ಸರಳ, ಸಾಂಪ್ರದಾಯಿಕತೆ ಮೈವೆತ್ತ ಶ್ರೀ ವಿದ್ಯಾಸಾಗರತೀರ್ಥರ ಚತುರ್ಥ ಪರ್ಯಾಯ

 ಉಡುಪಿ ಶ್ರೀಕೃಷ್ಣ ಮಠದಲ್ಲಿ  ಇಂದಿನಿಂದ 251ನೇ ಪರ್ಯಾಯ ಪೂಜಾ ಕೈಂಕರ್ಯ ಆರಂಭ

Team Udayavani, Jan 18, 2022, 6:00 AM IST

ಸರಳ, ಸಾಂಪ್ರದಾಯಿಕತೆ ಮೈವೆತ್ತ ಶ್ರೀ ವಿದ್ಯಾಸಾಗರತೀರ್ಥರ ಚತುರ್ಥ ಪರ್ಯಾಯ

ಉಡುಪಿ: ಶ್ರೀ ಕೃಷ್ಣ ಮಠದ ದ್ವೈವಾರ್ಷಿಕ ಪರ್ಯಾಯ ಪೂಜೆಯ ಇತಿಹಾಸದಲ್ಲಿ 251ನೇ ಪರ್ಯಾಯ ಪೂಜೆ, ಶ್ರೀ ಕೃಷ್ಣಾಪುರ ಮಠದ ಸರದಿಯಲ್ಲಿ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರ ಚತುರ್ಥ ಪರ್ಯಾಯ ಪೂಜೆ ಸನ್ನಿಹಿತವಾದ ಸಂದರ್ಭವನ್ನು ಕೃಷ್ಣ ನಗರಿ ಸಂತಸದಿಂದ ಸಂಭ್ರಮಿಸಿತು.

ಸರ್ವಜ್ಞ ಪೀಠಾರೋಹಣಗೈಯುವ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರು ಕಾಪು ಸಮೀಪದ ದಂಡತೀರ್ಥದಲ್ಲಿ ಪವಿತ್ರ ಸ್ನಾನ ಮಾಡಿ, ಜೋಡುಕಟ್ಟೆಗೆ ಆಗಮಿಸಿದರು. ಅಲ್ಲಿ ಪಟ್ಟದ ದೇವರಿಗೆ ಪೂಜೆ ಸಲ್ಲಿಸಿ, ಸಾಂಪ್ರದಾಯಿಕತೆಯೇ ಮೈವೆತ್ತಿದ್ದ ಮೆರವಣಿಗೆಯ ಮೂಲಕ ರಥಬೀದಿ ಪ್ರವೇಶಿಸಿದರು. ಬಳಿಕ ಕನಕನ ಕಿಂಡಿಯಲ್ಲಿ ದೇವರ ದರ್ಶನಗೈದರು. ಪರ್ಯಾಯ ಪೀಠಾರೋಹಣದ ಬಳಿಕದ ವಿಧಿವಿಧಾನಗಳು ನೂತನ ಪರ್ಯಾಯ ಶ್ರೀಗಳ ಆಶಯದಂತೆ ಸರಳ, ಸಾಂಪ್ರದಾಯಿಕ ವೈಭವದಲ್ಲಿ ಜರಗಿದವು.

ಪೂರ್ಣಪ್ರಜ್ಞ ಎಂಬ ಅಭಿಧಾನವುಳ್ಳ ಮಧ್ವಾಚಾರ್ಯರು ಉಡುಪಿಯಲ್ಲಿ ಶ್ರೀಕೃಷ್ಣನನ್ನು ಪ್ರತಿಷ್ಠಾಪಿಸಿ ಪೂಜೆಯನ್ನು ನಡೆಸುವ ಅಧಿಕಾರವನ್ನು ತಮ್ಮ ಎಂಟು ಮಂದಿ ಯತಿಶಿಷ್ಯರಿಗೆ ನೀಡಿದ್ದರು. ಎಂಟು ಮಠಗಳ ಈ ಪೀಠಾಧಿಪತಿಗಳ ನಡುವೆ ಶ್ರೀಕೃಷ್ಣ ಪೂಜೆಯ ಅಧಿಕಾರ ಹಸ್ತಾಂತರ ಪ್ರಕ್ರಿಯೆಯೇ ಪರ್ಯಾಯ.

1522ರಲ್ಲಿ ಆರಂಭವಾದ ಪರ್ಯಾಯ ವ್ಯವಸ್ಥೆ ಪ್ರತೀ 16 ವರ್ಷಗಳಿಗೆ ಒಮ್ಮೆಯ ಚಕ್ರವನ್ನು ಹಾದು ಈಗ 32ನೇ ಚಕ್ರದಲ್ಲಿದೆ. 32ನೆಯ ಚಕ್ರದಲ್ಲಿ ಎರಡನೆಯದಾದ 250ನೇ ಅದಮಾರು ಪರ್ಯಾಯ ಮುಗಿದು ಮೂರನೆಯದಾದ 251ನೇ ಪರ್ಯಾಯ ಆರಂಭಗೊಳ್ಳುತ್ತಿದೆ. 501ನೇ ವರ್ಷಕ್ಕೆ ಪಾದಾರ್ಪಣೆಯಾಗುತ್ತಿದೆ. ಶ್ರೀ ಅದಮಾರು ಮಠದ 31ನೇ ಯತಿ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಪರ್ಯಾಯ ಪೀಠದಿಂದ ನಿರ್ಗಮಿಸಿ ಶ್ರೀ ಕೃಷ್ಣಾಪುರ ಮಠದ 34ನೇ ಯತಿ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರು ಪೀಠವನ್ನೇರುವ ಕ್ಷಣವನ್ನು ಉಡುಪಿ ಮತ್ತು ಹತ್ತೂರುಗಳ ಭಕ್ತರು ಕಣ್ತುಂಬಿಕೊಂಡಿದ್ದಾರೆ.

ಸರಳ, ಸಾಂಪ್ರದಾಯಿಕತೆಗೆ ಆದ್ಯತೆ
ನೂತನ ಪರ್ಯಾಯ ಪೀಠಾಧಿಪತಿ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರು ತಮ್ಮ ಗುರುಗಳಾದ ಶ್ರೀ ವಿಶ್ವೋತ್ತಮ ತೀರ್ಥರಂತೆಯೇ ಸಾಂಪ್ರದಾಯಿಕತೆ, ಏಕಾಂತೋಪಾಸನೆಯಲ್ಲಿ ಹೆಚ್ಚು ಆಸಕ್ತರು. ಅವರ ಆಶಯದಂತೆ ಪರ್ಯಾಯ ಮೆರವಣಿಗೆ, ಪೂಜಾಧಿಕಾರ ಹಸ್ತಾಂತರ, ಪರ್ಯಾಯ ದರ್ಬಾರ್‌ ಇತ್ಯಾದಿ ವಿಧಿವಿಧಾನಗಳು ಸರಳ ಆದರೆ ಸಾಂಪ್ರದಾಯಿಕವಾಗಿ ನೆರವೇರಿದವು. ಸರಕಾರದ ಕೋವಿಡ್‌ ನಿಯಮಗಳ ಪಾಲನೆಗೆ ಆದ್ಯತೆ ನೀಡಲಾಗಿತ್ತು.

ಟಾಪ್ ನ್ಯೂಸ್

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.