ರಾಜ್ಯ ಬಿಜೆಪಿ ಚುನಾವಣ ಉಸ್ತುವಾರಿಯಾಗಿ ಪಿಯೂಶ್ ಗೋಯಲ್?
Team Udayavani, Feb 3, 2023, 9:13 PM IST
ಬೆಂಗಳೂರು: ರಾಜ್ಯ ಬಿಜೆಪಿ ಚುನಾವಣ ಉಸ್ತುವಾರಿಯಾಗಿ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆ ಸಚಿವ ಪಿಯೂಷ್ ಗೋಯಲ್ ನೇಮಕವಾಗುವ ಸಾಧ್ಯತೆ ದಟ್ಟವಾಗಿದ್ದು, ಶನಿವಾರ ಅವರು ಬೆಂಗಳೂರಿಗೆ ಆಗಮಿಸಲಿದ್ದಾರೆ.
2018ರ ಚುನಾವಣೆ ಸಂದರ್ಭದಲ್ಲೂ ಅವರು ರಾಜ್ಯದ ಉಸ್ತುವಾರಿಯಾಗಿದ್ದರು. ರಾಜ್ಯದ ವಿದ್ಯಮಾನಗಳ ಬಗ್ಗೆ ಸಾಕಷ್ಟು ಮಾಹಿತಿ ಹೊಂದಿರುವ ಹಿನ್ನೆಲೆಯಲ್ಲಿ ಅವರನ್ನೇ ಮತ್ತೆ ನೇಮಿಸಬಹುದು ಎಂದು ಬಿಜೆಪಿ ಮೂಲಗಳು ತಿಳಿಸಿವೆ.
ಆದರೆ ಅವರ ನೇಮಕದ ಬಗ್ಗೆ ಇದುವರೆಗೂ ಅಧಿಕೃತ ಆದೇಶ ಹೊರಬಂದಿಲ್ಲ. ಗೋಯಲ್ ಅವರು ಶನಿವಾರ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.