ದೇವೇಗೌಡರಿಂದ ಜೆಡಿಎಸ್ ಶಾಸಕರ ಮನವೊಲಿಕೆ
Team Udayavani, Jul 8, 2019, 3:05 AM IST
ಬೆಂಗಳೂರು: ಜೆಡಿಎಸ್ನ ಮೂವರು ಶಾಸಕರು ರಾಜೀನಾಮೆ ನೀಡಿ, ಅತೃಪ್ತ ಕಾಂಗ್ರೆಸ್ ಶಾಸಕರ ಜತೆಗೂಡಿ ಮುಂಬೈಗೆ ಹೋಗಿರುವುದರಿಂದ ಎಚ್ಚೆತ್ತುಕೊಂಡಿರುವ ಜೆಡಿಎಸ್, ಬೇರೆ ಇನ್ಯಾರೂ ಶಾಸಕರು ಹೋಗದಂತೆ ತಡೆಯುವ ಕಾರ್ಯದಲ್ಲಿ ನಿರತವಾಗಿದೆ.
ಕೆ.ಶ್ರೀನಿವಾಸಗೌಡ, ಸಿರಾ ಸತ್ಯನಾರಾಯಣ, ನಿಸರ್ಗ ನಾರಾಯಣಸ್ವಾಮಿ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡ್ತಾರೆ ಎಂಬ ಗುಸು ಗುಸು ಇರುವುದರಿಂದ ಆ ಎಲ್ಲ ಶಾಸಕರ ಮೇಲೆ ನಿಗಾ ವಹಿಸುವುದರ ಜತೆಗೆ ಖುದ್ದು ದೇವೇಗೌಡರೇ ಇವರ ಜತೆ ಮಾತನಾಡಿದ್ದಾರೆಂದು ಹೇಳಲಾಗಿದೆ.
ಮೂವರು ಶಾಸಕರು ರಾಜೀನಾಮೆ ನೀಡಿರುವುದು ಪಕ್ಷಕ್ಕೆ ಆಘಾತ ತಂದಿದೆ. ಇಂತಹ ಸಂದರ್ಭದಲ್ಲಿ ಪಕ್ಷಕ್ಕೆ ನಿಷ್ಠೆ ತೋರದೆ ಆಮಿಷಕ್ಕೆ ಬಲಿಯಾದರೆ ಹೇಗೆ? ಎಂದು ಶಾಸಕರನ್ನು ಪ್ರಶ್ನಿಸಿರುವ ದೇವೇಗೌಡರು, “ಕಷ್ಟ ಕಾಲದಲ್ಲಿ ನನ್ನ ಜತೆಗಿರಿ. ನಿಮಗೆ ಅಧಿಕಾರ ಕೊಡಿಸುವ ಹೊಣೆಗಾರಿಕೆ ನನ್ನದು. ಸರ್ಕಾರ ಮೊದಲು ಉಳಿಯಲಿ, ಆನಂತರ ಮಾತನಾಡೋಣ.
ಯಾವುದೇ ರೀತಿಯ ಆತುರದ ತೀರ್ಮಾನ ಕೈಗೊಳ್ಳಬೇಡಿ’ ಎಂದು ಮನವಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಈ ಮಧ್ಯೆ, ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಅವರು ಹಾಸನ ಹಾಗೂ ಮಂಡ್ಯ ಶಾಸಕರ ಮೇಲೆ ನಿಗಾ ವಹಿಸಿ ನಿರಂತರ ಸಂಪರ್ಕದಲ್ಲಿದ್ದಾರೆ ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ