Infosys: ಇನ್ಫೋಸಿಸ್‌ನಿಂದ ವೇತನ ಹೆಚ್ಚಳ


Team Udayavani, Oct 29, 2023, 8:38 PM IST

infosys

ಇನ್ಫೋಸಿಸ್‌ ತನ್ನ ಉದ್ಯೋಗಿಗಳಿಗೆ ವೇತನ ಹೆಚ್ಚಳ ಘೋಷಿಸಿದೆ. ಎರಡನೇ ತ್ತೈಮಾಸಿಕ ಪೂರ್ಣಗೊಂಡಿದ್ದು, ಕಂಪನಿಯ ಲಾಭ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕಂಪನಿ ಈ ನಿರ್ಧಾರ ಪ್ರಕಟಿಸಿದೆ. ಸಾಮಾನ್ಯವಾಗಿ ಜೂನ್‌ ಅಥವಾ ಜುಲೈನಲ್ಲಿ ಕಂಪನಿಗಳು ವೇತನ ಹೆಚ್ಚಳದ ಘೋಷಣೆ ಮಾಡುತ್ತವೆ. ಅದು ಏಪ್ರಿಲ್‌ನಿಂದ ಪೂರ್ವಾನ್ವಯವಾಗುವಂತೆ ಜಾರಿಗೊಳಿಸಲಾಗುತ್ತದೆ. ಆದರೆ ಇನ್ಫೋಸಿಸ್‌ ನವೆಂಬರ್‌ನಿಂದ ಅನ್ವಯವಾಗುವಂತೆ ವೇತನ ಹೆಚ್ಚಳ ಮಾಡಿದೆ. ಇನ್ನೊಂದೆಡೆ, ಟಾಟಾ ಕನ್ಸೆಲ್ಟೆನ್ಸಿ ಸರ್ವೀಸಸ್‌ ಈ ವರ್ಷದ ಮೊದಲ ತ್ತೈಮಾಸಿಕದಲ್ಲೇ ವೇತನ ಹೆಚ್ಚಳದ ಘೋಷಣೆ ಮಾಡಿತು. ಉತ್ತಮವಾಗಿ ಕಾರ್ಯನಿರ್ವಹಿಸಿದ ಉದ್ಯೋಗಿಗಳಿಗೆ ಶೇ.12ರಿಂದ 15ರಷ್ಟು ವೇತನ ಹೆಚ್ಚಳ ಮಾಡಿತು. ಡಿ.1ರಂದು ವಿಪ್ರೊ ವೇತನ ಹೆಚ್ಚಳ ಮಾಡುವ ಸಾಧ್ಯತೆ ಇದೆ.

ಮನೆಯಿಂದ ಕೆಲಸ ಅವಕಾಶ ನೀಡಿದರಷ್ಟೇ ಟ್ರ್ಯಾಕ್‌ ಮಾಡಲು ಅನುಮತಿ
ಸರ್ವೆಯೊಂದರ ಪ್ರಕಾರ, ಮನೆಯಿಂದ ಕೆಲಸ ಮಾಡಲು ಅನುಮತಿಸಿದರೆ ಮಾತ್ರ ತಮ್ಮ ಇ-ಮೇಲ್‌, ಚಾಟ್‌ ಮೆಸೇಜ್‌ ಹಾಗೂ ವರ್ಚುಯಲ್‌ ಸಭೆಯ ಮಾಹಿತಿಯನ್ನು ಟ್ರ್ಯಾಕ್‌ ಮಾಡಲು ತಮ್ಮ ಉದ್ಯೋಗದಾತ ಕಂಪನಿಗಳಿಗೆ ಅನುಮತಿಸಲಾಗುವುದು ಎಂದು ಅರೆಕಾಲಿಕವಾಗಿ ಉದ್ಯೋಗ ಮಾಡುತ್ತಿರುವ ಶೇ.62ರಷ್ಟು ಐಟಿ ಉದ್ಯೋಗಿಗಳು ತಿಳಿಸಿದ್ದಾರೆ. ಸಾಫ್ಟವೇರ್‌ ಕಂಪನಿ ಕ್ವಾಲಿóಕ್ಸ್‌ ಇತ್ತೀಚಿಗೆ ಸರ್ವೆಯೊಂದನ್ನು ನಡೆಸಿತು. ಜುಲೈನಲ್ಲಿ 32 ದೇಶಗಳ 32,000 ಉದ್ಯೋಗಿಗಳಿಂದ ಪ್ರತಿಕ್ರಿಯೆಗಳನ್ನು ಕಲೆಹಾಕಿತು. ಕಚೇರಿಗೆ ಹೋಗುವ ಪೂರ್ಣಾವಧಿ ಉದ್ಯೋಗಿಗಳು ಮತ್ತು ಮನೆಯಲ್ಲಿ ಕೆಲಸ ಮಾಡುವ ಅರೆಕಾಲಿಕ ಉದ್ಯೋಗಿಗಳಿಂದ ಪ್ರತಿಕ್ರಿಯೆ ಪಡೆಯಲಾಗಿದೆ. ಸರ್ವೆ ಪ್ರಕಾರ, ಕಚೇರಿಗೆ ಹೋಗುವ ಶೇ.49ರಷ್ಟು ಉದ್ಯೋಗಿಗಳು ಮಾತ್ರ ಕಂಪನಿಗಳಿಂದ ಡಿಜಿಟಲ್‌ ಕಣ್ಗಾವಲಿಗೆ ಸಮ್ಮತಿ ಸೂಚಿಸಿದ್ದಾರೆ. ಅದೇ ರೀತಿ ಮನೆಯಿಂದಲೇ ಪೂರ್ಣವಧಿ ಕೆಲಸ ಮಾಡುವ ಶೇ.57ರಷ್ಟು ಉದ್ಯೋಗಿಗಳು ಕಣ್ಗಾವಲಿಗೆ ಅನುಮತಿ ಸೂಚಿಸಿದ್ದಾರೆ.

ಉದ್ಯೋಗಿಗಳಿಗೆ ಷೇರು ಹಂಚಿದ ಒರಾಕಲ್‌
ಒರಾಕಲ್‌ ಫೈನಾನ್ಶಿಯಲ್‌ ಸರ್ವೀಸಸ್‌ ಸಾಫ್ಟ್ವೇರ್‌ ಲಿಮಿಟೆಡ್‌ ತನ್ನ ಉದ್ಯೋಗಿಗಳಿಗೆ ತನ್ನ 10,736 ಈಕ್ವಿಟಿ ಷೇರುಗಳನ್ನು ಹಂಚಿದೆ. ಪ್ರತಿ ಈಕ್ವಿಟಿ ಷೇರಿನ ಮುಖ ಬೆಲೆ 5 ರೂ. ಇದೆ. 2014ರ ಒರಾಕಲ್‌ ಫೈನಾನ್ಶಿಯಲ್‌ ಸರ್ವೀಸಸ್‌ ಸಾಫ್ಟವೇರ್‌ ಸ್ಟಾಕ್‌ ಯೋಜನೆಯ ಪ್ರಕಾರ, ಅರ್ಹ ಉದ್ಯೋಗಿಗಳಿಗೆ ಷೇರುಗಳನ್ನು ಹಂಚಿರುವುದಾಗಿ ಕಂಪನಿ ಗುರುವಾರ ಘೋಷಿಸಿದೆ. ಈ ಹಂಚಿಕೆಯ ಮೂಲಕ ಒರಾಕಲ್‌ ಫೈನಾನ್ಶಿಯಲ್‌ ಸರ್ವೀಸಸ್‌ ಸಾಫ್ಟವೇರ್‌ ಲಿಮಿಟೆಡ್‌ನ‌ ಪಾವತಿಸಿದ ಬಂಡವಾಳವು 43,30,67,855 ರೂ.ಗಳಿಗೆ ಏರಿಕೆಯಾಗಿದೆ. ಆದರೆ, ಕಂಪನಿಯ ನಿರ್ದೇಶಕರಿಗೆ ಯಾವುದೇ ಷೇರುಗಳನ್ನು ಹಂಚಿಕೆ ಮಾಡಿಲ್ಲ.

ವೇತನ ಹೆಚ್ಚಳದಲ್ಲಿ ಕಡಿತ
ಐಟಿ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಜಾಗತಿಕ ಮಾರುಕಟ್ಟೆಯಲ್ಲಿ ಹೂಡಿಕೆ ತಗ್ಗಿರುವ ಹಿನ್ನೆಲೆಯಲ್ಲಿ ಈ ವರ್ಷದಲ್ಲಿ ಟೆಕಿಗಳ ವೇತನ ಹೆಚ್ಚಳದ ಮೇಲೂ ಪರಿಣಾಮ ಬೀರಲಿದೆ. ಕಳೆದ ಹಣಕಾಸು ವರ್ಷದಲ್ಲಿ ಐಟಿ ಕಂಪನಿಗಳು ತಮ್ಮ ಉದ್ಯೋಗಿಗಳ ವೇತನವನ್ನು ಶೇ.12ರಿಂದ ಶೇ.18ರವರೆಗೆ ಏರಿಕೆ ಮಾಡಿದ್ದವು. ಆದರೆ ಈ ಹಣಕಾಸು ವರ್ಷದಲ್ಲಿ ಕೇವಲ ಶೇ.6ರಿಂದ ಶೇ.10ರವರೆಗೆ ಮಾತ್ರ ವೇತನ ಹೆಚ್ಚಳ ಮಾಡುವ ಸಾಧ್ಯತೆ ಇದೆ ಎಂದು ತಜ್ಞರು ಅಂದಾಜಿಸಿದ್ದಾರೆ. ಇತ್ತೀಚಿಗೆ ಟಿಸಿಎಸ್‌ ವೇತನ ಹೆಚ್ಚಳದ ಘೋಷಣೆ ಮಾಡಿದ್ದು, ಉತ್ತಮವಾಗಿ ಕಾರ್ಯ ನಿರ್ವಹಿಸಿದ ಉದ್ಯೋಗಿಗಳಿಗೆ ಶೇ.6ರಿಂದ ಶೇ.9ರವರೆಗೆ ಮಾತ್ರ ವೇತನ ಹೆಚ್ಚಳ ಮಾಡಿತ್ತು. ಹಲವು ಐಟಿ ಕಂಪನಿಗಳು ಕೂಡ ಇದೇ ಹಾದಿ ಹಿಡಿಯಬಹುದು ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಟಾಪ್ ನ್ಯೂಸ್

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.