ಪ್ರಧಾನಿ ಮೋದಿ ಜನ್ಮದಿನ ಪ್ಲಾಸ್ಮಾ ದಾನ ಮಾಡಿದ ಶಾಸಕ ಡಾ.ವೈ ಭರತ್ ಶೆಟ್ಟಿ
Team Udayavani, Sep 17, 2020, 5:00 PM IST
ಸುರತ್ಕಲ್ : ಪ್ರಧಾನಿ ನರೇಂದ್ರ ಮೋದಿಜಿಯವರ ಜನ್ಮದಿನದ ಅಂಗವಾಗಿ ಮಂಗಳೂರು ನಗರ ಉತ್ತರ ಶಾಸಕರಾದ ಡಾ.ವೈ ಭರತ್ ಶೆಟ್ಟಿಯವರು ಪ್ಲಾಸ್ಮಾ ದಾನ ಮಾಡಿ ಉತ್ತಮ ಪಂಕ್ತಿ ಹಾಕಿಕೊಟ್ಟಿದ್ದಾರೆ.
ಸೇವೆಯೇ ಸಂಘಟನೆ ಎನ್ನುವ ಪಕ್ಷದ ಸಿದ್ಧಾಂತದಂತೆ ಸೆಪ್ಟೆಂಬರ್ 14 ರಿಂದ 20 ರ ತನಕ ರಾಷ್ಟ್ರದಲ್ಲಿ ಸೇವಾ ಸಪ್ತಾಹ ಆಚರಿಸಲಾಗುತ್ತದೆ.
ಕೋವಿಡ್ 19 ನೆಗೆಟಿವ್ ಬಂದು ಗುಣಮುಖರಾಗಿರುವ ವ್ಯಕ್ತಿಗಳ ಪ್ಲಾಸ್ಮಾವನ್ನು ಕೋವಿಡ್ 19 ಸೋಂಕಿತರಿಗೆ ನೀಡುವುದರಿಂದ ಸೋಂಕಿತರು ಶೀಘ್ರ ಗುಣಮುಖರಾಗುತ್ತಾರೆ ಎನ್ನುವುದು ವೈಜ್ಞಾನಿಕವಾಗಿ ಸಾಬೀತಾಗಿದೆ. ಈ ನಿಟ್ಟಿನಲ್ಲಿ ಮಂಗಳೂರಿನ ದೇರಳಕಟ್ಟೆಯಲ್ಲಿರುವ ಕೆ.ಎಸ್ ಹೆಗ್ಡೆ ಆಸ್ಪತ್ರೆಯಲ್ಲಿ ಶಾಸಕ ಡಾ.ಭರತ್ ಶೆಟ್ಟಿಯವರು ಗುರುವಾರ ಪ್ಲಾಸ್ಮಾ ದಾನ ಮಾಡಿದ್ದಾರೆ.
ಪ್ಲಾಸ್ಮಾ ದಾನ ಮಾಡುವ ಮೊದಲು ವೈದ್ಯರು ಪ್ಲಾಸ್ಮಾ ದಾನ ಮಾಡುವ ವ್ಯಕ್ತಿಯನ್ನು ಪರೀಕ್ಷಿಸಿ ಒಪ್ಪಿಗೆ ನೀಡಬೇಕಾಗುತ್ತದೆ. ಡಾ.ಭರತ್ ಶೆಟ್ಟಿಯವರು ಬುಧವಾರ ಈ ಪ್ರಕ್ರಿಯೆಗೆ ಒಳಗಾಗಿದ್ದು ವೈದ್ಯರು ಪ್ಲಾಸ್ಮಾ ದಾನ ಮಾಡಲು ಯಾವುದೇ ತೊಂದರೆ ಇಲ್ಲ ಎಂದು ತಿಳಿಸಿದ ಇವತ್ತು ಪ್ಲಾಸ್ಮಾ ದಾನ ಮಾಡಿದ್ದಾರೆ.
ಈ ಮೂಲಕ ರಾಜ್ಯದ ಮೊದಲ ಶಾಸಕ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಶಾಸಕರ ಈ ನಡೆ ಮೋದಿ ಅಭಿಮಾನಿಗಳಲ್ಲಿ ಹಾಗೂ ಜನಸಾಮಾನ್ಯರಲ್ಲಿ ಮೆಚ್ಚುಗೆಗೆ ಪಾತ್ರವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
MUST WATCH
ಹೊಸ ಸೇರ್ಪಡೆ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು