ಕನ್ನಡ ಶುದ್ಧ ಪ್ರಯೋಗ ಯಕ್ಷಗಾನದ ಹಿರಿಮೆ: ಮಹಾಬಲೇಶ್ವರ
ಪಾತಾಳ ವೆಂಕಟರಮಣ ಭಟ್ ಅವರಿಗೆ ಯಕ್ಷಾಂಗಣ ಗೌರವ ಪ್ರಶಸ್ತಿ ಪ್ರದಾನ
Team Udayavani, Dec 20, 2021, 5:10 AM IST
ಮಂಗಳೂರು: ಸಾಂಸ್ಕೃತಿಕ ಹಿರಿಮೆ ಹಾಗೂ ಶುದ್ಧ ಕನ್ನಡ ಪ್ರಯೋಗ ಯಕ್ಷಗಾನದಲ್ಲಿ ಬಹುವಾಗಿ ಬಳಕೆಯಲ್ಲಿರುವ ಕಾರಣದಿಂದ ಯಕ್ಷಗಾನದ ಶ್ರೇಯಸ್ಸು ಜಗದಗಲ ಪಸರುವಂತಾಗಿದೆ ಎಂದು ಕರ್ಣಾಟಕ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕ ಹಾಗೂ ಸಿಇಒ ಮಹಾಬಲೇಶ್ವರ ಎಂ. ಎಸ್. ಹೇಳಿದರು.
ಕರ್ನಾಟಕ ಯಕ್ಷ ಭಾರತಿ ಪುತ್ತೂರು ಹಾಗೂ ಯಕ್ಷಾಂಗಣ ಮಂಗಳೂರು ವತಿಯಿಂದ ರವಿವಾರ ಮಂಗಳೂರು ವಿ.ವಿ. ಕಾಲೇಜಿನಲ್ಲಿ ನಡೆದ ಕೀರ್ತಿ ಶೇಷ ಕಲಾವಿದರ ಸಂಸ್ಮರಣೆ ಹಾಗೂ ಯಕ್ಷಾಂಗಣ ಪ್ರಶಸ್ತಿ ಪ್ರದಾನ ಕಾರ್ಯ
ಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಯಕ್ಷಗಾನದ ಹಿರಿಯ ಸ್ತ್ರೀವೇಷ
ಧಾರಿ ಪಾತಾಳ ವೆಂಕಟರಮಣ ಭಟ್ ಅವರಿಗೆ ಯಕ್ಷಾಂಗಣ ಗೌರವ ಪ್ರಶಸ್ತಿ ಪ್ರದಾನ ಮಾಡಲಾಯಿತು. ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್ ಅಧ್ಯಕ್ಷತೆ ವಹಿಸಿದ್ದರು. ಕೆನರಾ ಬ್ಯಾಂಕ್ ವಲಯ ಮುಖ್ಯಸ್ಥರು ಹಾಗೂ ಪ್ರಧಾನ ವ್ಯವಸ್ಥಾಪಕ ಯೋಗೀಶ್ ಆಚಾರ್ಯ ಮುಖ್ಯ ಅತಿಥಿಯಾಗಿದ್ದರು.
ಪೂಂಜ-ಪದ್ಯಾಣ ಸಂಸ್ಮರಣೆ ಯನ್ನು ಮಂಗಳೂರು ವಿ.ವಿ. ಡಾ| ದಯಾ ನಂದ ಪೈ, ಸತೀಶ್ ಪೈ ಯಕ್ಷ ಗಾನ ಅಧ್ಯಯನ ಕೇಂದ್ರದ ನಿರ್ದೇಶಕ ಡಾ| ಶ್ರೀಪತಿ ಕಲ್ಲೂರಾಯ ನಡೆಸಿದರು. ಕಲ್ಕೂರ ಪ್ರತಿಷ್ಠಾನ ಅಧ್ಯಕ್ಷ
ಎಸ್.ಪ್ರದೀಪ್ ಕುಮಾರ್ ಕಲ್ಕೂರ,ವಿ.ವಿ. ಸಂಧ್ಯಾ ಕಾಲೇಜಿನ ಪ್ರಾಂಶುಪಾಲ ಡಾ| ಸುಭಾಷಿಣಿ ಶ್ರೀವತ್ಸ, ಬೆಟ್ಟಂಪಾಡಿ ಬಾಳಪ್ಪ ಶೆಟ್ಟಿ ಯಕ್ಷ ಪ್ರತಿಷ್ಠಾನದ ಅಧ್ಯಕ್ಷ ಎಂ. ಸುಂದರ ಶೆಟ್ಟಿ ಬೆಟ್ಟಂಪಾಡಿ, ದಿ| ಪುರುಷೋತ್ತಮ ಪೂಂಜ ಅವರ ಪತ್ನಿ ಶೋಭಾ ಪೂಂಜಾ,ದಿ| ಪದ್ಯಾಣ ಗಣಪತಿ ಭಟ್ ಅವರ ಪುತ್ರ ಸ್ವಸ್ತಿಕ್ ಪದ್ಯಾಣ ಉಪಸ್ಥಿತರಿದ್ದರು. ಯಕ್ಷಾಂಗಣ ಮಂಗಳೂರು ಕಾರ್ಯಾಧ್ಯಕ್ಷ ಭಾಸ್ಕರ ರೈ ಕುಕ್ಕುವಳ್ಳಿ ಸ್ವಾಗತಿಸಿದರು. ಪ್ರ. ಕಾರ್ಯದರ್ಶಿ ತೋನ್ಸೆ ಪುಷ್ಕಳ್ ಕುಮಾರ್ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
Mangaluru ಪೆಟ್ರೋಲ್, ಡೀಸೆಲ್ ತುಟ್ಟಿ : ಪುಷ್ಪಾ ಅಮರನಾಥ್
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
MUST WATCH
ಹೊಸ ಸೇರ್ಪಡೆ
Davanagere; ಗಾಯಿತ್ರಿ ಸಿದ್ದೇಶ್ವರ್ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ