“ಉದ್ಯೋಗ ಖಾತ್ರಿ ಯೋಜನೆಯ ಬಾಕಿ ವಾರದೊಳಗೆ ಪಾವತಿ’
Team Udayavani, Apr 12, 2020, 4:58 AM IST
ಶಿವಮೊಗ್ಗ: ಕೋವಿಡ್ 19 ಲಾಕ್ಡೌನ್ ಮಧ್ಯೆಯೂ ಗ್ರಾಮೀಣ ಪ್ರದೇಶದಲ್ಲಿ ಉದ್ಯೋಗ ಹೆಚ್ಚಿಸಲು ಕೇಂದ್ರ ಸರಕಾರ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯ ಕೂಲಿ ಮೊತ್ತವನ್ನು ರೂ. 249ರಿಂದ 275ಕ್ಕೆ ಹೆಚ್ಚಳ ಮಾಡಿದೆ. ಯೋಜನೆಯಡಿ ಬಾಕಿ ಉಳಿದಿರುವ ಎಲ್ಲ ಮೊತ್ತವನ್ನು ವಾರದೊಳಗಾಗಿ ಪಾವತಿ ಮಾಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ತಿಳಿಸಿದ್ದಾರೆ.