Pernankila Temple; ಮನದಲ್ಲಿ ಭಕ್ತಿ ಇದ್ದರೆ ಮನೆ ದೇವಾಲಯ: ಪೇಜಾವರ ಶ್ರೀ
ಜೀರ್ಣೋದ್ಧಾರ, ಬ್ರಹ್ಮಕಲಶೋತ್ಸವದ ಧಾರ್ಮಿಕ ಸಭೆ
Team Udayavani, Mar 26, 2024, 1:03 AM IST
ಉಡುಪಿ: ದೇವಸ್ಥಾನದಲ್ಲಿ ಭಗವಂತನ್ನು ಬಗೆಬಗೆಯಿಂದ ಆರಾಧಿಸುತ್ತೇವೆ. ಮನದಲ್ಲಿ ಭಕ್ತಿ ಭರಿತವಾಗಿ ಮನೆಗೆ ತೆರಳಬೇಕು. ಆಗ ಮನೆಯು ದೇವಾಲಯವಾಗುವುದರೊಂದಿಗೆ ಶಾಂತಿ, ನೆಮ್ಮದಿ, ಆರೋಗ್ಯ, ಧನ-ಕನಕಗಳು ವೃದ್ದಿಯಾಗುತ್ತವೆ. ಬೇರೆ ಜಿಲ್ಲೆ, ರಾಜ್ಯಗಳಿಂದ ಬಹಳಷ್ಟು ಭಕ್ತರು ಪೆರ್ಣಂಕಿಲಕ್ಕೆ ಆಗಮಿಸಿದ್ದಾರೆ ಅವರೆಲ್ಲರಿಗೂ ಇಲ್ಲಿನ ಆರಾಧ್ಯ ದೇವರು ಶ್ರೀ ಮಹಾಗಣಪತಿ, ಶ್ರೀ ಮಹಾಲಿಂಗೇಶ್ವರ ಒಳಿತನ್ನು ಮಾಡಲಿ ಎಂದು ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಹೇಳಿದರು.
ಮಾ. 24ರಂದು ಪೆರ್ಣಂಕಿಲ ಶ್ರೀ ಮಹಾಲಿಂಗೇಶ್ವರ – ಮಹಾಗಣಪತಿ ದೇವಾಲಯದಲ್ಲಿ ಜೀರ್ಣೋದ್ಧಾರ ಪ್ರಯುಕ್ತ ಜರಗಿದ ಧಾರ್ಮಿಕ ಸಭೆಯಲ್ಲಿ ಅವರು ಆಶೀರ್ವಚನ ನೀಡಿದರು.
ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ವಿದ್ವಾನ್ ಹರಿದಾಸ್ ಭಟ್ ಅಧ್ಯಕ್ಷತೆ ವಹಿಸಿದರು. ಪೇಜಾವರ ಮಠದ ದಿವಾನ ಎಂ. ರಘುರಾಮ ಆಚಾರ್ಯ, ಕಾರ್ಯ ನಿರ್ವಹಣಾಧಿಕಾರಿ ಸುಬ್ರಹ್ಮಣ್ಯ ಭಟ್, ಜೀರ್ಣೋದ್ಧಾರ ಸಮಿತಿ ಪ್ರಧಾನ ಕಾರ್ಯದರ್ಶಿ ಶ್ರೀಶ ನಾಯಕ್, ಸಮಿತಿ ಸಂಘಟನ ಕಾರ್ಯದರ್ಶಿ ಸದಾನಂದ ಪ್ರಭು, ಉಪಾಧ್ಯಕ್ಷ ಶ್ರೀಕಾಂತ್ ನಾಯಕ್ ಅಲೆವೂರು, ಪ್ರಮುಖರಾದ ಸುರೇಶ್ ತಂತ್ರಿ, ಮಹೇಶ್ ಕುಲಕರ್ಣಿ, ಕಿಶೋರ್ ನಾಯಕ್, ಬಾಳು ವಾಗ್ಲೆ, ಸತೀಶ್ ಪೂಜಾರಿ ಉಪಸ್ಥಿತರಿದ್ದರು. ಕಾರ್ಯದರ್ಶಿ ಉಮೇಶ್ ನಾಯಕ್ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ