Udupi: ಶಾಶ್ವತ ಕುಡಿಯುವ ನೀರು ಯೋಜನೆ ಮಾರ್ಚ್-ಎಪ್ರಿಲ್ಗೆ ಕಾಮಗಾರಿ ಪೂರ್ಣ: ಸಚಿವ ಸುರೇಶ್
Team Udayavani, Dec 15, 2023, 11:00 PM IST
ಬೆಳಗಾವಿ: ಉಡುಪಿ ನಗರಕ್ಕೆ ಶಾಶ್ವತ ಕುಡಿಯುವ ನೀರು ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ವಾರಾಹಿ ನದಿಯಿಂದ ಅಂದಾಜು 176 ಕೋಟಿ ರೂ.ಗಳ ವೆಚ್ಚದಲ್ಲಿ ಕೈಗೊಂಡಿರುವ ಕಾಮಗಾರಿ ಮಾರ್ಚ್-ಎಪ್ರಿಲ್ ವೇಳೆಗೆ ಪೂರ್ಣಗೊಳ್ಳಲಿದ್ದು, ಕುಡಿಯುವ ನೀರಿಗೆ ಶಾಶ್ವತ ಸೌಲಭ್ಯ ದೊರೆಯಲಿದೆ ಎಂದು ನಗರಾಭಿವೃದ್ಧಿ ಸಚಿವ ಬಿ.ಎಸ್.ಸುರೇಶ್ ಹೇಳಿದರು.
ವಿಧಾನಸಭೆ ಪ್ರಶ್ನೋತ್ತರ ಕಲಾಪದಲ್ಲಿ ಶಾಸಕ ಯಶ್ಪಾಲ್ ಸುವರ್ಣ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಪ್ರಸ್ತುತ ಉಡುಪಿ ನಗರಕ್ಕೆ ಶಿರೂರು ಬಜೆ ಬಳಿಯಿಂದ ನೀರು ಪೂರೈಕೆ ಮಾಡಲಾಗುತ್ತಿದ್ದು, ಮೇ ತಿಂಗಳವರೆಗೆ ಕುಡಿಯುವ ನೀರಿನ ಸಮಸ್ಯೆ ಇಲ್ಲ. ಒಂದು ವೇಳೆ ಸಮಸ್ಯೆಯಾದರೆ ಟ್ಯಾಂಕರ್ ಮೂಲಕ ನೀರು ಪೂರೈಕೆಗೆ 10 ಲಕ್ಷ ರೂ.ಗಳನ್ನು ಮೀಸಲಿರಿಸಲಾಗಿದೆ.
ಉಡುಪಿ ನಗರಕ್ಕೆ ಶಾಶ್ವತ ಕುಡಿಯುವ ನೀರು ಸೌಲಭ್ಯ ಕಲ್ಪಿಸಲು ವಾರಾಹಿ ನದಿನಿಂದ ನೀರು ಪೂರೈಕೆಗೆ 116 ಕೋ. ರೂ. ಹಾಗೂ 60 ಕೋ. ರೂ.ಯ 2 ಯೋಜನೆಗಳ ಅಡಿಯಲ್ಲಿ ಅಂದಾಜು 45 ಎಂಎಲ್ಡಿ ನೀರು ಪಡೆಯಲಾಗುತ್ತಿದ್ದು, ಮಾರ್ಚ್ -ಎಪ್ರಿಲ್ ವೇಳೆಗೆ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ತಿಳಿಸಿದರು.
ಬಜೆಯಲ್ಲಿ ಹೂಳು ತೆಗೆಯುವ ಚಿಂತನೆ ಇದೆ
ಬಜೆ ಡ್ಯಾಂನಲ್ಲಿ ಹೂಳು ತೆಗೆಯುವ ಪ್ರಸ್ತಾವವಿದ್ದು, ಅದಕ್ಕೆ ಅಂದಾಜು 5 ಕೋಟಿ ರೂ.ಗಳ ಅವಶ್ಯವಿದೆ. ಆದರೆ ಇದಕ್ಕೆ ಸರಕಾರ ಯಾವುದೇ ಹಣ ನೀಡುವ ಅಗತ್ಯವಿಲ್ಲ. ಡ್ಯಾಂನಲ್ಲಿ ಹೂಳು ಜತೆಗೆ ಮರಳು ಕೂಡ ಇದೆ. ಆ ಮರಳನ್ನು ಮಾರಾಟ ಮಾಡಿದರೆ ಹೂಳೆತ್ತುವ ಖರ್ಚನ್ನು ಸರಿದೂಗಿಸಬಹುದಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿಯವರು ಪ್ರಸ್ತಾವನೆ ಸಲ್ಲಿಸಿದ್ದು, ಹೂಳು ತೆಗೆಯುವವರಿಗೆ ಟೆಂಡರ್ ಕರೆಯಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
H.D. Revanna;ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್: ದೇವೇಗೌಡರ ನಿವಾಸಕ್ಕೆ ಎಸ್ ಐಟಿ !
Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ
POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್ ದಾಖಲು
ಬೆಲೆ ಏರಿಕೆ ಪ್ರಧಾನಿ ಮೋದಿ ಕೊಡುಗೆ: ಶಿವರಾಜ್ ತಂಗಡಗಿ
Belagavi; ಶೆಟ್ಟರ್ ಅವರಿಗೆ ಆಶೀರ್ವಾದ ಮಾಡಿದ ವಿವಿಧ ಮಠಾಧೀಶರು