3 ದಿನ ಉತ್ತಮ ಮಳೆ ಸಾಧ್ಯತೆ
Team Udayavani, Jun 28, 2019, 5:27 AM IST
ಜೂ.14ರಂದು ಕರಾವಳಿಗೆ ಕಾಲಿಟ್ಟ ಮುಂಗಾರು ಬಳಿಕ ದುರ್ಬಲಗೊಂಡಿತ್ತು. ಇದರಿಂದಾಗಿ ಕರಾವಳಿ ಭಾಗಗಳಲ್ಲಿ ವಾಡಿಕೆಗಿಂತಲೂ ಕಡಿಮೆ ಮಳೆಯಾಗಿತ್ತು. ಇದೀಗ ಮುಂಗಾರು ಚುರುಕುಗೊಂಡಿದ್ದು, ಕರಾವಳಿ ಭಾಗದ ಅನೇಕ ಕಡೆಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ಗುರುವಾರ ಕೊಲ್ಲೂರು, ಕುಂದಾಪುರ, ಕುಮಟಾ, ತಾಳಗುಪ್ಪ, ಮೂಡಿಗೆರೆ, ಸಿದ್ದಾಪುರ, ಆಗುಂಬೆ, ಔರಾದ್, ಕಲಬುರಗಿ, ಭಾಗಮಂಡಲ, ಸಾಗರ ಸೇರಿ ರಾಜ್ಯದ ಹಲವೆಡೆ ಮಳೆಯಾಗಿದೆ. ಗುರುವಾರ ಮುಂಜಾನೆ 8.30ಕ್ಕೆ ಅಂತ್ಯಗೊಂಡ 24 ತಾಸುಗಳ ಅವಧಿಯಲ್ಲಿ ಕುಂದಾಪುರದಲ್ಲಿ ರಾಜ್ಯದಲ್ಲಿಯೇ ಅಧಿಕ, 8 ಸೆಂ.ಮೀ. ಮಳೆ ಸುರಿಯಿತು.
ಇದೇ ವೇಳೆ, ಮೂಡುಬಿದಿರೆ ಸಮೀಪದ ಮುಗೇರಕಲದಲ್ಲಿ ಸಿಡಿಲು ಬಡಿದು ರುಕ್ಕಯ್ಯ ಎಂಬುವರು ಅಸ್ವಸ್ಥರಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕೊಲ್ಲೂರು ಪರಿಸರದಲ್ಲಿ ಉತ್ತಮ ಮಳೆಯಾದ ಕಾರಣ ಸೌಪರ್ಣಿಕಾ ಹಾಗೂ ಕಾಶಿಹೊಳೆಗಳು ತುಂಬಿ ಹರಿಯುತ್ತಿವೆ. ಕೊಲ್ಲೂರು ದೇಗುಲಕ್ಕೆ ಆಗಮಿಸಿದ್ದ ಭಕ್ತರು ತೊಯ್ದ ಬಟ್ಟೆಯಲ್ಲೇ ಶ್ರೀ ದೇವಿಯ ದರ್ಶನ ಪಡೆಯುವಂತಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್