ಕನ್ನಡ ನಾಮಫ‌ಲಕ ತಿದ್ದುಪಡಿ ವಿಧೇಯಕ ಅಂಗೀಕಾರ-ಸ್ಥಳದಲ್ಲೇ ದಂಡ ವಿಧಿಸುವ ಕಾನೂನು ಬೇಕು:ಅಶೋಕ್‌


Team Udayavani, Feb 15, 2024, 9:32 PM IST

r ashok imppppppppp

ವಿಧಾನಸಭೆ: ಸರ್ಕಾರದಿಂದ ಅನುಮತಿ ಪಡೆದ ವ್ಯಾವಹಾರಿಕ ಸ್ಥಳಗಳ ನಾಮಫ‌ಲಕದಲ್ಲಿ ಶೇ.60 ರಷ್ಟು ಕನ್ನಡ ಕಡ್ಡಾಯವಾಗಿ ಪ್ರದರ್ಶಿಸಬೇಕೆಂಬ ಕಾನೂನು ಜಾರಿಗೊಳಿಸುವುದಕ್ಕೆ ಪೂರಕವಾಗಿ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ವಿಧೇಯಕ-2024ಕ್ಕೆ ವಿಧಾನಸಭೆಯಲ್ಲಿ ಗುರುವಾರ ಅನುಮೋದನೆ ದೊರೆಯಿತು.

ವಿಧಾನಪರಿಷತ್ತಿನಲ್ಲಿ ಈ ವಿಧೇಯಕಕ್ಕೆ ಅನುಮೋದನೆ ದೊರೆತು ರಾಜ್ಯಪಾಲರ ಅಂಕಿತ ಬಿದ್ದ ಬಳಿಕ ಕಾನೂನಾಗಿ ಜಾರಿಗೊಳ್ಳಲಿದ್ದು, ರಾಜ್ಯ ಸರ್ಕಾರದ ಇಲಾಖೆಗಳು, ಉದ್ಯಮಗಳು, ಸ್ವಾಯತ್ತ ಸಂಸ್ಥೆಗಳು, ಸಹಕಾರ ಮತ್ತು ಸಾರ್ವಜನಿಕ ಉದ್ಯಮಗಳು, ಬ್ಯಾಂಕ್‌, ಇತರೆ ಹಣಕಾಸು ಸಂಸ್ಥೆಗಳು, ಸರ್ಕಾರದಿಂದ ಅನುಮತಿ ಪಡೆದ ಖಾಸಗಿ ಕೈಗಾರಿಕೆಗಳು ಮತ್ತು ವಿಶ್ವವಿದ್ಯಾಲಯಗಳ ಫಲಕಗಳಲ್ಲಿ ಕಡ್ಡಾಯವಾಗಿ ಕನ್ನಡ ಭಾಷೆಯನ್ನು ಬಳಸಬೇಕು. ನಾಮಫಲಕಗಳ ಒಟ್ಟಾರೆ ವಿಸ್ತೀರ್ಣದಲ್ಲಿ ಕನ್ನಡ ಭಾಷೆಯನ್ನು ಮೇಲ್ಭಾಗದಲ್ಲಿ ಶೇ.60 ರಷ್ಟು ಪ್ರದರ್ಶಿಸುವುದು ಕಡ್ಡಾಯ ಮಾಡಲಾಗಿದೆ. ಶೇ.40ರಷ್ಟು ಇತರ ಭಾಷೆಯನ್ನು ಕೆಳಭಾಗದಲ್ಲಿ ಬಳಸಬಹುದಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಮಾಹಿತಿ ನೀಡಿದರು.

ಇದಲ್ಲದೆ, ಕಾನೂನು ಜಾರಿ ಸಮಿತಿಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕರನ್ನು ಕಾರ್ಯಭಾರದ ನಿಮಿತ್ತ ಸಂಚಾಲಕರ ಬದಲು ಸದಸ್ಯರನ್ನಾಗಿ ಮಾಡಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಯನ್ನು ಸಂಚಾಲಕರನ್ನಾಗಿ ಮಾಡಲೂ ವಿಧೇಯಕದಲ್ಲಿ ಅವಕಾಶ ಮಾಡಿಕೊಡಲಾಗಿದೆ.

ಸ್ಥಳದಲ್ಲೇ ದಂಡ, ಪರವಾನಗಿ ರದ್ದು: ವಿಧೇಯಕದ ಕುರಿತು ಮಾತನಾಡಿದ ವಿಪಕ್ಷ ನಾಯಕ ಆರ್‌.ಅಶೋಕ, ಬಹುರಾಷ್ಟ್ರೀಯ ಕಂಪನಿಗಳು, ಮಾಲ್‌ಗ‌ಳು ಕಾನೂನು ಪಾಲನೆ ಮಾಡುತ್ತವೆಯೇ ಎನ್ನುವ ಪ್ರಶ್ನೆ ಇದೆ. ಅವರು ನೋಟಿಸ್‌, ನ್ಯಾಯಾಲಯಗಳಿಗೂ ಹೆದರುವುದಿಲ್ಲ. ಸ್ಥಳದಲ್ಲೇ ದಂಡ ವಿಧಿಸುವ ಕಾನೂನು ತರಬೇಕು ಎಂದು ಆಗ್ರಹಿಸಿದರು.

ನಿಯಮ ರಚಿಸುವಾಗ ದಂಡ ವಿಧಿಸುವ ಹಾಗೂ ಪರವಾನಗಿ ರದ್ದುಪಡಿಸುವ ಅಂಶಗಳನ್ನೂ ಸೇರಿಸುವುದಾಗಿ ಸಚಿವ ತಂಗಡಗಿ ಭರವಸೆ ನೀಡಿದರು. ಇದಕ್ಕಾಗಿ ಜಾರಿ ದಳವನ್ನೂ ರಚಿಸಿ, ಪೊಲೀಸರನ್ನೂ ಅದರಲ್ಲಿ ಸೇರಿಸಲಾಗುತ್ತದೆ. ಕನ್ನಡ ಭಾಷೆಯ ಬಳಕೆ ಕುರಿತು ಯಾವುದೇ ವ್ಯಕ್ತಿ ದೂರು ನೀಡಲು ಕನ್ನಡ ಕಣ್ಗಾವಲು ಎಂಬ ಆಪ್‌ ರೂಪಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ರಾಜ್ಯಪಾಲರು ಕನ್ನಡ ವಿರೋಧಿಯಲ್ಲ
ಈ ತಿದ್ದುಪಡಿ ವಿಧೇಯಕವನ್ನು ಸುಗ್ರೀವಾಜ್ಞೆ ಮೂಲಕ ಹೊರಡಿಸಲು ರಾಜ್ಯಪಾಲರಿಗೆ ಕಳುಹಿಸಿದ್ದೆವು. ಕನ್ನಡ ಭಾಷೆಯ ಬಗೆಗಿನ ಅಗೌರವದಿಂದಾಗಲಿ ಅಥವಾ ಯಾವುದೇ ಬೇರೆ ರೀತಿಯ ಭಾವನೆಯಿಂದ ಹಿಂತಿರುಗಿಸಿರುವುದಿಲ್ಲ. ಸದನದ ದಿನಾಂಕ ಘೋಷಣೆಯಾದ ಕಾರಣ ಸದನದಲ್ಲೇ ಮಂಡನೆಯಾಗಲಿ ಎಂಬ ಸದುದ್ದೇಶದಿಂದ ಹಿಂತಿರುಗಿಸಿ¨ªಾರೆ. ಆ ಬಗ್ಗೆ ತಪ್ಪು ಕಲ್ಪನೆ ಜನರಿಗೆ ಹೋಗುವುದು ಬೇಡ ಎಂದು ಪ್ರತಿಪಕ್ಷ ನಾಯಕ ಆರ್‌. ಅಶೋಕ ಪ್ರಸ್ತಾಪಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ರಾಜ್ಯಪಾಲರ ನಡೆಯ ಬಗ್ಗೆ ಯಾವುದೇ ಆಕ್ಷೇಪ ಇಲ್ಲ. ನಾನೂ ಮಾಧ್ಯಮದವರಿಗೆ ರಾಜ್ಯಪಾಲರು ಯಾವುದೇ ಆಕ್ಷೇಪ ಅಥವಾ ವಿರೋಧ ವ್ಯಕ್ತಪಡಿಸಿ, ವಿಧೇಯಕವನ್ನು ಹಿಂತಿರುಗಿಸಿರುವುದಿಲ್ಲ. ಬದಲಾಗಿ ಸದನದ ಕಲಾಪದ ದಿನಾಂಕ ಪ್ರಕಟಣೆಯಾಗಿರುವುದರಿಂದ ಸದನದಲ್ಲೇ ಮಂಡನೆಯಾಗಿಲಿ ಎಂಬ ಸದುದ್ದೇಶದಿಂದಲೇ ವಿಧೇಯಕ ಹಿಂತಿರುಗಿಸಿದ್ದಾರೆ ಎಂದು ಹೇಳಿದ್ದೇನೆ. ಈ ಬಗ್ಗೆ ಯಾವುದೇ ಆಕ್ಷೇಪ ನಮಗಿಲ್ಲ ಎಂದು ಸ್ಪಷ್ಟನೆ ನೀಡಿದರು.

ಸಹಕಾರ ಸಂಸ್ಥೆಗಳಲ್ಲಿ ಮೀಸಲಾತಿ
ಬೆಂಗಳೂರು: ಪ್ರಾಥಮಿಕ ಸಹಕಾರ ಸಂಘಗಳ ಆಡಳಿತ ಮಂಡಳಿಯಲ್ಲಷ್ಟೇ ಅಲ್ಲದೆ, ಮಾಧ್ಯಮಿಕ, ಫೆಡರಲ್‌ ಮತ್ತು ಅಪೆಕ್ಸ್‌ ಸಹಕಾರ ಸಂಘ ಹಾಗೂ ಸೌಹಾರ್ದ ಸಹಕಾರಿ ಸಂಘಗಳ ಆಡಳಿತ ಮಂಡಳಿಗಳಲ್ಲೂ ಪರಿಶಿಷ್ಟ ಜಾತಿ, ಪಂಗಡ, ಹಿಂದುಳಿದ ವರ್ಗ ಹಾಗೂ ಮಹಿಳೆಯರಿಗೆ ಮೀಸಲಾತಿ ಕಲ್ಪಿಸುವ ಸಂಬಂಧ ರಾಜ್ಯ ಸರ್ಕಾರ ಇತ್ತೀಚೆಗಷ್ಟೇ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಿತ್ತು. ಇದಕ್ಕೆ ಕಾನೂನಿನ ರೂಪ ನೀಡುವ ಸಲುವಾಗಿ ಕರ್ನಾಟಕ ಸಹಕಾರ (ತಿದ್ದುಪಡಿ) ವಿಧೇಯಕ ಹಾಗೂ ಕರ್ನಾಟಕ ಸೌಹಾರ್ದ ಸಹಕಾರಿ (ತಿದ್ದುಪಡಿ) ವಿಧೇಯಕ-2024ನ್ನು ಗುರುವಾರ ವಿಧಾನಸಭೆಯಲ್ಲಿ ಮಂಡಿಸಿದೆ.

 

ಟಾಪ್ ನ್ಯೂಸ್

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.