ಎ.29 ರಂದು ವಿಜಯಪುರದಲ್ಲಿ ಪ್ರಧಾನಿ ಮೋದಿ ಪ್ರಚಾರ
Team Udayavani, Apr 28, 2023, 3:13 PM IST
ವಿಜಯಪುರ: ಪ್ರಧಾನಿ ನರೇಂದ್ರ ಮೋದಿ ಅವರು ಎ.29 ರಂದು ಮಧ್ಯಾಹ್ನ 12 ಗಂಟೆಗೆ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ವಿಜಯಪುರದ ಸೈನಿಕ ಶಾಲೆಯಲ್ಲಿ ನಡೆಯಲಿರುವ ಬೃಹತ್ ಸಮಾವೇಶದಲ್ಲಿ ತಮ್ಮ ವಿಚಾರಗಳನ್ನು ಹಂಚಿಕೊಳ್ಳಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್. ಪಾಟೀಲ ಕುಚಬಾಳ ಹೇಳಿದರು.
ಶುಕ್ರವಾರ ನಗರದಲ್ಲಿರುವ ಪಕ್ಷದ ಕಛೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಸೈನಿಕ ಶಾಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ನಡೆಸುವ ಚುನಾವಣಾ ಪ್ರಚಾರ ಸಭೆ ವೇದಿಕೆ ವ್ಯವಸ್ಥೆ ಮಾಡಲಾಗಿದೆ. ಪಾಲ್ಗೊಳ್ಳುವ ಅಪೂರ್ವ ಕಾರ್ಯಕ್ರಮಕ್ಕೆ ಕಳೆದ ಒಂದು ವಾರದಿಂದ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದರು.
ವಿಜಯಪುರ ಜಿಲ್ಲೆಯ 8 ಕ್ಷೇತ್ರಗಳು ಮಾತ್ರವಲ್ಲದೇ ನೆರೆಯ ಬಾಗಲಕೋಟೆ ಜಿಲ್ಲೆಯ ಜಮಖಂಡಿ ಕ್ರೇತ್ರವೂ ಸೇರಿದಂತೆ ಸುಂಆರು 2 ಲಕ್ಷ ಜನ ಸೇರುವ ನಿರೀಕ್ಷೆ ಇದೆ. ವೇದಿಕೆ ಮುಂಭಾಗದಲ್ಲಿ 80 ಸಾವಿರ ಆಸನಗಳ ವ್ಯವಸ್ಥೆ ಮಾಡಲಾಗಿದೆ ಎಂದರು.
ಉತ್ಸಾಹ ಹೆಚ್ಚಾಗಿದ್ದು, ಜಿಲ್ಲೆಯ 8 ವಿಧಾನಸಭಾ ಕ್ಷೇತ್ರ ಹಾಗೂ ಬಾಗಲಕೋಟ ಜಮಖಂಡಿ ವಿಧಾನಸಭಾ ಸೇರಿ 9 ಕ್ಷೇತ್ರಗಳಿಂದಲೂ ಲಕ್ಷಾಂತರ ಜನತೆ ಆಗಮಿಸಲಿದ್ದಾರೆ. ಕಾರ್ಯಕ್ರಮದ ವೇದಿಕೆ ಮೇಲೆ 9 ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿಗಳು, ಅವಳಿ ಜಿಲ್ಲೆಗಳ ಸಂಸದರು, ಪಕ್ಷದ ಜಿಲ್ಲಾಧ್ಯಕ್ಷರು ವೇದಿಕೆ ಮೇಲೆ ಇರಲಿದ್ದಾರೆ ಎಂದರು.
ಈ ಪ್ರಚಾರ ಕಾರ್ಯಕ್ರಮಕ್ಕೆ ಗ್ರಾಮೀಣ ಭಾಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರು ಪಾಲ್ಗೊಳ್ಳುತ್ತಿದ್ದು, ಸ್ವಯಂ ಪ್ರೇರಿತವಾಗಿ ಜನರು ಪ್ರಧಾನಿಗಳ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿರುವುದು ಗಮನೀಯ. ಕಾರ್ಯಕ್ರಮದ ವೇದಿಕೆಯ ಕಾರ್ಯಕ್ರಮವನ್ನು ಜನರು ಹತ್ತಿರದಿಂದ ವೀಕ್ಷಿಸಲು ವೇದಿಕೆ ಮುಂಭಾಗದಲ್ಲಿ ಎಲ್ಇಡಿ ಪರದೆ ಅಳವಡಿಸುವ ಚಿಂತನೆ ನಡೆದಿದೆ.
ಬೀದರ ಜಿಲ್ಲೆಯ ಹುಮ್ನಾಬಾದ ಕಾರ್ಯಕ್ರಮ ಮುಗುಸಿಕೊಂಡು ಮಧ್ಯಾಹ್ನ 12 ಗಂಟೆಗೆ ಪ್ರಧಾನಿ ಮೋದಿ ಅವರು ವಿಜಯಪುರ ಸೈನಿಕ ಶಾಲೆಗೆ ಆಗಮಿಸಲಿದ್ದು, ನೇರವಾಗಿ ಬಹಿರಂಗ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ, ನಂತರ ಹಾರೋಗೇರಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ವಿವರಿಸಿದರು.
ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಜನರಿಗೆ ವಾಹನ ದಟ್ಟಣೆ ಆಗದಂತೆ ಸ್ಥಳಗಳಲ್ಲಿ ಪಾಕಿರ್ಂಗ್ ವ್ಯವಸ್ಥೆ ಮಾಡಲಾಗಿದೆ. ಜಿಲ್ಲಾ ಆಸ್ಪತ್ರೆಯ ಮೈದಾನ, ಅಟಲ್ ಬಿಹಾರಿ ವಾಜಪೇಯಿ ಶಾಲೆ, ರಿಂಗ್ ರೋಡ ಇಟಗಿ ಪೆಟ್ರೋಲ್ ಬಳಿ ಸೇರಿದಂತೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸುವ ಜನರ ವಾಹನ ನಿಲುಗಡೆಗೆ ಅವಕಾಶ ಕಲ್ಪಿಸಲಾಗಿದೆ ಎಂದರು.
ಲಿಂಬೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಚಂದ್ರಶೇಖರ ಕವಟಗಿ, ಪಾಲಿಕೆ ಸದಸ್ಯ ಶಿವರುದ್ರ ಬಾಗಲಕೋಟ, ಪಕ್ಷದ ಚುನಾವಣಾ ಉಸ್ತುವಾರಿ ಮಲ್ಲಿಕಾರ್ಜುನ ಜೋಗೂರ, ಸಂಜಯ ಪಾಟೀಲ ಕನಮಡಿ, ಬಸವರಾಜ ಬಿರಾದಾರ, ವಿಜಯ ಜೋಶಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್