ಫೋನ್ ಕದ್ದಾಲಿಕೆ ನಾವು ಸಿಬಿಐ ತನಿಖೆ ಆಗ್ರಹಿಸಿಲ್ಲ: ಎಂ.ಬಿ.ಪಾಟೀಲ್
Team Udayavani, Aug 19, 2019, 5:07 PM IST
ವಿಜಯಪುರ: ಫೋನ್ ಕದ್ದಾಲಿಕೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿ ಎಂದು ನಾವೇನೂ ಕೇಳಿರಲಿಲ್ಲ. ನಮ್ಮ ರಾಜ್ಯದ ಪೊಲೀಸರಲ್ಲೇ ಸಿಬಿಐ ಕೂಡ ತನಿಖೆ ಮಾಡಲಾಗದ ಪ್ರಕರಣ ಬೇಧಿಸಿರುವ ದಕ್ಷ ಅಧಿಕಾರಿಗಳಿದ್ದಾರೆ. ಆದರೂ ಸಿ.ಎಂ. ಯಡಿಯೂರಪ್ಪ ಅವರ ನಿರ್ಧಾ ಸೂಕ್ತವೆನಿಸಿಲ್ಲ ಎಂದು ಮಾಜಿ ಗೃಹ ಸಚಿವ ಎಂ.ಬಿ.ಪಾಟೀಲ್ ಪ್ರತಿಕ್ರಿಯಿಸಿದ್ದಾರೆ.
ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಪೋನ್ ಕದ್ದಾಲಿಕೆ ಪ್ರಕರಣವನ್ನ ಸಿಬಿಐಗೆ ಕೊಡುವಂತಹ ಅವಶ್ಯಕತೆ ಇರಲಿಲ್ಲ. ಈಗಲೂ ನನ್ನ ಈ ಹೇಳಿಕೆಗೆ ಬದ್ಧವಾಗಿದ್ದೇನೆ ಎಂದರು.
ನಮ್ಮ ಪೊಲೀಸ್ ಇಲಾಖೆಯಲ್ಲೆ ಅನೇಕರು ದಕ್ಷ , ಪ್ರಾಮಾಣಿಕ ಅಧಿಕಾರಿಗಳಿದ್ದಾರೆ.
ಸಿಬಿಐ ಸಂಸ್ಥೆಯಿಂದ ತನಿಖೆ ಆಗದ ಎಂ.ಎಂ. ಕಲಬುರ್ಗಿ, ಗೌರಿ ಲಂಕೇಶ ಅವರ ಹತ್ಯೆಯ ಪ್ರಕಣ ಬೇಧಿಸಿದ್ದೇ ಕರ್ನಾಟಕ ಪೊಲೀಸ್ ಎಂಬುದನ್ನು ಮರೆಯಬಾರದು ಎಂದರು.
ಆದರೂ ರಾಜ್ಯ ಸರಕಾರ ಸಿಬಿಐ ತನಿಖೆಗೆ ವಹಿಸಿದೆ. ಇದರ ಜೊತೆಗೆ ಆಪರೇಷನ್ ಕಮಲದ ಸಂದರ್ಭದಲ್ಲಿ ಕೇಂದ್ರ ಸರಕಾರ ಫೋನ್ ಕದ್ದಾಲಿಕೆ ಮಾಡಿರುವ ಆರೋಪ ಇದೆ. ಅದನ್ನು ಸಿಬಿಐ ತನಿಖೆ ಮಾಡಲಿ ಎಂದು ಆಗ್ರಹಿಸಿದರು.
ಐಎಂಎ ಪ್ರಕರಣದಲ್ಲಿ ನಾವು ಯಾರನ್ನ ರಕ್ಷಿಸಲು ಇಲ್ಲಿ ಹೊರಟಿಲ್ಲ. ಅಂತರರಾಜ್ಯ ಪ್ರಕರಣ ಆಗಿರುವ ಇದನ್ನು ಸಿಬಿಐ ತನಿಖೆಗೆ ಕೊಡಲು ನಮ್ಮ ಅಭ್ಯಂತರ ಇಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
MUST WATCH
ಹೊಸ ಸೇರ್ಪಡೆ
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…