Mysore: ಮನೋರಂಜನ್ ನಿವಾಸದ ಮೇಲೆ ಪೊಲೀಸ್ ಕಣ್ಗಾವಲು
ರಾಜ್ಯ, ಕೇಂದ್ರ ಗುಪ್ತಚರ ಪೊಲೀಸರಿಂದ ಕುಟುಂಬಸ್ಥರ ವಿಚಾರಣೆ, ದಾಖಲೆ ಪರಿಶೀಲನೆ
Team Udayavani, Dec 14, 2023, 11:42 PM IST
ಮೈಸೂರು: ಸಂಸತ್ ಭವನಕ್ಕೆ ನುಗ್ಗಿ ಕೋಲಾಹಲ ಎಬ್ಬಿಸಿದ ಆರೋಪಿ ಮನೋರಂಜನ್ನ ವಿಜಯನಗರದಲ್ಲಿರುವ ನಿವಾಸದ ಮೇಲೆ ಪೊಲೀಸರು ಕಣ್ಗಾವಲಿರಿಸಿದ್ದು, ಗುರುವಾರ ಬೆಳಗ್ಗೆ ಮನೆ ಬಳಿ ಆಗಮಿಸಿದ ಪೊಲೀಸರ ವಿವಿಧ ತಂಡಗಳು ನಿವಾಸದ ಸುತ್ತ ಮುತ್ತಲಿನ ಮನೆಯವರ ವಿಚಾರಣೆ ನಡೆಸಿದರು. ಕೇಂದ್ರ ಗುಪ್ತಚರ ಇಲಾಖೆ ಮೈಸೂರು ವಿಭಾಗದ ಉಪನಿರ್ದೇಶಕ ಪ್ರವೀಣ್ ನೇತೃತ್ವದಲ್ಲಿ ಕುಟುಂಬಸ್ಥರಿಂದ ಮಾಹಿತಿ ಸಂಗ್ರಹಿಸಿದರಲ್ಲದೆ, ಗಂಟೆಗೂ ಹೆಚ್ಚು ಕಾಲ ತಪಾಸಣೆ ನಡೆಸಿದರು.
ಮೈಸೂರಿಗೆ ಬಂದಿದ್ದ ಸಾಗರ್ ಶರ್ಮ
ಮತ್ತೂಬ್ಬ ಆರೋಪಿ ಉತ್ತರ ಪ್ರದೇಶದ ಸಾಗರ್ ಶರ್ಮ ಮೈಸೂರಿನಲ್ಲಿ ರುವ ಮನೋ ರಂಜನ್ ಮನೆಗೆ ಭೇಟಿ ನೀಡಿದ್ದ ಎಂಬ ಮಾಹಿತಿಯಿದೆ. ಕಳೆದ ಮೇ ತಿಂಗಳಿನಲ್ಲಿ ಸಾಗರ್ ಶರ್ಮ ಮೈಸೂರಿಗೆ ಆಗಮಿಸಿ, ಮನೋ ರಂಜನ್ ಮನೆಗೆ ಭೇಟಿ ನೀಡಿದ್ದರ ಬಗ್ಗೆ ಪೊಲೀಸರಿಗೆ ಮಾಹಿತಿ ಲಭ್ಯವಾಗಿದೆ. ಈ ಬಗ್ಗೆಯೂ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ.
ಅಪ್ಪನ ಪರಿಚಯ ಹೇಳಿ ಪಾಸ್ ಪಡೆದಿದ್ದ
ತಂದೆ ದೇವರಾಜೇ ಗೌಡರ ಪರಿಚಯ ಹೇಳಿಕೊಂಡು ಸಂಸದ ಪ್ರತಾಪಸಿಂಹ ಕಚೇರಿಯಿಂದ ಮನೋರಂಜನ್ ಪಾಸ್ ಪಡೆದಿರುವುದು ಗೊತ್ತಾಗಿದೆ. ತಾನು ಮೈಸೂರಿನ ವಿಜಯನಗರ ನಿವಾಸಿ. ತನ್ನ ತಂದೆ ದೇವರಾಜೇಗೌಡ ಎಂದು ತನ್ನನ್ನು ಪರಿಚಯ ಮಾಡಿಕೊಂಡು ಪ್ರತಾಪಸಿಂಹ ಬಳಿ ಪಾಸ್ಗೆ ಮನೋರಂಜನ್ ಅನುಮತಿ ಪಡೆದುಕೊಂಡಿರುವುದು ತನಿಖೆ ವೇಳೆ ಮಾಹಿತಿ ಲಭ್ಯ ವಾ ಗಿದೆ.
ಶೂ ಪರಿಶೀಲಿಸದಿರುವುದನ್ನು ಖಚಿತಪಡಿಸಿಕೊಂಡಿದ್ದ!
ಸಂಸತ್ತಿನಲ್ಲಿ ಶೂ ತಪಾಸಣೆ ಮಾಡುವುದಿಲ್ಲ ಎಂಬುದನ್ನು ಮನೋರಂಜನ್ ಜುಲೈ ತಿಂಗಳಲ್ಲೇ ಖಚಿತಪಡಿಸಿಕೊಂಡಿದ್ದ ಎಂದು ತಿಳಿದುಬಂದಿದೆ.
ಸಂಸತ್ ಭವನದ ಮೇಲೆ ದಾಳಿ ಮಾಡಿದ ಓರ್ವ ಮೈಸೂರಿನವನು. ಅಲ್ಲದೆ, ಒಳಗೆ ನುಗ್ಗಿರುವವರು ಸಂಸದ ಪ್ರತಾಪಸಿಂಹ ಕಚೇರಿಯಿಂದ ಪಾಸ್ ಪಡೆದು ಹೋಗಿದ್ದಾರೆ. ಹಾಗಾಗಿ ಪ್ರತಾಪ್ ಸಿಂಹ ಅವರನ್ನೇ ನೇರ ಹೊಣೆ ಮಾಡಬೇಕು.
-ಡಾ| ಯತೀಂದ್ರ ಸಿದ್ದರಾಮಯ್ಯ, ಮಾಜಿ ಶಾಸಕ
ಸಂಸತ್ ಭವನಕ್ಕೆ ನುಗ್ಗಿದ ಆರೋಪಿ ಮನೋರಂಜನ್ ಸಂಸದ ಪ್ರತಾಪ್ಸಿಂಹ ಅವರೊಂದಿಗೆ ನಿಕಟ ಸಂಪರ್ಕದಲ್ಲಿದ್ದ ವ್ಯಕ್ತಿಯಾಗಿದ್ದಾನೆ. ಹೀಗಾಗಿ ಪ್ರತಾಪ್ ಸಿಂಹ ಅವರ ಕಚೇರಿಯನ್ನು ಜಪ್ತಿ ಮಾಡಿ ಹೆಚ್ಚಿನ ತನಿಖೆ ನಡೆಸಬೇಕು.
-ಎಂ.ಲಕ್ಷ್ಮಣ್, ಕೆಪಿಸಿಸಿ ವಕ್ತಾರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್ ತೀರ್ಪು
MUST WATCH
ಹೊಸ ಸೇರ್ಪಡೆ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ