ಯುಜಿಡಿ ಅವಾಂತರ: ಸಂಚಾರಕ್ಕೆ ಸಂಚಕಾರ ! ಓಡಾಡಲು ಪಾದಚಾರಿಗಳು-ವಾಹನ ಸವಾರರ ಪರದಾಟ


Team Udayavani, Oct 1, 2020, 3:52 PM IST

ಯುಜಿಡಿ ಅವಾಂತರ: ಸಂಚಾರಕ್ಕೆ ಸಂಚಕಾರ ! ಓಡಾಡಲು ಪಾದಚಾರಿಗಳು-ವಾಹನ ಸವಾರರ ಪರದಾಟ

ಹಳಿಯಾಳ: ಭಾರಿ ವಿರೋಧದ ನಡುವೆ ಪೊಲೀಸ್‌ ರಕ್ಷಣೆಯಲ್ಲಿ ಆರಂಭವಾಗಿದ್ದ ಒಳಚರಂಡಿ ಯೋಜನೆ ಕಾಮಗಾರಿ ಹಲವಾರು ಬಡಾವಣೆ, ಗಲ್ಲಿಗಳ ಜನರ ನೆಮ್ಮದಿ ಹಾಳು ಗೆಡವಿದ್ದು ಪ್ರತಿನಿತ್ಯ ಹಿಡಿಶಾಪಹಾಕುವಂತಾಗಿದೆ. ಕಾಮಗಾರಿ ಆರಂಭಕ್ಕೂ ಮುನ್ನ ಅಧಿಕಾರಿಗಳು ನೀಡಿದ ಭರವಸೆ ಹೊಳೆಯಲ್ಲಿ ಹುಣಸೆ ಹಣ್ಣು ತೊಳೆದ ಹಾಗೆ ಆಗಿರುವುದು ಅಷ್ಟೇ ಸತ್ಯವಾಗಿದೆ.

2019ರ ಜುಲೈನಲ್ಲಿಯೇ ಹಳಿಯಾಳದಲ್ಲಿ 76.20 ಕೋಟಿ ರೂ. ಬೃಹತ್‌ ಮೊತ್ತದ ಒಳಚರಂಡಿ ಕಾಮಗಾರಿಗೆ ಆದೇಶ ಸಿಕ್ಕಿದ್ದರೂ ಮೊದಲು ಮಳೆಯಿಂದ ಬಳಿಕ ಸಾರ್ವಜನಿಕರ ಹಾಗೂ ಮಾಜಿ ಶಾಸಕರು, ಬಿಜೆಪಿ ಹಾಗೂ ಜನಪ್ರತಿನಿಧಿಗಳ ತೀವ್ರ ಆಕ್ಷೇಪಣೆಗಳು, ವಿರೋಧಗಳು ಕೇಳಿ ಬಂದಿದ್ದರಿಂದ ಕಾಮಗಾರಿಗೆ ವಿಘ್ನ ಎದುರಾಗಿತ್ತು.

ಧಾರವಾಡದ ಸುಪ್ರದಾ ಕನ್‌ಸ್ಟ್ರಕ್ಷನ್‌ ಕಂಪೆನಿಯವರು ಈ ಕಾಮಗಾರಿಯ ಗುತ್ತಿಗೆ ಪಡೆದಿದ್ದು 3 ವರ್ಷಗಳಲ್ಲಿ ಕಾಮಗಾರಿ ಪೂರ್ಣಗೊಳಿಸುವ ಅವಧಿ ನೀಡಲಾಗಿದೆ. ಹಳಿಯಾಳದಲ್ಲಿ 60 ಕಿಮೀ ಉದ್ದಗಲ ಒಳಚರಂಡಿ ವ್ಯಾಪ್ತಿಗೆ ಒಳಪಟ್ಟಿದ್ದು 2016-17ನೇ ಸಾಲಿನ ಸಮೀಕ್ಷೆ ಪ್ರಕಾರ 6 ಸಾವಿರ ಮನೆಗಳಿಗೆ ಈ ಪೈಪ್‌ಲೈನ್‌ ಜೊಡಣೆಯಾಗಲಿದೆ.

ಯೋಜನೆ ಕುರಿತು ಪಟ್ಟಣದ ಜನರಿಗೆ ಸಂಪೂರ್ಣ ಮಾಹಿತಿ ನೀಡಬೇಕು, ಸಾರ್ವಜನಿಕರ ಆಕ್ಷೇಪಣೆ, ಅಹವಾಲುಗಳನ್ನು ಆಲಿಸಿಯೇ ಬಳಿಕ ಒಳಚರಂಡಿ ಕಾಮಗಾರಿ ಆರಂಭಿಸಬೇಕು ವಿನಃ ತರಾತುರಿ ಮಾಡಬಾರದು ಎಂದು ಆಗ್ರಹಿಸಲಾಗಿತ್ತು. ಆದರೆ ಜ.6 ರಂದು ಕಾಟಾಚಾರಕ್ಕೆ ಎಂಬಂತೆ ಪಟ್ಟಣದ ಬಾಬು ಜಗಜೀವನರಾಮ್‌ ಭವನದಲ್ಲಿ ತರಾತುರಿಯಲ್ಲಿ ಸಾರ್ವಜನಿಕರ ಆಕ್ಷೇಪಣೆ, ಅಹವಾಲು ಸಭೆ ಕರೆದಿದ್ದರು. ಆದರೆ ಅಂದು ಸಭೆ ವಿಫಲವಾಗಿತ್ತು.

ಈ ಸಭೆಯಲ್ಲಿ ಹಳಿಯಾಳ ತಹಶೀಲ್ದಾರ್‌ ಅವರು ಹಲವು ಭರವಸೆಗಳನ್ನು ನೀಡಿದ್ದರು. ಆದರೆ ಭರ್ತಿ 9 ತಿಂಗಳು ಕಳೆದರು ಈ ಬಗ್ಗೆ ಚಕಾರವೆತ್ತದೆ ಸುಮ್ಮನೆ ಕುಳಿತಿರುವುದು ಹಲವು ಅನುಮಾನಗಳಿಗೆ ಎಡೆಮಾಡಿದ್ದು ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.

ಬಡವರಿಗೆ ಆಗುವ ಆರ್ಥಿಕ ಹೊರೆ ತಪ್ಪಿಸಲು ಜನಪ್ರತಿನಿಧಿಗಳು ಹಾಗೂ ಪುರಸಭೆಯವರು ಕಾನೂನಿನ ಚೌಕಟ್ಟಿನಲ್ಲಿ ಚರ್ಚಿಸಿ ಪರಿಹಾರ ಕಂಡುಕೊಳ್ಳಬೇಕು ಸೇರಿದಂತೆ ಹಲವು ವಿಷಯಗಳನ್ನು ಪ್ರಸ್ತಾಪಿಸಿ ಪ್ರಮುಖವಾಗಿ ಸದ್ಯ ಹಳಿಯಾಳದಲ್ಲಿ ಕಾಮಗಾರಿ ನಡೆಸುತ್ತಿರುವ ಕಂಪೆನಿಯವರು ಬೆರೆ ಜಿಲ್ಲೆಯಲ್ಲಿ ನಡೆಸಿದ ಕಾಮಗಾರಿ ವೀಕ್ಷಣೆಗೆ ಕರೆದುಕೊಂಡು ಹೊಗುವ ಭವರಸೆ ನೀಡಿದ್ದರು. ಆದರೆ ಈ ಸಭೆ ನಡೆದು ಬರೊಬ್ಬರಿ ಒಂಬತ್ತು ತಿಂಗಳಾದರು ಈ ಬಗ್ಗೆ ಚಕಾರವೆತ್ತದೆ ಇರುವುದು ಸಾಕಷ್ಟು ಸಂಶಯಕ್ಕೆ ಕಾರಣವಾಗಿದೆ.

ಈಗಾಗಲೇ ಕಾಮಗಾರಿ ಪ್ರಾರಂಭವಾಗಿ 7 ತಿಂಗಳು ಕಳೆದಿವೆ. ಪಟ್ಟಣದ ದೇಶಪಾಂಡೆ ಆಶ್ರಯ ಬಡಾವಣೆಯಿಂದ ಆರಂಭವಾದ ಕಾಮಗಾರಿ ಚವ್ವಾಣ ಪ್ಲಾಟ್‌, ಬಸವನಗರ, ಸದಾಶಿವನಗರ, ಕೆಎಚ್‌ಬಿ ಕಾಲೋನಿ(ಆನೆಗುಂದಿ ಬಡಾವಣೆ) ಸೇರಿದಂತೆ ಇನ್ನು ಹಲವು ಕಡೆಗಳಲ್ಲಿ ನಡೆಯುತ್ತಿದ್ದು ಇಲ್ಲಿ ಒಳಚರಂಡಿ ಪೈಪ್‌ಲೈನ್‌ಗಾಗಿ ಅಗೆದ ರಸ್ತೆಗಳೆಲ್ಲ ಕೆಸರಿನ ಕಚ್ಚಾ ರಸ್ತೆಗಳಾಗಿ, ಹೊಂಡಗಳ ಆಗರವಾಗಿ ಮಾರ್ಪಟ್ಟಿವೆ.

ಹಲವು ಬಡಾವಣೆಗಳಲ್ಲಂತೂ ವಾಹನ ಸವಾರಿ ದೊಡ್ಡ ಸವಾಲೇ ಆಗಿದ್ದು ಹೆಚ್ಚು ಕಮ್ಮಿ ಆದರೂ ಬಿದ್ದು ಗಂಭೀರ ಸ್ವರೂಪದ ಗಾಯಗಳನ್ನು ಮಾಡಿಕೊಳ್ಳುವುದು ಕಟ್ಟಿಟ್ಟ ಬುತ್ತಿಯಾಗಿದೆ.

ಈಗಾಗಲೇ 60 ಕಿಮೀ ಉದ್ದಗಲದಲ್ಲಿ 6 ಕಿಮೀ ಕಾಮಗಾರಿ ನಡೆಸಲಾಗಿದೆ. ಪ್ರಸಕ್ತ ಮಳೆಗಾಲದಲ್ಲಂತೂ ಸಾಕಷ್ಟು ಜನ ಕಾಮಗಾರಿ ನಡೆಸುವ ಸ್ಥಳಗಳಲ್ಲಿ ಬಿದ್ದು ಯಾತನಾಮಯ ದಿನಗಳನ್ನು ಕಳೆಯುತ್ತಿದ್ದಾರೆ. ಕೆಲವೆಡೆ ಕಾಟಾಚಾರಕ್ಕೆ ಎಂಬಂತೆ ಜಲ್ಲಿಕಲ್ಲು(ಖಡಿ)ಗಳನ್ನು ಹಾಕಲಾಗಿದ್ದು ಪ್ರತಿನಿತ್ಯ ಈ ಭಾಗದ ಜನರು ಮನೆಯಿಂದ ಹೊರಗೆ ಕಾಲಿಡಲು ಭಯಪಡಬೇಕಾದ ಸನ್ನಿವೇಶಗಳು ನಿರ್ಮಾಣವಾಗಿದೆ. ಇದರಿಂದ ಜನ ಹಿಡಿಶಾಪ ಹಾಕುತ್ತಿದ್ದಾರೆ. ವಿಚಿತ್ರವೆಂದರೆ ಕಾಮಗಾರಿ ಇನ್ನೂ ಪ್ರಾರಂಭವಾಗಿದೆ ಅಷ್ಟೇ ಹಲವೆಡೆ ಮ್ಯಾನಹೋಲ್‌-ಚೇಂಬರ್‌ಗಳಿಂದ ನೀರು ತುಂಬಿ ಹೊರಗೆ ಹರಿಯುತ್ತಿರುವುದು ಮುಂದೆ ಮನೆಯ ಪೈಪ್‌ಲೈನ್‌ ಜೋಡಿಸಿದ ಬಳಿಕ ಒಳಚರಂಡಿ ಯೋಜನೆ ಯಾವ ರೀತಿಯ ಫಲಿತಾಂಶ ನೀಡಲಿದೆ ಎಂಬುದು ಯಕ್ಷಪ್ರಶ್ನೆಯಾಗಿದೆ.

– ಯೋಗರಾಜ್‌.ಎಸ್‌.ಕ

ಟಾಪ್ ನ್ಯೂಸ್

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.