಲಿಂದ ಶ್ರೀಪಾದರು ಚಂದ್ರಮೌಳೀಶ್ವರ, ಅನಂತೇಶ್ವರ ದೇಗುಲಗಳಿಗೆ ತೆರಳಿ ದೇವರ ದರ್ಶನ ಪಡೆದರು. ಅನಂತೇಶ್ವರ ದೇವಸ್ಥಾನದೊಳಗೆ ಇರುವ ಮಾಧ್ವರು ಕೊನೆಯದಾಗಿ ಕಾಣಿಸಿಕೊಂಡ ಸ್ಥಳದಲ್ಲಿ ಪ್ರಾರ್ಥಿಸಿದರು. ಶ್ರೀಪಾದರ ದೇವರ ದರ್ಶನದ ವೇಳೆ ಚಂದ್ರಮೌಳೀಶ್ವರ ಮತ್ತು ಅನಂತೇಶ್ವರನ ಸನ್ನಿಧಿಯಲ್ಲಿ ಆಯಾ ದೇವತಾ ಧ್ಯಾನಶ್ಲೋಕಗಳನ್ನು ಅರ್ಚಕರು ಪಠಿಸಿದರು.

ಪಲಿಮಾರು ಶ್ರೀಗಳಿಂದ ನೈರ್ಮಲ್ಯ ವಿಸರ್ಜನ ಪೂಜೆ: ಶ್ರೀಕೃಷ್ಣ ಮಠದಲ್ಲಿ ನಿರ್ಗಮನ ಪರ್ಯಾಯ ಪೀಠಾಧೀಶ ಪಲಿಮಾರು ಮಠದ ಶ್ರೀ ವಿದ್ಯಾಧೀಶತೀರ್ಥರು ಶುಕ್ರವಾರ ಮಧ್ಯರಾತ್ರಿಯಿಂದಲೇ ಪರ್ಯಾಯ ಪೀಠದಲ್ಲಿ ಕುಳಿತುಕೊಂಡು, ಭಕ್ತರಿಗೆ ಪ್ರಸಾದ ವಿತರಿಸಿದರು. ಪ್ರಾತಃಕಾಲ ಸ್ನಾನ ಮಾಡಿ, ಶ್ರೀಕೃಷ್ಣನಿಗೆ ನೈರ್ಮಲ್ಯ ವಿಸರ್ಜನೆ ಪೂಜೆ ನಡೆಸಿದರು. ಅದಮಾರು ಮಠದ ವಿಶ್ವಪ್ರಿಯತೀರ್ಥರೂ ಉಪಸ್ಥಿತರಿದ್ದು, ಪೂಜೆಗೆ ಸಹಕರಿಸಿದರು.

ಅದಮಾರು ಕಿರಿಯ ಶ್ರೀಗಳಿಗೆ ಸ್ವಾಗತ: ಈಶಪ್ರಿಯತೀರ್ಥರು ಶ್ರೀಕೃಷ್ಣ ಮಠವನ್ನು ಪ್ರವೇಶಿಸುವಾಗ ಪಲಿಮಾರು ಮಠದ ವಿದ್ಯಾಧೀಶತೀರ್ಥ ಶ್ರೀಪಾದರು ಇದಿರುಗೊಂಡು ಮಠದೊಳಗೆ ಕರೆದೊಯ್ದರು. ಮಧ್ವಸರೋವರದಲ್ಲಿ ಪಾದಪ್ರಾಕ್ಷಾಳನ ನಡೆಸಿದ ಬಳಿಕ ದೇವರ ದರ್ಶನ ಮಾಡಿಸಿದರು. ಶ್ರೀಕೃಷ್ಣಮಠದ ಗರ್ಭಗುಡಿಯ ಹೊರಗೆ ಇರುವ ಆಚಾರ್ಯ ಮಧ್ವರ ಪ್ರತಿಮೆ ಎದುರು ಪಲಿಮಾರು ಮಠಾಧೀಶರು ಅಕ್ಷಯಪಾತ್ರೆ, ಬೀಗದ ಕೀಲಿಗಳನ್ನು ಅದಮಾರು ಮಠದ ಹಿರಿಯ ಮತ್ತು ಕಿರಿಯ ಶ್ರೀಗಳಿಗೆ ಹಸ್ತಾಂತರಿಸಿದರು. ಈ ವೇಳೆ, ಮಂಗಲದ ಸಂಕೇತವಾಗಿ ವೈದಿಕರು ವೇದಗಳ ವಿವಿಧ ಸೂಕ್ತಗಳನ್ನು ಪಠಿಸಿದರು.

ಸರ್ವಜ್ಞ ಪೀಠಾರೋಹಣ: ಸರ್ವಜ್ಞ ಪೀಠಾರೋಹಣ ಮಾಡುವ ಸಂದರ್ಭದಲ್ಲಿ ಮೊದಲಿಗೆ ಪಲಿಮಾರು ಶ್ರೀಪಾದರು ಅದಮಾರು ಹಿರಿಯ ಶ್ರೀಗಳನ್ನು ಪೀಠದಲ್ಲಿ ಕುಳ್ಳಿರಿಸಿದರು. ಬಳಿಕ, ಹಿರಿಯ ಶ್ರೀಗಳು ತಮ್ಮ ಪಟ್ಟಶಿಷ್ಯ ಈಶಪ್ರಿಯತೀರ್ಥರನ್ನು ಪೀಠದಲ್ಲಿ ಕುಳ್ಳಿರಿಸಿದರು. ಅಲ್ಲಿಂದ ನೇರವಾಗಿ ಬಡಗುಮಾಳಿಗೆಯಲ್ಲಿ ನಿರ್ಮಿಸಲಾದ ಅರಳು ಗದ್ದಿಗೆಯಲ್ಲಿ ವಿವಿಧ ಮಠಾಧೀಶರು ಅಲಂಕೃತರಾದರು.

ಕೃಷ್ಣಾಪುರ ಮಠದ ಶ್ರೀ ವಿದ್ಯಾಸಾಗರತೀರ್ಥರು, ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥರು, ಕಾಣಿಯೂರು ಮಠದ ಶ್ರೀ ವಿದ್ಯಾವಲ್ಲಭತೀರ್ಥರು, ಸೋದೆ ಮಠದ ಶ್ರೀ ವಿಶ್ವವಲ್ಲಭತೀರ್ಥರು, ಪಲಿಮಾರು ಮಠದ ಶ್ರೀ ವಿದ್ಯಾಧೀಶತೀರ್ಥರು ಮತ್ತು ಶ್ರೀ ವಿದ್ಯಾರಾಜೇಶ್ವರತೀರ್ಥರಿಗೆ ಶ್ರೀ ಈಶ ಪ್ರಿಯತೀರ್ಥರು ಗಂಧಾದಿ ಉಪಚಾರಗಳನ್ನು ಮಾಡಿದರು.

ಇತರ ಮಠಾಧೀಶರು ಶ್ರೀ ಈಶ ಪ್ರಿಯತೀರ್ಥರಿಗೆ ಪಟ್ಟದ ಕಾಣಿಕೆಯನ್ನು ಸಮರ್ಪಿಸಿದರು. ನೈರ್ಮಲ್ಯ ವಿಸರ್ಜನೆ ಪೂಜೆಯ ಬಳಿಕ ನಡೆಯಬೇಕಾದ ಉಷ:ಕಾಲ ಪೂಜೆ, ಪಂಚಾಮೃತ ಅಭಿಷೇಕ, ಕಲಶಪೂಜೆ ಮೊದಲಾದ ಪೂಜೆಗಳನ್ನು ಇತರ ಮಠಾಧೀಶರು ನಡೆಸಿದರೆ, ಪರ್ಯಾಯ ಪೀಠಸ್ಥ ಶ್ರೀ ಈಶಪ್ರಿಯತೀರ್ಥರು ಅರ್ಚನೆ, ಅವಸರ ಸನಕಾದಿ ಪೂಜೆ, ಮಹಾಪೂಜೆಗಳನ್ನು ಪ್ರಥಮ ಬಾರಿಗೆ ನಡೆಸಿದರು. ಬಳಿಕ ಮಹಾ ಅನ್ನಸಂತರ್ಪಣೆ ನಡೆಯಿತು.

ಅಖಂಡ ಭಜನೆ ಸಮಾಪನ: ಶ್ರೀಕೃಷ್ಣ ಮಠದ ಕನಕಗೋಪುರದ ಬಳಿ ಎರಡು ವರ್ಷಗಳ ಹಿಂದೆ ಜನವರಿ 18ರ ಸೂರ್ಯೋದಯದ ವೇಳೆ ಆರಂಭಗೊಂಡ ಅಖಂಡ ಭಜನ ಕಾರ್ಯಕ್ರಮವು ಶನಿವಾರ ಸೂರ್ಯೋದಯದ ವೇಳೆ ಸಮಾಪನಗೊಂಡಿತು. ಅದಮಾರು ಮಠದ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು ಪಲಿಮಾರು ಮಠದ ಪಟ್ಟದ ದೇವರಾದ ಶ್ರೀ ರಾಮಚಂದ್ರ ದೇವರಿಗೆ ಮಂಗಳಾರತಿ ಬೆಳಗುವ ಮೂಲಕ ಅಖಂಡ ಭಜನೆ ಮುಕ್ತಾಯಗೊಂಡಿತು.

ಪಲಿಮಾರು ಮಠದ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ಮತ್ತು ಶ್ರೀ ವಿದ್ಯಾ ರಾಜೇಶ್ವರತೀರ್ಥ ಶ್ರೀಪಾದರು ಉಪಸ್ಥಿತರಿದ್ದರು. ಸಾವಿರಾರು ಭಜನಾ ಮಂಡಳಿಗಳ ಸದಸ್ಯರು ಹರಿ ನಾಮ ಸಂಕೀರ್ತನ ಯಜ್ಞದಲ್ಲಿ ಪಾಲ್ಗೊಂಡಿದ್ದರು. ತಿರುಪತಿ ಮತ್ತು ಮಂತ್ರಾಲಯ ದಾಸ ಸಾಹಿತ್ಯ ಪ್ರಾಜೆಕ್ಟ್ ಮತ್ತು ಉಡುಪಿ ಜಿಲ್ಲಾ ಭಜನಾ ಮಂಡಳಿಗಳ ಒಕ್ಕೂಟದ ಭಜನಾ ಮಂಡಳಿಗಳ ಸಹಕಾರದಲ್ಲಿ ಕಾರ್ಯಕ್ರಮ ಸಂಪನ್ನಗೊಂಡಿತು.

ಟಾಪ್ ನ್ಯೂಸ್

SS Rajamouli:‌ ಬರಲಿದೆಯಾ ʼRRRʼ ಸೀಕ್ವೆಲ್?: ಜಪಾನ್‌ನಲ್ಲಿ ಸುಳಿವು ಕೊಟ್ಟ ರಾಜಮೌಳಿ

SS Rajamouli:‌ ಬರಲಿದೆಯಾ ʼRRRʼ ಸೀಕ್ವೆಲ್?: ಜಪಾನ್‌ನಲ್ಲಿ ಸುಳಿವು ಕೊಟ್ಟ ರಾಜಮೌಳಿ

Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ‌ ಕಂದಕೂರು

Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ‌ ಕಂದಕೂರು

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ‌ ಕಂದಕೂರು

Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ‌ ಕಂದಕೂರು

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

SS Rajamouli:‌ ಬರಲಿದೆಯಾ ʼRRRʼ ಸೀಕ್ವೆಲ್?: ಜಪಾನ್‌ನಲ್ಲಿ ಸುಳಿವು ಕೊಟ್ಟ ರಾಜಮೌಳಿ

SS Rajamouli:‌ ಬರಲಿದೆಯಾ ʼRRRʼ ಸೀಕ್ವೆಲ್?: ಜಪಾನ್‌ನಲ್ಲಿ ಸುಳಿವು ಕೊಟ್ಟ ರಾಜಮೌಳಿ

Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ‌ ಕಂದಕೂರು

Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ‌ ಕಂದಕೂರು

ಇಂಡಿಯನ್ ಆಯಿಲ್ ಕಂಪನಿಗೆ ನಿರ್ದೇಶಕರಾಗಿ (ಎಚ್‌ಆರ್) ರಶ್ಮಿ ಗೋವಿಲ್ ಅಧಿಕಾರ ಸ್ವೀಕಾರ

ಇಂಡಿಯನ್ ಆಯಿಲ್ ಕಂಪನಿಗೆ ನಿರ್ದೇಶಕರಾಗಿ (ಎಚ್‌ಆರ್) ರಶ್ಮಿ ಗೋವಿಲ್ ಅಧಿಕಾರ ಸ್ವೀಕಾರ

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.