800 ಗ್ರಾಂ ಗಾಂಜಾ ವಶ: ವಾಹನ ಸಹಿತ ಇಬ್ಬರ ಬಂಧನ


Team Udayavani, May 25, 2022, 11:01 AM IST

3

ಹುಬ್ಬಳ್ಳಿ: ನಗರದ ಕಸಬಾಪೇಟೆ ಹಾಗೂ ಉಪನಗರ ಠಾಣೆ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ಪ್ರತ್ಯೇಕವಾಗಿ ಬಂಧಿಸಿ, ಅವರಿಂದ ಅಂದಾಜು 8 ಸಾವಿರ ರೂ. ಮೌಲ್ಯದ 800 ಗ್ರಾಂ ಗಾಂಜಾ, 1 ಸಾವಿರ ರೂ. ನಗದು ಹಾಗೂ ಎರಡು ದ್ವಿಚಕ್ರ ವಾಹನ ವಶಪಡಿಸಿಕೊಂಡಿದ್ದಾರೆ.

ಚಟ್ನಿ ಮಠ ಕ್ರಾಸ್‌ ಹತ್ತಿರ ಸಾಗಾಟ ಮಾಡುತ್ತಿದ್ದ ಓರ್ವನನ್ನು ಉಪನಗರ ಪೊಲೀಸರು ಬಂಧಿಸಿ, ಆತನಿಂದ 500ಗ್ರಾಂ ಗಾಂಜಾ, 750 ನಗದು, ಒಂದು ವಾಹನ ವಶಪಡಿಸಿಕೊಂಡಿದ್ದಾರೆ.

ಓರ್ವ ಪರಾರಿಯಾಗಿದ್ದಾನೆ. ಹಳೇಹುಬ್ಬಳ್ಳಿ ಅಕ್ಕಿಪೇಟೆ ಕ್ರಾಸ್‌ ಹತ್ತಿರ ಸಾಗಾಟ ಮಾಡುತ್ತಿದ್ದ ಓರ್ವನನ್ನು ಕಸಬಾಪೇಟೆ ಪೊಲೀಸರು ಬಂಧಿಸಿ, ಆತನಿಂದ 300 ಗ್ರಾಂ ಗಾಂಜಾ, ಒಂದು ವಾಹನ ವಶಪಡಿಸಿಕೊಂಡಿದ್ದಾರೆ. ಉಪನಗರ ಮತ್ತು ಕಸಬಾಪೇಟೆ ಠಾಣೆಯಲ್ಲಿ ಪ್ರತ್ಯೇಕವಾಗಿ ಪ್ರಕರಣಗಳು ದಾಖಲಾಗಿವೆ.

­ಕೊಲೆ ಪ್ರಕರಣ-ಇಬ್ಬರ ಬಂಧನ: ಕ್ಷುಲ್ಲಕ ಕಾರಣಕ್ಕೆ ಸೋಮವಾರ ರಾತ್ರಿ ಹಳೇಹುಬ್ಬಳ್ಳಿ ಆನಂದ ನಗರದಲ್ಲಿ ನಡೆದಿದ್ದ ಓರ್ವನ ಕೊಲೆಗೆ ಸಂಬಂಧಿಸಿ ಹಳೇಹುಬ್ಬಳ್ಳಿ ಪೊಲೀಸರು ಇಬ್ಬರನ್ನು ಬಂಧಿಸಿದ್ದು, ಪ್ರಮುಖ ಆರೋಪಿ ತಲೆಮರೆಸಿಕೊಂಡಿದ್ದಾನೆ.

ವಿಮಲ ಗುಟ್ಕಾ ವಿಚಾರವಾಗಿ ಇಬ್ಬರ ನಡುವೆ ಜಗಳವುಂಟಾದಾಗ ರೌಡಿಶೀಟರ್‌ ಗೌಸಮೋಯಿದ್ದೀನ ತಹಶೀಲ್ದಾರನು ಆನಂದನಗರದ ಮೆಹಬೂಬಸಾಬ ಕಳಸಗೆ ಕೈಗೆ ಸಿಕ್ಕ ವಸ್ತುವಿನಿಂದ ಇರಿದು ಕೊಲೆ ಮಾಡಿದ್ದ.

ಹಳೇಹುಬ್ಬಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸರು ಮಂಗಳವಾರ ಆನಂದನಗರ ಘೋಡಕೆ ಪ್ಲಾಟ್‌ನ ರಿಯಾಜ ಮತ್ತು ದೀಪಕ ಎಂಬುವರನ್ನು ಬಂಧಿಸಿದ್ದು, ಇವರೆಲ್ಲ ಟೈಲ್ಸ್‌ ಕೆಲಸ ಮಾಡಿಕೊಂಡಿದ್ದರು. ಗೌಸಮೋಯಿದ್ದೀನ ಪರಾರಿಯಾಗಿದ್ದಾನೆ. ಆತನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

­ರೈಲ್ವೆ ನಿಲ್ದಾಣದಲ್ಲಿ ಬೆಲೆಬಾಳುವ ಮೊಬೈಲ್ಸ್‌ ಕಳವು: ತೆಲಂಗಾಣ ಮೂಲದ ವಿದ್ಯಾರ್ಥಿನಿಯರು ರೈಲು ತಪ್ಪಿಸಿಕೊಂಡು ಇಲ್ಲಿನ ನಿಲ್ದಾಣದ ಜನರಲ್‌ ಟಿಕೆಟ್‌ ಕೌಂಟರ್‌ ಬಳಿ ರವಿವಾರ ತಡರಾತ್ರಿ ಲಗೇಜ್‌ ಇಟ್ಟುಕೊಂಡು ಮಲಗಿದ್ದಾಗ, ಕಳ್ಳರು ಎರಡು ಒನ್‌ಪ್ಲಸ್‌ ನೋರ್ಡ್‌ ಮೊಬೈಲ್‌ಗ‌ಳಿದ್ದ ಹ್ಯಾಂಡ್‌ಬ್ಯಾಗ್‌ ಕಳವು ಮಾಡಿದ್ದಾರೆ.

ತೆಲಂಗಾಣ ನಿರ್ಮಲಾ ಜಿಲ್ಲೆ ಸರನಾಗಾಪುರ ಮಂಡಲದ ಎನ್‌. ಲಕ್ಷ್ಮೀ ತೇರಿಸಾ ಎಂಬುವರು ತಮ್ಮ ಸ್ನೇಹಿತರೊಂದಿಗೆ ಹೈದರಾಬಾದ್‌ಗೆ ತೆರಳೆಂದು ನಿಲ್ದಾಣಕ್ಕೆ ಬಂದಾರ ರೈಲು ಹೊರಟು ಹೋಗಿತ್ತು. ಹೀಗಾಗಿ ನಿಲ್ದಾಣದಲ್ಲಿ ಇವರು ರಾತ್ರಿ ಮಲಗಿಕೊಂಡು ಬೆಳಗ್ಗೆ ಎದ್ದೇಳುವಷ್ಟರಲ್ಲಿ ಕಳ್ಳರು ಒನ್‌ಪ್ಲಸ್‌ನ 43ಸಾವಿರ ರೂ. ಮೌಲ್ಯದ ನೋರ್ಡ್‌-9ಆರ್ಟಿ 5ಜಿಬಿ ಮತ್ತು 34ಸಾವಿರ ರೂ. ಕಿಮ್ಮತ್ತಿನ ನೋರ್ಡ್‌-2, 5ಜಿಬಿ ಮೊಬೈಲ್ಸ್‌ ಹಾಗೂ ಎರಡು ಮೊಬೈಲ್‌ ಚಾರ್ಜ್‌ಗಳು, ಎಟಿಎಂ ಕಾರ್ಡ್ಸ್  ಇದ್ದ ಬ್ಯಾಗ್‌ ಕದ್ದುಕೊಂಡು ಹೋಗಿದ್ದಾರೆ. ರೈಲ್ವೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ­

550 ಅಡಿ ತಾಮ್ರದ ತಂತಿ ಕಳವು: ಅದರಗುಂಚಿ ಗ್ರಾಮದ ನಂದಿನಿ ವೇರ್‌ ಹೌಸಿಂಗ್‌ ಕಾರ್ಪೊರೇಶನ್‌ ಗೋದಾಮು ಹೊರಗಡೆ ಇರುವ ಬೋರವೆಲ್‌ನ ಅಂದಾಜು 30 ಸಾವಿರ ರೂ. ಮೌಲ್ಯದ ಸುಮಾರು 550 ಅಡಿ ತಾಮ್ರದ ವೈರ್‌ ತಂತಿ ಮಂಗಳವಾರ ಬೆಳಗಿನ ಜಾವ ಕಳ್ಳತನ ಮಾಡಲಾಗಿದೆ. ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.