ಪ್ರಚಾರಕ್ಕೆ ಪೊಲೀಸ್ ಪೈಲೆಟ್ ವಾಹನ ಬಳಕೆ: ಆಯೋಗಕ್ಕೆ ದೂರು
Team Udayavani, May 17, 2019, 6:00 AM IST
ಕಲಬುರಗಿ ಚಿಂಚೋಳಿ ಬಿಜೆಪಿ ಅಭ್ಯರ್ಥಿ ಡಾ. ಅವಿನಾಶ ಜಾಧವ್ ಹಾಗೂ ಶಾಸಕ ಪಿ. ರಾಜೀವ್ ಚುನಾವಣಾಧಿಕಾರಿಗೆ ದೂರು ಸಲ್ಲಿಸಿದರು
ಕಲಬುರಗಿ: ನೀತಿ ಸಂಹಿತೆ ಜಾರಿಯಲ್ಲಿದ್ದರೂ ಕಾಂಗ್ರೆಸ್ ನಾಯಕರು ಪ್ರಚಾರಕ್ಕೆ ಪೊಲೀಸ್ ಪೈಲೆಟ್ ವಾಹನ ಬಳುಸುತ್ತಿದ್ದಾರಲ್ಲದೇ, ಇದೇ ವಾಹನಗಳಲ್ಲಿ ಹಣ ಸಾಗಿಸುತ್ತಿದ್ದಾರೆಂದು ಆರೋಪಿಸಿ ಚಿಂಚೋಳಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಬಿಜೆಪಿ ಅಭ್ಯರ್ಥಿ ಡಾ. ಅವಿನಾಶ ಜಾಧವ್ ಹಾಗೂ ಶಾಸಕ ಪಿ.ರಾಜೀವ್ ಚುನಾವಣಾಧಿಕಾರಿಗೆ ದೂರು ಸಲ್ಲಿಸಿದ್ದಾರೆ.
ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ಸಚಿವ ಪ್ರಿಯಾಂಕ ಖರ್ಗೆ ವಿರುದ್ಧ ಚುನಾವಣಾಧಿಕಾರಿಗೆ ದೂರು ನೀಡಿರುವ ಶಾಸಕ ಪಿ ರಾಜೀವ್, ನೀತಿ ಸಂಹಿತೆ ಜಾರಿಯಲ್ಲಿದೆ. ಚಿಂಚೋಳಿ ಉಪ ಚುನಾವಣೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ ಹಾಗೂ ಮಲ್ಲಿಕಾರ್ಜುನ ಖರ್ಗೆ ಪೊಲೀಸ್ ಪೈಲೆಟ್ ಬಳಸಿಕೊಂಡಿದ್ದಾರೆ. ಬಹುಮುಖ್ಯವಾಗಿ ಪೈಲೆಟ್ಗಳು ಕಾಂಗ್ರೆಸ್ಗೆ ಮತ ನೀಡುವಂತೆ ಪ್ರಚಾರ ಮಾಡುತ್ತಿರುವುದು ಕಂಡು ಬಂದಿದೆ ಎಂದು ಆರೋಪಿಸಿದರು.
ಆಗಿರುವ ಲೋಪದ ವಿರುದ್ಧ ಕಾನೂನು ಕ್ರಮ ಜರುಗಿಸಿ ಚುನಾವಣೆ ಪಾರದರ್ಶಕವಾಗಿ ನಡೆಯುವಂತೆ ನೋಡಿಕೊಳ್ಳಲು ಹಾಗೂ ಪೈಲೆಟ್ ಕರ್ತವ್ಯಕ್ಕೆ ನಿಯೋಜಿಸಿದ ಮತ್ತು ಭಾಗವಹಿಸಿದ ಅಧಿಕಾರಿಗಳ ಮೇಲೆ ಕೂಡಲೇ ಕ್ರಮ ಕೈಗೊಳ್ಳುವಂತೆ ದೂರು ಸಲ್ಲಿಸಲಾಗಿದೆ ಎಂದು ತಿಳಿಸಿದರು. ಮಾಜಿ ಶಾಸಕ ವಾಲ್ಮೀಕಿ ನಾಯಕ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ