ಬಿಹಾರ: ಹೆದ್ದಾರಿ, ಇಂಟರ್ನೆಟ್ ಯೋಜನೆಗೆ ಪ್ರಧಾನಿ ಚಾಲನೆ
45,945 ಹಳ್ಳಿಗಳ ಮನೆಗಳಿಗೆ ಇಂಟರ್ನೆಂಟ್ ಸೌಕರ್ಯ ನೀಡುವ ಉದ್ದೇಶದ ಫೈಬರ್ ಇಂಟರ್ನೆಟ್ ಯೋಜನೆಗೂ ಚಾಲನೆ
Team Udayavani, Sep 22, 2020, 10:04 AM IST
ನವದೆಹಲಿ: ಬಿಹಾರದಲ್ಲಿ ಅಂದಾಜು 14,258 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ಒಂಭತ್ತು ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಪ್ರಧಾನಿ ನರೇಂದ್ರಮೋದಿಯವರು ಸೋಮವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಶಂಕುಸ್ಥಾಪನೆ ನೆರವೇರಿಸಿದರು.
ಅದರ ಜೊತೆಗೆ, ಬಿಹಾರದ 45,945 ಹಳ್ಳಿಗಳ ಮನೆಗಳಿಗೆ ಇಂಟರ್ನೆಂಟ್ ಸೌಕರ್ಯ ನೀಡುವ ಉದ್ದೇಶದ ಫೈಬರ್ ಇಂಟರ್ನೆಟ್ ಯೋಜನೆಗೂ ಚಾಲನೆ ನೀಡಿದರು.ಈಸಂದರ್ಭದಲ್ಲಿ ಮಾತನಾಡಿದ ಅವರು, “”2014ರಲ್ಲಿ ತಾವು ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಾಗಿನಿಂದ ಹೆದ್ದಾರಿಗಳ ನಿರ್ಮಾಣ ವೇಗ ದುಪ್ಪಟ್ಟಾಗಿದ್ದು, ಅವುಗಳಿಗಾಗಿ ಮೀಸಲಿಡಲಾಗುತ್ತಿದ್ದ ಹಣ ಐದು ಪಟ್ಟು ಹೆಚ್ಚಾಗಿದೆ.
ಮುಂದಿನ ಮೂರ್ನಾಲ್ಕು ವರ್ಷಗಳಲ್ಲಿ ಮೂಲ ಸೌಕರ್ಯಾಭಿವೃದ್ಧಿಗೆ 110 ಲಕ್ಷ ಕೋಟಿ ರೂ.ಗ ಳನ್ನು ಮೀಸಲಿಡಲು ನಿರ್ಧರಿಸಿದ್ದು, ಅದರಲ್ಲಿ 19 ಲಕ್ಷ ಕೋಟಿ ರೂ.ಗ ಳನ್ನು ಹೆದ್ದಾರಿ ನಿರ್ಮಾಣಕ್ಕಾಗಿಯೇ ಬಳಸಲಾಗುತ್ತದೆ” ಎಂದರು.
ಕೇರಳದ 10 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್
ತಿರುವನಂತಪುರಂ: ಬಂಗಾಳಕೊಲ್ಲಿಯ ಈಶಾನ್ಯ ಭಾಗದಲ್ಲಿ ಪುನಃ ವಾಯುಭಾರ ಕುಸಿತ ಉಂಟಾಗಿರುವ ಕಾರಣ, ಕೇರಳದಲ್ಲಿ ಮುಂದಿನ 2-3 ದಿನಗಳಲ್ಲಿ ಹೆಚ್ಚು ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕೊಟ್ಟಾಯಂ, ಎರ್ನಾಕುಳಂ, ಇಡುಕ್ಕಿ, ತ್ರಿಶೂರ್, ಪಾಲ ಕ್ಕಾಡ್, ಮಲಪ್ಪುರಂ, ಕಲ್ಲಿಕೋಟೆ, ವಯನಾಡ್, ಕಣ್ಣೂರು ಹಾಗೂ ಕಾಸರಗೋಡು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಭಾನುವಾರ-ಸೋಮವಾರ ರಾಜ್ಯಾದ್ಯಂತ ಸರಾಸರಿ 7 ಸೆಂ.ಮೀ. ಮಳೆಯಾಗಿದೆ. ತಿರುವನಂತಪುರದಲ್ಲಿ ಒಬ್ಬರು ಹಾಗೂ ಕಾಸರಗೋಡಿನಲ್ಲಿ ಇಬ್ಬರು ಮಳೆ ಸಂಬಂಧಿತ ಅವ ಘಡದಲ್ಲಿ ಸಾವನ್ನಪ್ಪಿದ್ದಾರೆ. ಕಾಸರಗೋಡಿನಲ್ಲಿ ಎಂಟು ಮನೆಗಳುಕುಸಿದುಬಿದ್ದಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಧ್ಯಪ್ರದೇಶದಲ್ಲೂ ವರ್ಷಧಾರೆ:ಮಧ್ಯಪ್ರದೇಶದಲ್ಲೂ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದ್ದು, ಸಿಯೋನಿ, ಮಾಂಡ್ಲಾ, ಬಾಲಾಘಾಟ್, ಜಿಲ್ಲೆಗ ಳಲ್ಲಿ “ಆರೆಂಜ್ ಅಲರ್ಟ್’ ಘೋಷಿಸ ಲಾಗಿದೆ. ಜಬಲ್ಪುರ್ ಸೇರಿದಂತೆ ಏಳು ಜಿಲ್ಲೆ ಗಳಲ್ಲಿ “ಯೆಲ್ಲೋ ಅಲರ್ಟ್’ ಘೋಷಿಸಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
MUST WATCH
ಹೊಸ ಸೇರ್ಪಡೆ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ
ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ