ದೆಹಲಿ ಪೊಲೀಸ್ ಕಮಿಷನರ್ ರಾಕೇಶ್ ಅಸ್ತಾನಾ ನೇಮಕಾತಿ ಪ್ರಶ್ನಿಸಿದ್ದ ಅರ್ಜಿ ವಜಾ
ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯದ ಆದೇಶವನ್ನು ರದ್ದುಗೊಳಿಸುಂತ ಮನವಿ ಮಾಡಿದ್ದರು.
Team Udayavani, Oct 12, 2021, 3:32 PM IST
ನವದೆಹಲಿ:ದೆಹಲಿ ಪೊಲೀಸ್ ಕಮಿಷನರ್ ರಾಕೇಶ್ ಅಸ್ತಾನಾ ಅವರ ನೇಮಕಾತಿಯನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದ್ದು, ಇದರೊಂದಿಗೆ ಅಸ್ತಾನಾಗೆ ದೊಡ್ಡ ನಿರಾಳತೆ ಸಿಕ್ಕಂತಾಗಿದೆ.
ಇದನ್ನೂ ಓದಿ:ಕರ್ನಾಟಕದ 11 ಜನ ಮೀನುಗಾರರನ್ನು ವಶಕ್ಕೆ ಪಡೆದ ಗೋವಾ ಪೊಲೀಸರು
ಅಸ್ತಾನಾ ನೇಮಕಾತಿ ಪ್ರಶ್ನಿಸಿ ವಕೀಲ ಸದ್ರೆ ಅಲಾಂ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಜಸ್ಟೀಸ್ ಡಿಎನ್ ಪಟೇಲ್ ಮತ್ತು ಜಸ್ಟೀಸ್ ಜ್ಯೋತಿ ಸಿಂಗ್ ಈ ಆದೇಶವನ್ನು ನೀಡಿರುವುದಾಗಿ ವರದಿ ಹೇಳಿದೆ.
ಗುಜರಾತ್ ಕೇಡರ್ ನ ಐಪಿಎಸ್ ಅಧಿಕಾರಿ ರಾಕೇಶ್ ಅಸ್ತಾನಾ ಅವರನ್ನು ನಗರ ಪೊಲೀಸ್ ಕಮಿಷನರ್ ಆಗಿ ನೇಮಕ ಮಾಡಿ ಹೊರಡಿಸಿರುವ ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯದ ಆದೇಶವನ್ನು ರದ್ದುಗೊಳಿಸುಂತ ಮನವಿ ಮಾಡಿದ್ದರು.
ದೂರಿನ ಪ್ರಕಾರ, ಪ್ರಕಾಶ್ ಸಿಂಗ್ ಪ್ರಕರಣದಲ್ಲಿ ಭಾರತದ ಸುಪ್ರೀಂಕೋರ್ಟ್ ಜಾರಿಗೊಳಿಸಿರುವ ನಿರ್ದೇಶನಗಳ ಸ್ಪಷ್ಟವಾದ ಉಲ್ಲಂಘನೆಯಾಗಿದೆ ಎಂದು ಪ್ರತಿಪಾದಿಸಿದೆ.
ದೆಹಲಿ ಪೊಲೀಸ್ ಕಮಿಷನರ್ ನೇಮಕಾತಿಗಾಗಿ ಯುಪಿಎಸ್ ಸಿ ಸಮಿತಿಯನ್ನು ರಚಿಸಿಲ್ಲ. ಅಲ್ಲದೇ ಕನಿಷ್ಠ ಎರಡು ವರ್ಷಗಳ ಅಧಿಕಾರಾವಧಿ ಪೂರ್ಣಗೊಳಿಸಬೇಕೆಂಬ ನಿಯಮವನ್ನೂ ಕೂಡಾ ನಿರ್ಲಕ್ಷಿಸಲಾಗಿದೆ ಎಂದು ಅರ್ಜಿಯಲ್ಲಿ ವಾದಿಸಿದೆ. ವಾದ, ಪ್ರತಿವಾದ ಆಲಿಸಿದ ಹೈಕೋರ್ಟ್ ಪೀಠ ಅರ್ಜಿಯನ್ನು ವಜಾಗೊಳಿಸಿರುವುದಾಗಿ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು