ಕೇರಳ, ಪಂಜಾಬ್ನಲ್ಲಿ ಪೆಟ್ರೋಲ್, ಡೀಸೆಲ್ ತುಟ್ಟಿ
Team Udayavani, Feb 4, 2023, 7:10 AM IST
ತಿರುವನಂತಪುರ/ ಚಂಡೀಗಢ: ಸಿಎಂ ಪಿಣರಾಯಿ ವಿಜಯನ್ ನೇತೃತ್ವದ ಕೇರಳ ಸರಕಾರ ಶುಕ್ರವಾರ ತನ್ನ ಮುಂಗಡಪತ್ರವನ್ನು ಮಂಡಿಸಿದೆ. ಇದರ ಪರಿಣಾಮ ಆ ರಾಜ್ಯದಲ್ಲಿ ಮದ್ಯ ಹಾಗೂ ಇಂಧನದ ಬೆಲೆ ಇನ್ನಷ್ಟು ಏರಲಿದೆ!
ಪೆಟ್ರೋಲ್, ಡೀಸೆಲ್, ಮದ್ಯದ ಮೇಲೆ ಸಾಮಾಜಿಕ ಸುರûಾ ಸೆಸ್ ಹೇರಿರುವುದೇ ಇದಕ್ಕೆ ಕಾರಣ. ಆದಾಯದ ಪ್ರಮಾಣವನ್ನು ಇನ್ನಷ್ಟು ಹೆಚ್ಚಿಸಲು ಸರಕಾರ ಈ ಕ್ರಮ ತೆಗೆದುಕೊಂಡಿದೆ. ಮುಂಗಡಪತ್ರ ಮಂಡಿಸಿದ ವಿತ್ತಸಚಿವ ಕೆ.ಎನ್. ಬಾಲಗೋಪಾಲ್, 500ರಿಂದ 999 ರೂ. ನಡುವೆ ಬೆಲೆಯಿರುವ ಭಾರತದಲ್ಲಿ ತಯರಾಗಿರುವ ವಿದೇಶಿ ಮದ್ಯದ ಪ್ರತೀ ಬಾಟಲ್ ಮೇಲೆ 20 ರೂ. ಸೆಸ್ ಹಾಕಲಾಗುತ್ತದೆ. ಬೆಲೆ 1000 ರೂ. ದಾಟಿದರೆ ಈ ದರ 40 ರೂ.ಗೇರುತ್ತದೆ ಎಂದಿದ್ದಾರೆ. ಇದೇ ವೇಳೆ, ಅಗತ್ಯ ವಸ್ತುಗಳ ಬೆಲೆಯೇರಿಕೆ ನಿಯಂತ್ರಣಕ್ಕಾಗಿ ಸರಕಾರ 2,000 ಕೋಟಿ ರೂ. ಅನುದಾನ ಮೀಸಲಿಟ್ಟಿರುವುದಾಗಿ ಘೋಷಿದ್ದಾರೆ.
ಪಂಜಾಬ್ನಲ್ಲಿ ತೈಲಕ್ಕೆ ಸೆಸ್: ಮುಖ್ಯಮಂತ್ರಿ ಭಗವಂತ್ ಮಾನ್ ನೇತೃತ್ವದ ಪಂಜಾಬ್ ಸರಕಾರ ಪ್ರತೀ ಲೀಟರ್ ಪೆಟ್ರೋಲ್ ಹಾಗೂ ಡೀಸೆಲ್ ಮೇಲೆ 90 ಪೈಸೆ ಸೆಸ್ ವಿಧಿಸಲು ನಿರ್ಧರಿಸಿದೆ.
ಇದರಿಂದ ರಾಜ್ಯದಲ್ಲಿ ಇಂಧನಗಳ ಬೆಲೆ ಮತ್ತಷ್ಟು ದುಬಾರಿಯಾಗಲಿದೆ. ಶುಕ್ರವಾರ ಸಚಿವ ಸಂಪುಟ ಸಭೆ ಬಳಿಕ ವಸತಿ ಮತ್ತು ನಗರಾಭಿವೃದ್ಧಿ ಸಚಿವ ಅಮನ್ ಅರೋರಾ ಈ ಕುರಿತು ಮಾಹಿತಿ ನೀಡಿದ್ದಾರೆ.
ರಾಜ್ಯದಲ್ಲಿ ದೀರ್ಘಕಾಲದಿಂದ ಬೆಲೆ ಹೆಚ್ಚಳವಾಗಿಲ್ಲ. ಜತೆಗೆ ರಾಜ್ಯದ ಆದಾಯ ಉತ್ಪತ್ತಿಗೆ ಅಗತ್ಯವಾಗಿರುವ ಹಿನ್ನೆಲೆ ಸೆಸ್ ವಿಧಿಸಲು ನಿರ್ಧರಿಸಲಾಗಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stock Market:ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 495 ಅಂಕ ಏರಿಕೆ;ಲಾಭಗಳಿಸಿದ ಷೇರು ಯಾವುದು?
Odisha: ಗೋಪಾಲ್ ಪುರ್ ಬಂದರು ಅದಾನಿ ಕಂಪನಿ ತೆಕ್ಕೆಗೆ: 3,080 ಕೋಟಿ ರೂ.ಗೆ ಒಪ್ಪಂದ
Married; ಮೆಕ್ಸಿಕೋದ ಉದ್ಯಮಿ ವರಿಸಿದ ಝೊಮ್ಯಾಟೊ ಸಿಇಒ?
Gold Price Soar: ಹಳದಿ ಲೋಹ ಚಿನ್ನದ ಬೆಲೆ ಸಾರ್ವಕಾಲಿಕ ದಾಖಲೆಯ ಏರಿಕೆ!
ಇಂಡಿಯನ್ ಆಯಿಲ್ ಕಂಪನಿಗೆ ನಿರ್ದೇಶಕರಾಗಿ (ಎಚ್ಆರ್) ರಶ್ಮಿ ಗೋವಿಲ್ ಅಧಿಕಾರ ಸ್ವೀಕಾರ
MUST WATCH
ಹೊಸ ಸೇರ್ಪಡೆ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
Bengaluru: ಪೇಂಟರ್ ಕೊಂದು ಪೊಲೀಸ್ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು