ಫೋನ್ ಕದ್ದಾಲಿಕೆ ಕುರಿತು ಎಚ್ ಡಿಕೆ ಹೇಳಿಕೆ ಬಾಲಿಶ: ಸಚಿವ ಸಿ.ಸಿ.ಪಾಟೀಲ
Team Udayavani, Sep 27, 2019, 12:07 PM IST
ವಿಜಯಪುರ: ಎಲ್ಲ ಸರಕಾರಗಳೂ ಫೋನ್ ಕದ್ದಾಲಿಕೆ ಮಾಡುತ್ತವೆ ಎಂದು ಹೇಳಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಹೇಳಿಕೆ ಬಾಲಿಶತನದಿಂದ ಕೂಡಿದೆ ಎಂದು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ. ಪಾಟೀಲ ತಿರುಗೇಟು ನೀಡಿದ್ದಾರೆ.
ಶುಕ್ರವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು ಎಲ್ಲಾ ಸರ್ಕಾರದಲ್ಲಿಯೂ ಪೋನ್ ಕದ್ದಾಲಿಕೆ ನಡೆಯತ್ತದೆ ಎಂದು ನೀಡಿದ ಹೇಳಿಕೆಯನ್ನು ಗಮನಿಸಿದ್ದೇನೆ. ಮಾಜಿ ಮುಖ್ಯಮಂತ್ರಿ ಆಗಿರುವ ಅವರಿಗೆ ಇಂಥ ಹೇಳಿಕೆ ಶೋಭೆ ತರುವುದಿಲ್ಲ. ಯಾರದೇ ಪೋನ್ ಟ್ಯಾಪಿಂಗ್ ಮಾಡುವುದು ಕಾನೂನು ಪ್ರಕಾರ ಅಪರಾಧ ಎಂದರು.
ಫೋನ್ ಕದ್ದಾಲಿಕೆ ಪ್ರಕರಣದಲ್ಲಿ ಸಿಬಿಐ ಈಗಾಗಲೇ ತನಿಖೆ ಆರಂಸಿದ್ದು, ಹಿರಿಯ ಪೊಲೀಸ್ ಅಧಿಕಾರಿ ಅಲೋಕ್ ಕುಮಾರ್ ಅವರ ವಿಚಾರಣೆ ನಡೆಯುತ್ತಿದೆ.
ವಿಜಯಪುರ ಜಿಲ್ಲಾ ಬಿಜೆಪಿ ಭಿನ್ನಮತ ಕುರಿತು ಪ್ರಶ್ನೆಗೆ ಉತ್ತರಿಸಿದ ಸಚಿವ ಸಿ.ಸಿ.ಪಾಟೀಲ, ಎಲ್ಲಾ ಸಮಸ್ಯೆಗೂ ಪರಿಹಾರ ಇದ್ದೇ ಇರುತ್ತದೆ. ಇಲ್ಲಿನ ಸಮಸ್ಯೆ ಬಗೆ ಹರಿಸಲಾಗುತ್ತದೆ ಎಂದರು.