ದಸರಾ ಬಳಿಕ ಸುಪ್ರೀಂನಲ್ಲಿ ಭೌತಿಕ ವಿಚಾರಣೆ?
Team Udayavani, Sep 27, 2021, 6:45 AM IST
ಹೊಸದಿಲ್ಲಿ: ದಸರಾ ರಜೆಯ ಬಳಿಕ ಸುಪ್ರೀಂ ಕೋರ್ಟ್ನಲ್ಲಿ ಭೌತಿಕ ವಿಚಾರಣೆ ಪೂರ್ಣ ಪ್ರಮಾಣದಲ್ಲಿ ಆರಂಭವಾಗಲಿದೆಯೇ?
ದೇಶದ ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ಈ ಸುಳಿವು ನೀಡಿದ್ದಾರೆ. ಕೊರೊನಾ ಮೂರನೇ ಅಲೆ ಬಾರದೆ ಇದ್ದರೆ ದಸರಾ ರಜೆ ಬಳಿಕ ಸುಪ್ರೀಂನಲ್ಲಿ ಪೂರ್ಣ ಪ್ರಮಾಣದಲ್ಲಿ ಭೌತಿಕ ವಿಚಾರಣೆ ಪುನರಾರಂಭಿಸಬಹುದು ಎಂಬ ವಿಶ್ವಾಸವಿದೆ ಎಂದಿದ್ದಾರೆ.
ಭೌತಿಕ ವಿಚಾರಣೆ ಆರಂಭಕ್ಕೆ ನಮ್ಮ ಅಭ್ಯಂತರವಿಲ್ಲ. ಬಹುತೇಕ ವಕೀಲರು ಇದಕ್ಕೆ ಆಸಕ್ತಿ ತೋರಿದ್ದಾರೆ. ಆದರೆ ತಜ್ಞ ವೈದ್ಯರ ಸೂಚನೆ ಇರುವ ಕಾರಣ ಅಪಾಯ ಮೈಮೇಲೆ ಎಳೆದುಕೊಳ್ಳಲು ಬಯಸುವುದಿಲ್ಲ. ಮೂರನೇ ಅಲೆ ಬಾರದೆ ಇದ್ದರೆ, ದಸರಾ ಬಳಿಕ ಭೌತಿಕ ವಿಚಾರಣೆ ಆರಂಭವಾಗಬಹುದು ಎಂದು ಸಿಜೆಐ ಹೇಳಿದ್ದಾರೆ.
ಇದನ್ನೂ ಓದಿ:ನನ್ನ ರಾಜೀನಾಮೆಗೆ ಮೋದಿಯೂ ಬೆರಗಾಗಿದ್ದರು: ಬಿಎಸ್ವೈ
ಶೇ. 50 ಮೀಸಲಾತಿ ಸಿಗಲಿ
ನ್ಯಾಯಾಂಗದಲ್ಲಿ ಮಹಿಳೆಯರಿಗೆ ಶೇ. 50 ಮೀಸಲಾತಿ ಸಿಗಬೇಕು. ದೇಶದ ಕಾನೂನು ಕಾಲೇಜುಗಳಲ್ಲಿಯೂ ಹೆಣ್ಣುಮಕ್ಕಳಿಗೆ ಇದೇ ಮಾದರಿಯ ಮೀಸಲಾತಿಗೆ ಬೆಂಬಲ ನೀಡುವುದಾಗಿಯೂ ಸಿಜೆಐ ಘೋಷಿಸಿದ್ದಾರೆ.
ಇದು ಸಾವಿರಾರು ವರ್ಷಗಳ ಶೋಷಣೆಗೆ ಸಂಬಂಧಿಸಿದ ವಿಚಾರ. ನ್ಯಾಯಾಂಗದ ಕೆಳಹಂತಗಳಲ್ಲಿ ಶೇ. 30ಕ್ಕಿಂತಲೂ ಕಡಿಮೆ ಮಹಿಳಾ ನ್ಯಾಯಮೂರ್ತಿಗಳಿದ್ದಾರೆ. ಹೈಕೋರ್ಟ್ಗಳಲ್ಲಿ ಶೇ. 11.5ರಷ್ಟಿದ್ದರೆ, ಸುಪ್ರೀಂನಲ್ಲಿ ಕೇವಲ ಶೇ. 11-12ರಷ್ಟು ಮಹಿಳೆಯರಿದ್ದಾರೆ. ಮೀಸಲಾತಿ ನಿಮ್ಮೆಲ್ಲರ ಹಕ್ಕು ಎಂದು ಸಿಜೆಐ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ