ಅಸಂಖ್ಯ ಪ್ರಮಥರ ಶಿವಯೋಗದಲ್ಲಿ ಶಾಂತಿ ಮಂತ್ರ


Team Udayavani, Feb 17, 2020, 3:10 AM IST

asankhya

ಬೆಂಗಳೂರು: “ಇವನಾರವ ಇವನಾರವ ಎಂದೆನಿಸದಿರಯ್ಯ, ಇವ ನಮ್ಮವ ಇವ ನಮ್ಮವ…’ ಎಂಬುದು ಸಮಾಜದ ಪ್ರಸ್ತುತ ಮೂಲಮಂತ್ರ ಆಗಬೇಕು. ಆ ಮೂಲಕ ಲೋಕ ಕಲ್ಯಾಣಕ್ಕೆ ಕಂಕಣ ತೊಡಬೇಕು… ನಗರದ ನಂದಿ ಮೈದಾನದಲ್ಲಿ ಭಾನುವಾರ ನಡೆದ ಅಸಂಖ್ಯ ಪ್ರಮಥರ ಗಣಮೇಳದಲ್ಲಿ ಸೇರಿದ “ಶರಣ’ರಿಗೆ ವಿವಿಧ ಧಾರ್ಮಿಕ ಮುಖಂಡರು ಮತ್ತು ರಾಜಕೀಯ ನಾಯಕರು ನೀಡಿದ ಒಕ್ಕೊರಲ ಕರೆ ಇದು.

ಸಮಾಜದಲ್ಲಿ ಇಂದು ಪರಸ್ಪರ ಅಸಹನೆ, ದ್ವೇಷ, ಅಸೂಯೆ ಹೆಚ್ಚುತ್ತಿದೆ. ಅದೆಲ್ಲವನ್ನೂ ತೊಡೆದು ಹಾಕಿ, ಜಾತಿ-ಧರ್ಮಗಳಾ ಚೆಗಿರುವ ಮನುಷ್ಯ ಧರ್ಮದ ಮಂತ್ರ ಪಠಿಸ ಬೇಕು. ಈ ನಿಟ್ಟಿನಲ್ಲಿ ಬಸವಣ್ಣನವರು ಹೇಳಿದಂತೆ ಎಲ್ಲರನ್ನೂ “ಇವ ನಮ್ಮವ ಇವ ನಮ್ಮವ’ ಎಂಬುದಾಗಿ ನೋಡುವ ಮನೋಭಾವ ಬೆಳೆಸಿಕೊಳ್ಳಬೇಕು. ಇದಕ್ಕಾಗಿ ಪ್ರತಿಯೊಬ್ಬರೂ ಸಂಕಲ್ಪ ಮಾಡಬೇಕು ಎಂದು ಹೇಳಿದರು.

ಅಸಮಾನತೆ ಬದಿಗೊತ್ತಿ; ಸುತ್ತೂರು ಶ್ರೀ: ಮೇಳದಲ್ಲಿ ಮಾತನಾ ಡಿದ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ವ್ಯಕ್ತಿಯು ಪ್ರತಿಷ್ಠೆ ಅಥವಾ ಅಹಂಕಾರಗಳಿಂದ ಪ್ರತಿನಿಧಿಸಲು ಪ್ರಯತ್ನಿಸಿದಾಗ, ಅದು ದ್ವೇಷ, ಅಸೂಯೆಗೆ ಕಾರಣವಾಗುತ್ತದೆ. ಜಾತಿ, ಮತ ಮತ್ತಿತರ ಅಸಮಾನತೆಗಳನ್ನು ಬದಿಗೊತ್ತಿ, ಜಗತ್ತಿನ ಲೋಕ ಕಲ್ಯಾಣಕ್ಕಾಗಿ ಪ್ರತಿಯೊಬ್ಬರೂ ಸಂಕಲ್ಪ ಮಾಡಬೇಕು. ಇದಕ್ಕಾಗಿ ವ್ಯಕ್ತಿ ತನ್ನನ್ನು ತಾನು ಸುಧಾರಿಸಿಕೊಂಡರೆ ಸಾಕು. 12ನೇ ಶತಮಾನದಲ್ಲಿ ಬಸವಣ್ಣನವರು ಮಾಡಿದ್ದೂ ಇದನ್ನೇ ಎಂದು ಹೇಳಿದರು.

ವಚನ ಸಾಹಿತ್ಯ ಓದಿ ಬೆಳೆದೆ; ಗುರೂಜಿ: ಆರ್ಟ್‌ ಆಫ್ ಲಿವಿಂಗ್‌ನ ರವಿಶಂಕರ ಗುರೂಜಿ ಮಾತನಾಡಿ, ಎಲ್ಲ ಜಾತಿ-ಮತ-ಪಂಥಗಳನ್ನು ಒಗ್ಗೂಡಿಸುವ ಕೆಲಸ ಹಿಂದೆಂದಿಗಿಂತ ಇಂದು ಹೆಚ್ಚಿದೆ. ಕೆಲವರು ಸಂಘರ್ಷದ ಬೀಜ ಬಿತ್ತಿ, ಅದರಲ್ಲಿ ಫ‌ಸಲು ತೆಗೆಯುವ ಪ್ರಯತ್ನ ಮಾಡುತ್ತಾರೆ. ಅಂತವರಿಗೆ ಈ ಸಂಘರ್ಷ ಬೇಕಾಗುತ್ತದೆ. ಆದರೆ, ಅದಕ್ಕೆ ಅವಕಾಶ ಮಾಡಿಕೊಡಬಾರದು.

ಪರಸ್ಪರ ದ್ವೇಷ-ಅಸೂಯೆಗಳನ್ನು ತೊಡೆದು ಹಾಕಿ, ನಾವೆಲ್ಲರೂ ಒಂದು ಎಂಬ ಪರಿಕಲ್ಪನೆ ಯನ್ನು ಸಮಾಜದ ಮುಂದೆ ತೆಗೆದುಕೊಂಡು ಹೋಗಬೇಕಿದೆ. ಇಲ್ಲದಿದ್ದರೆ ಪ್ರಪಂಚಕ್ಕೆ ಉಳಿಗಾಲವಿಲ್ಲ ಎಂದು ತಿಳಿಸಿದರು. ನಾವೆಲ್ಲ ವಚನ ಸಾಹಿತ್ಯವನ್ನು ಓದಿಯೇ ಬೆಳೆದಿದ್ದೇವೆ. ಯುವಪೀಳಿಗೆಯಲ್ಲಿ ಮೊಬೈಲ್‌ ಮತ್ತು ವಿಡಿಯೋ ಗೇಮ್‌ ಗೀಳು ತಪ್ಪಿಸಿ, ಭಾರತದ ಸಾಹಿತ್ಯವನ್ನು ತುಂಬುವುದು ನಮ್ಮೆಲ್ಲರ ಕರ್ತವ್ಯ. ವಚನ ಸಾಹಿತ್ಯ, ದಾಸ ಸಾಹಿತ್ಯಗಳ ಬಗ್ಗೆ ಅರಿವು ಮೂಡಿಸುವ ಪ್ರಯತ್ನ ಪ್ರತಿ ಶಾಲಾ-ಕಾಲೇಜುಗಳಲ್ಲೂ ಆಗಬೇಕಿದೆ ಎಂದರು.

ಶಾಂತಿ, ಅಭಿವೃದ್ಧಿ ಒಟ್ಟೊಟ್ಟಿಗೆ ಸಾಗಲಿ; ಸಿದ್ದಲಿಂಗ ಸ್ವಾಮೀಜಿ: ತುಮಕೂರಿನ ಶ್ರೀ ಸಿದ್ಧಲಿಂಗ ಸ್ವಾಮೀಜಿ ಮಾತನಾಡಿ, ಹುಟ್ಟು-ಸಾವಿಗಿಂತ ಬದುಕಿಗೆ ಒತ್ತುಕೊಟ್ಟವರು ಬಸವಣ್ಣ. ಅಷ್ಟೇ ಅಲ್ಲ, ಮನುಷ್ಯನಾಗಿ ಬಾಳುವುದನ್ನು ಕಲಿಸಿಕೊಟ್ಟರು. 12ನೇ ಶತಮಾನದಲ್ಲಿ ಬಾಳಿ ಬದುಕಿದ ಅವರು ಹಚ್ಚಿದ ಹೊಸ ಬೆಳಕಿನಲ್ಲಿ ನಾವೆಲ್ಲರೂ ಹೆಜ್ಜೆ ಇಡಬೇಕು. ಜಾಗತಿಕ ಶಾಂತಿ ಮತ್ತು ಅಭಿವೃದ್ಧಿ ಒಟ್ಟೊಟ್ಟಿಗೆ ಸಾಗಬೇಕೆಂದು ಹೇಳಿದರು.

ಸಂಜೀವಿನಿ ನೀಡುವ ಯತ್ನ; ಮಂತ್ರಾಲಯ ಶ್ರೀ: ಮಂತ್ರಾಲಯದ ಶ್ರೀ ಸುಬುಧೇಂದ್ರ ತೀರ್ಥರು ಮಾತನಾಡಿ, ಸಂಕುಚಿತ ಭಾವನೆಗಳು ಸಮಾಜದ ಒಡಕಿಗೆ ಕಾರಣವಾಗುತ್ತವೆ. ಮುಖ್ಯವಾಗಿ ಶಾಂತಿ-ಸೌಹಾರ್ದತೆಯನ್ನು ಕದಡುತ್ತವೆ. ಆದ್ದರಿಂತ ಅಂತಹ ಅನಗತ್ಯ ಆಲೋಚನೆಗಳಿಗೆ ಒತ್ತು ಕೊಡದೆ, ಪ್ರಗತಿಪರ ಚಿಂತನೆಗಳು, ಲೋಕಕಲ್ಯಾಣಕ್ಕೆ ಒತ್ತು ಕೊಡಬೇಕು. ಅಶಾಂತಿಯಿಂದ ತತ್ತರಿಸುತ್ತಿರುವ ಸಮಾಜಕ್ಕೆ ಇಂತಹ ಸಮಾವೇಶಗಳು ಸಂಜೀವಿನಿ ನೀಡುವ ಪ್ರಯತ್ನವಾಗಿದೆ ಎಂದು ವಿಶ್ಲೇಷಿಸಿದರು.

ಬಾವಿಯೊಳಗಿನ ನೀರು-ಕಸ; ಸಿದ್ದರಾಮಯ್ಯ: ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮಾತನಾಡಿ, ಮನುಕುಲದ ಉದ್ಧಾ ರಕ್ಕೆ ಕಾಲಕಾಲಕ್ಕೆ ಶರಣರು, ಸೂಫಿ-ಸಂತರು ಪ್ರಯತ್ನಿಸಿದ್ದಾರೆ. ಆದರೆ, ಅದು ಬಾವಿ ಯ ಲ್ಲಿನ ನೀರಿನಂತಾಗಿದೆ. ಹಗ್ಗ ಹಾಕಿ ಬಿಂದಿಗೆಯಿಂದ ನೀರೆತ್ತು ವಾಗೊಮ್ಮೆ ಕಸ ದೂರ ಹೋಗುತ್ತದೆ. ಮತ್ತೆ ಅಲ್ಲಿಯೇ ಬಂದು ಕೂರುತ್ತದೆ. ಮೌಡ್ಯ, ಕಂದಾಚಾರಗಳು ಶಾಶ್ವತವಾಗಿ ದೂರವಾಗ ಬೇಕು. ಸಾಮಾಜಿಕ, ಆರ್ಥಿಕ ಸ್ವಾತಂತ್ರ್ಯ ಸಿಗಬೇಕು ಎಂದರು.

ವೀರಶೈವ-ಲಿಂಗಾಯತ ಸಮಾಜ ಕೆಣಕಿದ ಸಿದ್ದು; ಸೋಮಣ್ಣ: ಸಚಿವ ವಿ.ಸೋಮಣ್ಣ ಮಾತನಾಡಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ವೀರಶೈವ-ಲಿಂಗಾ ಯತ ಸಮಾಜವನ್ನು ಸ್ವಲ್ಪ ಕೆಣಕಿದ್ದಕ್ಕೆ ಬಿ.ಎಸ್‌.ಯಡಿಯೂರಪ್ಪ ಅವರು ಮತ್ತೆ ಮುಖ್ಯ ಮಂತ್ರಿಯಾಗಲು ಸಾಧ್ಯವಾಯಿತು. ರಾಜ್ಯಕ್ಕೆ ಸಿದ್ದರಾಮಯ್ಯನವರು ಸಾಕಷ್ಟು ಕೊಡುಗೆ ನೀಡಿದ್ದಾರೆ. ಅವರು ಮಾಡಿದ ಅಭಿವೃದ್ಧಿ ಪರ ಯೋಜನೆಗಳನ್ನು ಯಡಿಯೂರಪ್ಪನವರು ಮುಂದುವರಿಸಿಕೊಂಡು ಹೋಗುತ್ತಿದ್ದಾರೆ. ಎಲ್ಲವನ್ನೂ ಮಾಡಿದರು.

ಆದರೆ, ಸಮಾಜವನ್ನು ಸ್ವಲ್ಪ ಕೆಣಕಿದರು. ಅದು ಯಡಿಯೂರಪ್ಪ ಅವರಿಗೆ ಅಧಿಕಾರ ಸಿಗುವಂತೆ ಮಾಡಿತು ಎಂದರು. ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ಬಿಜೆಪಿ ಯುವಮೋರ್ಚಾ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಬಿ.ವೈ.ವಿಜಯೇಂದ್ರ ಮಾತನಾಡಿದರು. ಚಿತ್ರದುರ್ಗ ಮುರುಘಾಮಠದ ಡಾ.ಶಿವಮೂರ್ತಿ ಮುರುಘಾ ಶರಣರು, ಮಾಜಿ ಶಾಸಕ ಅಶೋಕ್‌ ಖೇಣಿ ಮತ್ತಿತರರು ಉಪಸ್ಥಿತರಿದ್ದರು.

ಸಮಾನತೆ ಪಕ್ಷ!: ರಾಜ್ಯದಲ್ಲಿ ಈಗ ಆಡಳಿತ ಪಕ್ಷ ಅಥವಾ ವಿರೋಧ ಪಕ್ಷವಿಲ್ಲ. ಸಮಾನತೆ ಪಕ್ಷ ಇದೆ! – ಹೀಗಂತ ತುಮಕೂರಿನ ಶ್ರೀ ಸಿದ್ಧಲಿಂಗ ಸ್ವಾಮೀಜಿ ವಿಶ್ಲೇಷಿಸಿದರು. ಅಸಂಖ್ಯ ಪ್ರಮಥರ ಗಣಮೇಳದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಆಡಳಿತ ಪಕ್ಷ ಇದೆಯೋ ಅಥವಾ ವಿರೋಧ ಪಕ್ಷ ಇದೆಯೋ ಎಂದು ಕೇಳುತ್ತಾರೆ. ಇದು ಸಮಾನತೆಯ ಪಕ್ಷ ಎಂದರೆ ತಪ್ಪಾಗದು ಎಂದರು.

ಆಧ್ಯಾತ್ಮಿಕ ಯಾನ ಆರಂಭ; ಮುರುಘಾಶ್ರೀ: ಬೆಳಗ್ಗೆ 8ಕ್ಕೆ ಶ್ರೀ ಶಿವಮೂರ್ತಿ ಮುರುಘಾ ಶರಣರು ಧ್ವಜಾರೋಹಣದ ಮೂಲಕ ಗಣಮೇಳಕ್ಕೆ ಚಾಲನೆ ನೀಡಿದರು. ನಂತರ ಮಾತನಾಡಿ, ಎಲ್ಲ ಸ್ವಾಮೀಜಿಗಳು ಸೇರಿಕೊಂಡರೆ ಗಣ. ಈ ಗಣಕ್ಕೆ ಭಕ್ತರು ಕೂಡಿದರೆ ಅಮರಗಣವಾಗಲಿದೆ. 21ನೆ ಶತಮಾನವನ್ನು 12ನೇ ಶತಮಾನವನ್ನಾಗಿ ಪರಿವರ್ತಿಸುವ ಪ್ರಯತ್ನವೇ ಈ ಗಣಮೇಳ. ಆಧುನಿಕ ಜಗತ್ತು ಎದುರಿಸುತ್ತಿರುವ ಆಪತ್ತು, ಅವರಲ್ಲಿರುವ ಬೇಸರ, ಆತಂಕಕ್ಕೆ ಪರಿಹಾರವಾಗಿ ಈ ಆಧ್ಯಾತ್ಮಿಕ ಯಾನ ಆರಂಭಿಸಲಾಗಿದೆ ಎಂದರು.

ಲಕ್ಷ ಜನ ಭೇಟಿ: ಗಣಮೇಳಕ್ಕೆ ಸುಮಾರು ಲಕ್ಷ ಜನ ಭೇಟಿ ನೀಡಿದ್ದಾರೆಂದು ಅಂದಾಜಿಸಲಾಗಿದೆ. ದಾವಣಗೆರೆಯಿಂದ 100, ಚಿತ್ರದುರ್ಗ 100, ತುಮಕೂರು, ಶಿವಮೊಗ್ಗ, ಹಾವೇರಿ, ಬಳ್ಳಾರಿ ಮತ್ತಿತರ ಭಾಗಗಳಿಂದ ಸಾವಿರಕ್ಕೂ ಅಧಿಕ ಬಸ್‌ಗಳಲ್ಲಿ ಭಕ್ತಸಾಗರ ಹರಿದು ಬಂದಿತ್ತು. ಇದಲ್ಲದೆ, ಬಹುದೂರದ ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳು, ನೆರೆಯ ರಾಜ್ಯಗಳ ಜನ ರೈಲಿನಲ್ಲಿ ಆಗಮಿಸಿದ್ದರು. ಅವರೆಲ್ಲರಿಗೂ ರೈಲು ನಿಲ್ದಾಣದಿಂದ ನಂದಿ ಮೈದಾನಕ್ಕೆ ಬಸ್‌ ಸೌಲಭ್ಯ ಕಲ್ಪಿಸಲಾಗಿತ್ತು. ಬಂದ ಭಕ್ತರಿಗೆಲ್ಲ ದಾಸೋಹ ವ್ಯವಸ್ಥೆ ಮಾಡಲಾಗಿತ್ತು.

ಬೆಳಗ್ಗೆಯಿಂದ ಸಂಜೆಯವರೆಗೆ ದಾಸೋಹ: ಬೆಳಗ್ಗೆ ಉಪ್ಪಿಟ್ಟು, ಕೇಸರಿಬಾತ್‌, ಮಧ್ಯಾಹ್ನ ಊಟಕ್ಕೆ ಪಲಾವ್‌, ಮೊಸರುಬಾಜಿ, ಲಾಡು, ಮೈಸೂರು ಪಾಕ್‌, ತರಕಾರಿ ಪಲ್ಯ, ಜೋಳದ ರೊಟ್ಟಿಯ ವ್ಯವಸ್ಥೆ ಮಾಡಲಾಗಿತ್ತು. ಚಿತ್ರದುರ್ಗದಿಂದ ಸುಮಾರು ಮೂರು ನೂರಕ್ಕೂ ಹೆಚ್ಚು ಬಾಣಸಿಗರು ಪ್ರಸಾದ ತಯಾರಿಯಲ್ಲಿ ತೊಡಗಿದ್ದರು. ಊಟಕ್ಕೆ 50 ಕೌಂಟರ್‌ಗಳನ್ನು ತೆರೆಯಲಾಗಿತ್ತು. ಬೆಳಗ್ಗೆ 6ರಿಂದ ಸಂಜೆ 7ರವರೆಗೆ ದಾಸೋಹ ನಡೆಯಿತು ಎಂದು ಗಣಮೇಳ ಕಾರ್ಯದರ್ಶಿ ಶ್ರೀನಿವಾಸ್‌ ಮಾಹಿತಿ ನೀಡಿದರು.

ಉತ್ತರ ಭಾರತದ ಬುದ್ಧ ಮತ್ತು ದಕ್ಷಿಣ ಭಾರತದ ಬಸವಣ್ಣನ ಮೂಲಕ ಸಂಸ್ಕೃತಿಯನ್ನು ಬೆಸೆಯುವ ಪ್ರಯತ್ನವನ್ನು ಮುರುಘಾ ಶರಣರು “ವಂಡರ್‌ ವಂಡರ್‌’ ಕೃತಿ ಮೂಲಕ ಮಾಡಿದ್ದಾರೆ.
-ಗೋವಿಂದ ಕಾರಜೋಳ, ಉಪ ಮುಖ್ಯಮಂತ್ರಿ

ಟಾಪ್ ನ್ಯೂಸ್

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.