Politics: ಮೈತ್ರಿ ಏರ್ಪಡದ ಕಡೆ ಏಕಾಂಗಿ ಸ್ಪರ್ಧೆ: ಖರ್ಗೆ
ಐಎನ್ಡಿಐಎ ಒಕ್ಕೂಟದಲ್ಲಿ ಎಲ್ಲವೂ ಸರಿ ಇಲ್ಲ ಎಂದು ಒಪ್ಪಿಕೊಂಡ ಎಐಸಿಸಿ ಅಧ್ಯಕ್ಷ
Team Udayavani, Feb 12, 2024, 1:05 AM IST
ಚಂಡೀಗಢ/ಲುಧಿಯಾನಾ: ಒಂದೊಂದೇ ರಾಜ್ಯಗಳಲ್ಲಿ ಐಎನ್ಡಿಐಎ ಒಕ್ಕೂಟದ ಮಿತ್ರಪಕ್ಷಗಳು ಸ್ವತಂತ್ರವಾಗಿ ಸ್ಪರ್ಧಿಸುವ ಮಾತನಾಡುತ್ತಿವೆ. ಇದರ ಬೆನ್ನಲ್ಲೇ ಇದೇ ಮೊದಲ ಬಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು “ಐಎನ್ಡಿಐಎ ಒಕ್ಕೂಟದಲ್ಲಿ ಭಿನ್ನಾಭಿಪ್ರಾಯ ಇದೆ’ ಎಂದು ಒಪ್ಪಿಕೊಂಡಿದ್ದಾರೆ.
ಪಂಜಾಬ್ನ ಲುಧಿಯಾನಾದಲ್ಲಿ ರವಿವಾರ ಆಯೋಜಿಸಲಾಗಿದ್ದ ಕಾಂಗ್ರೆಸ್ ಮುಖಂಡರ ಮತ್ತು ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಖರ್ಗೆಯವರು ಐಎನ್ಡಿಐಎ ಒಕ್ಕೂಟದಲ್ಲಿ ಎಲ್ಲವೂ ಸರಿ ಇಲ್ಲ ಎಂದು ಹೇಳಿದ್ದಾರೆ. ಸಹಮತ ಏರ್ಪಡದ ಕ್ಷೇತ್ರಗಳಲ್ಲಿ ಏಕಾಂಗಿಯಾಗಿ ಹೋರಾಟ ಮಾಡಬೇಕಿದೆ ಎಂದು ಒಪ್ಪಿಕೊಂಡಿದ್ದಾರೆ.
ಕೆಲವು ರಾಜ್ಯಗಳಲ್ಲಿ ಇತರ ಪಕ್ಷಗಳ ಜತೆಗೆ ಚುನಾವಣ ಮೈತ್ರಿ ಮತ್ತು ಸಮನ್ವಯ ಏರ್ಪಟ್ಟಿಲ್ಲ ಎನ್ನುವುದು ನಿಜ. ಯಾರಾದರೂ ಮೈತ್ರಿ ಬಯಸಿ ಬಂದರೆ ಒಗ್ಗೂಡಿ ಮುಂದುವರಿಯೋಣ. ಇಲ್ಲದಿದ್ದರೂ ತೊಂದರೆ ಇಲ್ಲ. ಜಯ ಸಿಗುವವರೆಗೆ ಹೋರಾಟ ನಡೆಸಿಯೇ ಸಿದ್ಧ ಎಂದಿದ್ದಾರೆ.
ಇದು ಕೇವಲ ಪಂಜಾಬ್ಗ ಸಂಬಂಧಿಸಿದ ನಿರ್ಧಾರವಲ್ಲ. ದೇಶಕ್ಕೆ ಸಂಬಂಧಿಸಿದಂತೆ ಈ ತೀರ್ಮಾನವನ್ನು ಕೈಗೊಂಡಿದ್ದೇವೆ ಎಂದೂ ಖರ್ಗೆ ಹೇಳಿದ್ದಾರೆ. ಕಾಂಗ್ರೆಸ್ ಮುಖಂಡರು ಮತ್ತು ನಾಯಕರು ಜನರ ಬಳಿಗೆ ತೆರಳಿ ಅವರ ಕಷ್ಟಗಳನ್ನು ಅರ್ಥ ಮಾಡಿಕೊಂಡು ನೆರವು ನೀಡಬೇಕು. ಆಗ ಮಾತ್ರ ಜಯ ಗಳಿಸಲು ಸಾಧ್ಯ ಎಂದು ಖರ್ಗೆ ಕಿವಿ ಮಾತು ಹೇಳಿದ್ದಾರೆ.
ಉತ್ತರ ಪ್ರದೇಶದಲ್ಲಿ ಎಸ್ಪಿ 11 ಕ್ಷೇತ್ರಗಳನ್ನು ನೀಡುವ ಬಗ್ಗೆ ಹೇಳಿಕೆ ನೀಡಿದ್ದರೂ ಅದರ ಬಗ್ಗೆ ಕಾಂಗ್ರೆಸ್ ವರಿಷ್ಠರು ಇನ್ನೂ ಸ್ಪಷ್ಟ ನಿರ್ಧಾರ ಪ್ರಕಟಿಸಿಲ್ಲ. ಮಹಾರಾಷ್ಟ್ರದಲ್ಲಿ ಶಿವಸೇನೆ 23 ಕ್ಷೇತ್ರಗಳಲ್ಲಿ ಸ್ಪರ್ಧಿಸುವ ಮಾತನಾಡಿದೆ. ಪಶ್ಚಿಮ ಬಂಗಾಲದಲ್ಲಿ ಟಿಎಂಸಿ ಏಕಾಂಗಿಯಾಗಿ ಸ್ಪರ್ಧಿಸುವ ಘೋಷಣೆ ಮಾಡಿದೆ. ಜೆಡಿಯು ಈಗಾಗಲೇ ಬಿಜೆಪಿ ಜತೆಗೆ ಮರು ಮೈತ್ರಿ ಮಾಡಿಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ