ಗ್ರಾಮೀಣ ಮಟ್ಟದಿಂದಲೇ ಯುವ ಸಬಲೀಕರಣಕ್ಕೆ ಯೋಜನೆ
Team Udayavani, Feb 3, 2022, 6:25 AM IST
ಬೆಂಗಳೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕಾರ್ಯಕ್ರಮ ಗ್ರಾಮೀಣ ಮಟ್ಟದಿಂದಲೇ ಯಶಸ್ವಿಗೊಳಿಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯೊಂದಿಗೆ ಜತೆಗೂಡಿ ಕಾರ್ಯಕ್ರಮ ರೂಪಿಸಲಾಗಿದೆ.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿವಿಧ ಅಭಿವೃದ್ಧಿ ಯೋಜನೆಗಳಡಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಪಂಚಾಯತ್ ಸಂಸ್ಥೆಗಳಿಗೆ ಅನುದಾನ ಬಿಡುಗಡೆ ಮಾಡುತ್ತಿವೆ. ಹೀಗಾಗಿ, ಗ್ರಾಮೀಣಾಭಿವೃದ್ಧಿ ಪಂಚಾಯತ್ ಇಲಾಖೆಯ ಜತೆಗೂಡಿ ಅನುಷ್ಠಾನಕ್ಕೆ ತೀರ್ಮಾನಿಸಲಾಗಿದೆ.
ಸಿಬ್ಬಂದಿ ಕೊರತೆಯಿಂದ ಪಂಚಾಯತ್ ಮಟ್ಟದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಲು ಹಿನ್ನಡೆಯಾಗುತ್ತಿದೆ. ಗ್ರಾಮೀಣಾಭಿವೃದ್ಧಿ ಇಲಾಖೆ ಸಹಯೋಗದೊಂದಿಗೆ ಸ್ಥಳೀಯರು, ಸಂಘ ಸಂಸ್ಥೆಗಳು, ಅಧ್ಯಕ್ಷರು, ಕಾರ್ಯದರ್ಶಿಗಳನ್ನು ನಿಯೋಜಿಸಿ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲು ಉದ್ದೇಶಿಸಲಾಗಿದೆ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣ ಗೌಡ ತಿಳಿಸಿದ್ದಾರೆ.
ಗ್ರಾಮೀಣ ಭಾಗದಲ್ಲಿ ದೇಸೀ ಹಾಗೂ ಜಾನಪದ ಮತ್ತು ಸ್ಥಳೀಯ ಕ್ರೀಡೆಗಳಿಗೆ ಉತ್ತೇಜನ ನೀಡಲು ಗ್ರಾಮೀಣ ಕ್ರೀಡೋತ್ಸವವನ್ನು ಆಯೋಜಿಸಲಾಗುತ್ತಿದೆ. ಅಲ್ಲದೇ ‘ನಮ್ಮೂರ ಶಾಲೆಗೆ ನಮ್ಮ ಯುವಜನರು’ ಕಾರ್ಯಕ್ರಮದಡಿ ಶಾಲೆಗಾಗಿ ಗಣನೀಯ ಕೊಡುಗೆ ನೀಡುವ ಯುವ ಸಂಘಗಳನ್ನು ತಾಲೂಕಿಗೆ ಒಂದರಂತೆ ಗುರುತಿಸಿ ಪುರಸ್ಕಾರ ನೀಡಲಾಗುತ್ತಿದೆ ಎಂದು ಹೇಳಿದರು.
ಇದನ್ನೂ ಓದಿ:ರಾಜ್ಯದಲ್ಲಿ ಇಂದು 20,505 ಹೊಸ ಕೋವಿಡ್ ಪ್ರಕರಣಗಳು ಪತ್ತೆ : 81 ಮಂದಿ ಬಲಿ
ವಾರ್ಡ್ ಸಭೆ ಹಾಗೂ ಗ್ರಾಮ ಸಭೆ ಮೂಲಕ 5 ವರ್ಷ ದೂರದೃಷ್ಠಿ ಯೋಜನೆ ತಯಾರಿಸಿ, ಅದರಿಂದ ವಾರ್ಷಿಕ ಕಾರ್ಯಕ್ರಮ ರೂಪಿಸಲು 15 ಅಂಶಗಳಿಗೆ ಒತ್ತು ನೀಡಿ ಅನುಷ್ಟಾನಗೊಳಿಸಲಾಗುವುದು ಎಂದು ತಿಳಿಸಿದರು.
ಸಾಂಸ್ಕೃತಿಕ ಪರಂಪರೆಯ ಸಂರಕ್ಷಣೆ ಮತ್ತು ಪುನಶ್ಚೇತನಗೊಳಿಸಲು ಸಾಂಸ್ಕೃತಿಕ ಕೇಂದ್ರಗಳ ಸ್ಥಾಪನೆ ಹಾಗೂ ಗ್ರಾಮೀಣ ಕಲಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಆಯೋಜನೆಗೆ ಯುವ ಸಂಘಗಳ ಮೂಲಕ ಉತ್ತೇಜನ ನೀಡಲಾಗುವುದು. ಯುವಜನ ಮೇಳ, ಕ್ರೀಡಾ ಮೇಳಗಳ ಆಯೋಜನೆ, ಧಾರ್ಮಿಕ ಸಾಮರಸ್ಯ ಮೂಡಿಸಲಾಗುವುದು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
MUST WATCH
ಹೊಸ ಸೇರ್ಪಡೆ
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ