ಫೈರಿಂಗ್‌ ಆರೋಪಿ ಸೆರೆ ಹಿಡಿದ ಪೊಲೀಸರು

ಘಟನೆ ನಡೆದು ಬರೋಬ್ಬರಿ ತಿಂಗಳ ನಂತರ ಆರೋಪಿ ಮುಂಡಗೋಡದಲ್ಲಿ ಬಂಧನ: ಎಸ್‌ಪಿ ಹನುಮಂತರಾಯ

Team Udayavani, May 20, 2022, 3:12 PM IST

14

ಹಾವೇರಿ: ಶಿಗ್ಗಾವಿ ಪಟ್ಟಣದಲ್ಲಿ ಕೆಜಿಎಫ್‌-2 ಚಿತ್ರ ಪ್ರದರ್ಶನದ ವೇಳೆ ವ್ಯಕ್ತಿಯೋರ್ವನ ಮೇಲೆ ಗುಂಡಿನ ದಾಳಿ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ, ಘಟನೆ ನಡೆದು ಬರೋಬ್ಬರಿ ಒಂದು ತಿಂಗಳ ನಂತರ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಕೊನೆಗೂ ಯಶಸ್ವಿಯಾಗಿದ್ದಾರೆ.

ಶಿಗ್ಗಾವಿ ಪಟ್ಟಣದ ನಿವಾಸಿ ಮಂಜುನಾಥ (ಮಲ್ಲಿಕ್‌) ಪಾಟೀಲ ಎಂಬ ಆರೋಪಿಯನ್ನು ಪೊಲೀಸರು ಗುರುವಾರ ಬೆಳಗಿನ ಜಾವ ಮುಂಡಗೋಡದಲ್ಲಿ ವಶಕ್ಕೆ ಪಡೆದಿದ್ದಾರೆ. ಜಿಲ್ಲೆಯ ಶಿಗ್ಗಾವಿ ಪಟ್ಟಣದ ರಾಜಶ್ರೀ ಚಿತ್ರಮಂದಿರದಲ್ಲಿ ಏ.19ರಂದು ಕೆಜಿಎಫ್‌-2 ಚಿತ್ರದ ರಾತ್ರಿ ಪ್ರದರ್ಶನದ ವೇಳೆ ಗುಂಡಿನ ದಾಳಿ ನಡೆಸಿದ್ದ ಆರೋಪಿಯನ್ನು ಪೊಲೀಸರು ಪತ್ತೆ ಹಚ್ಚಿ ಆತನ ಬಂಧನಕ್ಕೆ ಬಲೆ ಬೀಸಿದ್ದರು. ಮಂಜುನಾಥ ಪಾಟೀಲನ ಫೋಟೋದೊಂದಿಗೆ ಪ್ರಕಟಣೆಯೊಂದನ್ನು ಪೊಲೀಸರು ಸಾಮಾಜಿಕ ಜಾಲತಾಣಗಳಲ್ಲಿ ಹೊರಡಿಸಿ ಆತನ ಸುಳಿವು ಸಿಕ್ಕಲ್ಲಿ ಪೊಲೀಸ್‌ ಕಂಟ್ರೋಲ್‌ ರೂಂಗೆ ಕರೆ ಮಾಡಲು ಮನವಿ ಮಾಡಿದ್ದರು.

ಆದರೆ, ಆರೋಪಿ ಆಗಿಂದಾಗ್ಗೆ ಸ್ಥಳ ಬದಲಾಯಿಸುತ್ತಾ ಪೊಲೀಸರ ಕೈಗೆ ಸಿಕ್ಕಿರಲಿಲ್ಲ. ಕೊನೆಗೂ ಆರೋಪಿಯನ್ನು ಬಂಧಿಸಿರುವ ಪೊಲೀಸರು ಆತನ ಬಳಿ ಪಿಸ್ತೂಲ್‌ ಹೇಗೆ ಬಂತು, ಯಾವ ಉದ್ದೇಶಕ್ಕಾಗಿ ಪಿಸ್ತೂಲ್‌ ಹೊಂದಿದ್ದ. ಚಿತ್ರಮಂದಿರದಿಂದ ಎಲ್ಲಿಗೆ ಹೋಗಿ ಪಿಸ್ತೂಲ್‌ ತಂದಿದ್ದ ಎಂಬುದರ ಕುರಿತು ತನಿಖೆ ಆರಂಭಿಸಿದ್ದಾರೆ.

ಈ ಕುರಿತು ನಗರದ ಎಸ್‌ಪಿ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಎಸ್‌ಪಿ ಹನುಮಂತರಾಯ, ಶಿಗ್ಗಾವಿ ಪಟ್ಟಣದ ರಾಜಶ್ರೀ ಚಿತ್ರಮಂದಿರದಲ್ಲಿ ವೀರಬಸಪ್ಪ ಗೊಬ್ಬಿ, ನಿಜಗುಣಿ ಭದ್ರಶೆಟ್ಟಿ, ವಸಂತಕುಮಾರ ಶಿವಪುರ, ಬಸವರಾಜ ಕಾಮನಹಳ್ಳಿ, ಪ್ರವೀಣ ಬನ್ನಿಕೊಪ್ಪ ಎಂಬವರು ಕೆಜಿಎಫ್‌-2 ಸಿನಿಮಾ ಪ್ರೇಕ್ಷಿಸಲು ಹೋಗಿದ್ದರು. ಸಿನಿಮಾ ನೋಡುವಾಗ ವಸಂತಕುಮಾರ ಈತನ ಸ್ನೇಹಿತನೊಬ್ಬ ಖಾಲಿ ಇದ್ದ ಮುಂದಿನ ಸೀಟ್‌ ಮೇಲೆ ಕಾಲು ಇಟ್ಟುಕೊಂಡು ಕುಳಿತಾಗ ಆರೋಪಿ ಮಂಜುನಾಥ ಪಾಟೀಲ ಕಾಲು ತೆಗೆ ಎಂದಿದ್ದಕ್ಕೆ ಗಲಾಟೆ ಆರಂಭವಾಗಿತ್ತು. ಗಲಾಟೆ ವಿಕೋಪಕ್ಕೆ ತಿರುಗಿ ಆರೋಪಿ ಮಂಜುನಾಥ ಹೊರಗಡೆ ಹೋಗಿ ಕೆಲ ನಿಮಿಷಗಳ ಬಳಿಕ ಮರಳಿ ಬಂದು ವಸುಂತಕುಮಾರನ ಹೊಟ್ಟೆ, ಕೈಗೆ ಬಂದೂಕಿನಿಂದ ಗುಂಡು ಹಾರಿಸಿದ್ದ. ಇದರಿಂದ ಗಂಭೀರ ಗಾಯಗೊಂಡಿರುವ ವಸಂತಕುಮಾರ್‌ ಕಿಮ್ಸ್‌ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆದಿದ್ದು, ಚೇತರಿಸಿಕೊಳ್ಳುತ್ತಿದ್ದಾನೆ ಎಂದರು.

ಗುಂಡು ಹಾರಿಸಿ ಪರಾರಿಯಾದ ಆರೋಪಿಯ ಹೆಸರು, ವಿಳಾಸವನ್ನು ಅಂದೇ ಪತ್ತೆ ಮಾಡಿ ಆತನ ಬಂಧನಕ್ಕೆ ತಂಡಗಳನ್ನು ರಚಿಸಲಾಗಿತ್ತು. ಆಪಾದಿತನು ಬಳಸುತ್ತಿದ್ದ ಬ್ಯಾಂಕ್‌ ವ್ಯವಹಾರ, ಮೊಬೈಲ್‌ ಜಾಡು ಹಿಡಿದು ಆತ ಈ ಮೊದಲು ಕೆಲಸ ಮಾಡಿದ್ದ ಬೆಂಗಳೂರು, ಗೋವಾ, ಪೂಣಾ, ಮುಂಬೈ, ಕಲ್ಯಾಣ, ವಾಸಿ, ನವಿ ಮುಂಬೈ, ನಾಗಪುರ ಸೇರಿ ವಿವಿಧ ಕಡೆ ಕಾರ್ಯಾಚರಣೆ ನಡೆಸಲಾಯಿತು. ಮಹಾರಾಷ್ಟ್ರ ಕಲ್ಯಾಣ ನಗರದಲ್ಲಿರುವ ಕಿಂಗ್‌ಸ್ಟಾರ್‌ ಹೋಟೆಲ್‌ ಮತ್ತು ಲಾಡ್ಜ್ ಮಾಲಿಕರನ್ನು ಭೇಟಿಯಾದಾಗ ಅವರು ಆಪಾದಿತನು ತಮ್ಮಲ್ಲಿ ಕೆಲಸ ಮಾಡುತ್ತಿದ್ದು, ಸದ್ಯ ಹಣ ಬರುವುದಿದೆ. ಊರಿಗೆ ಹೋಗಿ ಬರುತ್ತೇನೆ ಎಂದು ಹೇಳಿ ಹೋಗಿದ್ದಾನೆ ಎಂಬ ಮಾಹಿತಿ ಕೊಟ್ಟಿದ್ದರು.

ಬಳಿಕ ಆತನ ಮೊಬೈಲ್‌ ಲೋಕೇಷನ್‌ ಮೇಲೆ ನಿಗಾ ವಹಿಸಿ ಗುರುವಾರ ಬೆಳಗ್ಗೆ 6.30ರ ವೇಳೆಗೆ ಮುಂಡಗೋಡ ಬಸ್‌ ನಿಲ್ದಾಣದ ಬಳಿ ವಶಕ್ಕೆ ಪಡೆಯಲಾಗಿದೆ. ಆರೋಪಿಯಿಂದ ಒಂದು ಗನ್‌, 15 ಜೀವಂತ ಗುಂಡುಗಳು, 2 ಖಾಲಿ ಕೋಕಾ, ಒಂದು ಸ್ಕೂಟಿ ಮೋಟಾರು ಸೈಕಲ್‌, ಒಂದು ಮೊಬೈಲ್‌ ಜಪ್ತಿ ಮಾಡಲಾಗಿದೆ. ಈತ ಓಡಿ ಹೋಗಿ ಬಚ್ಚಿಟ್ಟುಕೊಳ್ಳಲು ನಗದು ಕೊಟ್ಟು ಸಹಾಯ ಮಾಡಿದ ಆರೋಪದ ಮೇಲೆ ಬಂಕಾಪುರದ ಇಸ್ಮಾಯಿಲ್‌ ಎಂಬಾತನನ್ನೂ ವಶಕ್ಕೆ ಪಡೆಯಲಾಗಿದೆ ಎಂದರು.

ಆರೋಪಿ ಬಂಧನಕ್ಕೆ ಎಎಸ್ಪಿ ವಿಜಯಕುಮಾರ ಪಾಟೀಲ, ಶಿಗ್ಗಾವಿ ಡಿಎಸ್‌ಪಿ ಓ.ಬಿ. ಕಲ್ಲೇಶಪ್ಪ ಅವರ ಮಾರ್ಗದರ್ಶನದಲ್ಲಿ ಸಿಪಿಐ ಬಿ.ಕೆ. ಹಳಬಣ್ಣನವರ, ಪಿಐ ಸಂತೋಷ ಪಾಟೀಲ, ಪಿಐ ಎಂ.ಐ. ಗೌಡಪ್ಪಗೌಡ, ಪಿಎಸ್‌ಐ ಮಹಾಂತೇಶ, ಪಿಎಸ್‌ಐ ಶ್ರೀಶೈಲ ಪಟ್ಟಣಶೆಟ್ಟಿ, ಪಿಎಸ್‌ಐ ಪರಶುರಾಮ ಕಟ್ಟಿಮನಿ, ಸಿಬ್ಬಂದಿ ಕಾಶಿನಾಥ, ವೆಂಕಟೇಶ, ಮಂಜುನಾಥ ಲಮಾಣಿ, ಪುಟ್ಟಪ್ಪ ಬಾವಿಕಟ್ಟಿ, ಮಂಜುನಾಥ ಏರಿಶೀಮಿ, ಆನಂದ ದೊಡ್ಡಕುರುಬರ, ಮಹೇಶ ಹೊರಕೇರೆ, ಅಬುಸಲಿಯಾ ಕೋಟಿ, ಯಲ್ಲಪ್ಪ ದೊಡ್ಡಮನಿ, ಸತೀಶ ಮರಕಟ್ಟಿ, ಮಾರುತಿ ಹಾಲಬಾವಿ ಕಾರ್ಯಾಚರಣೆ ನಡೆಸಿದ್ದು, ಎಲ್ಲರಿಗೂ ಬಹುಮಾನ ನೀಡಲಾಗುವುದು ಎಂದರು.

ಶಿಗ್ಗಾವಿ ಪಟ್ಟಣದಲ್ಲಿ ನಡೆದ ಗುಂಡಿನ ದಾಳಿ ಪ್ರಕರಣದಲ್ಲಿ ಆರೋಪಿ ಅನ ಧಿಕೃತವಾಗಿ ಕಂಟ್ರಿ ಪಿಸ್ತೂಲ್‌ ಹೊಂದಿದ್ದು, ಸರ್ಕಾರದಿಂದ ಪರವಾನಗಿ ಪಡೆದಿಲ್ಲ. ಯಾವ ಉದ್ದೇಶಕ್ಕೆ ಗನ್‌ ತಂದಿದ್ದ, ಎಲ್ಲಿಂದ ತಂದಿದ್ದ ಎಂಬುದನ್ನು ಹೆಚ್ಚಿನ ತನಿಖೆ ಮೂಲಕ ಪತ್ತೆ ಹಚ್ಚಲಾಗುವುದು. –ಹನುಮಂತರಾಯ, ಎಸ್‌ಪಿ, ಹಾವೇರಿ

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.