ಗುಡಿಬಂಡೆ : ಲಸಿಕೆ ಪಡೆಯಲು ಬೆಂಗಳೂರಿನಿಂದ ಬಂದ ಜನ, ಸ್ಥಳೀಯರಲ್ಲಿ ಆತಂಕ
Team Udayavani, May 10, 2021, 3:40 PM IST
ಗುಡಿಬಂಡೆ(ಚಿಕ್ಕಬಳ್ಳಾಪುರ) : ಪಟ್ಟಣದ ಸಾರ್ವಜನಿಕರ ಆಸ್ಪತ್ರೆಯಲ್ಲಿ ಕೋವಿಡ್ ಲಸಿಕೆ ತೆಗೆದುಕೊಳ್ಳಲು ಬೆಳ್ಳಂಬೆಳಿಗ್ಗೆ ಬೆಂಗಳೂರಿಗರು ಆಗಮಿಸಿದ್ದು, ಸುಮಾರು ನೂರಕ್ಕೂ ಹೆಚ್ಚು ಜನ ಅಗಮಿಸಿದ್ದರಿಂದ ಸ್ಥಳೀಯರು ಭಯಭೀತರಾಗಿದ್ದಾರೆ.
ಬೆಂಗಳೂರು ನಲ್ಲಿ ಕೋವಿಡ್ ಸೋಂಕು ಪ್ರಕರಣ ಜಾಸ್ತಿ ಇರುವುದರಿಂದ, ಅಲ್ಲಿನವರು ಇಲ್ಲಿಗೆ ಬಂದರೆ ಸೋಂಕು ಹೆಚ್ಚಾಗುತ್ತದೆ ಎಂಬ ಭೀತಿಯಲ್ಲಿ ಇರುವಾಗಲೇ ಏಕಾ ಏಕಿ ಇಂದು ಒಂದೇ ದಿನ 100 ಕ್ಕೂ ಹೆಚ್ಚು ಸಂಖ್ಯೆಯಲ್ಲಿ ಆಸ್ಪತ್ರೆಯ ಮುಂದೆ ಜಮಾಯಿಸಿದ್ದರು.
ನಂತರ ಇವರು ಆನ್ ಲೈನ್ ಮೂಲಕ ಕೋವಿಡ್ ಲಸಿಕೆ ಪಡೆದುಕೊಳ್ಳಲು ಬಂದಿದ್ದಾರೆ ಎಂದು ತಿಳಿದುಕೊಂಡು ಕೊಂಚ ನಿಟ್ಟುಸಿರು ಬಿಟ್ಟರು. ಆದರೂ ಆಸ್ಪತ್ರೆಗೆ ಚಿಕಿತ್ಸೆಗೆ ಬಂದಿದ್ದ ಸ್ಥಳೀಯರು, ಮಹಿಳೆಯರು, ಗರ್ಭಿಣಿಯರು ಅಂತೂ ಅವರು ಏಕೆ ಇಲ್ಲಿಗೆ ಬಂದರು, ಅಲ್ಲಿಂದ ಇಲ್ಲಿಗೆ ಬಂದು ರೋಗ ಹರುಡುತ್ತಾರೆ ಎಂದು ಅವರ ಮೇಲೆ ಹಿಡಿ ಶಾಪಗಳನ್ನು ಹಾಕಿದ್ದಾರೆ.
ಆಸ್ಪತ್ರೆಯಲ್ಲಿ ಇವರು ಯಾವುದೇ ಸಾಮಾಜಿಕ ಅಂತರ ಕಾಯ್ದು ಕೊಳ್ಳದೆ ರಾಜಾರೋಷವಾಗಿ ತಿರುಗಾಡುತ್ತಿದ್ದರು.
ಪರಿಸ್ಥಿತಿ ಅತೋಟಿ ಮೀರುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸ್ ಸಿಬ್ಬಂದಿಗೆ ಸಹ ಅವರನ್ನು ಅಂತರದಲ್ಲಿ ನಿಲ್ಲಿಸುವಲ್ಲಿ ಹರಸಾಹಸವನ್ನೇ ಪಡಬೇಕಾಯಿತು.
ಆಸ್ಪತ್ರೆಯಲ್ಲಿ ಮಾತ್ರ ಹೊರಗಿನಿಂದ ಬಂದವರಿಗೆ ಯಾವುದೇ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಂಡು ಅವರನ್ನು ಪರೀಕ್ಷೆ ಮಾಡಿ ಒಳಕಳುಹಿಸುತ್ತಿರುವದಿಲ್ಲ. ಬೆಂಗಳೂರಿಗರು ಅಲ್ಲೆ ಇರುವ ಆಸ್ಪತ್ರೆಗಳಲ್ಲಿ ಲಸಿಕೆ ಪಡೆಯದೆ ಇಲ್ಲಿಗೆ ಏಕೆ ಬಂದರು ಎಂಬುದು ಸ್ಥಳೀಯರಲ್ಲಿ ಯಕ್ಷ ಪ್ರಶ್ನೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ
O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ