India-Canada: ಭಾರತ-ಕೆನಡಾ ವ್ಯಾಪಾರ ಮಾತುಕತೆ ಮುಂದೂಡಿಕೆ
Team Udayavani, Sep 16, 2023, 9:58 PM IST
ನವದೆಹಲಿ: ಕೆನಡಾ ಮತ್ತು ಭಾರತ ನಡುವಿನ ವೈಮನಸ್ಸು ದಿನಕಳೆದಂತೆ ತೀವ್ರಗೊಳ್ಳುತ್ತಿದ್ದು, ಈಗ ವ್ಯಾಪಾರ ಒಪ್ಪಂದಕ್ಕೆ ಸಂಬಂಧಿಸಿದ ಮಾತುಕತೆಗಳು ಅನಿರ್ದಿಷ್ಟಾವಧಿಗೆ ಮುಂದೂಡಿಕೆಯಾಗಿದೆ. ಇತ್ತೀಚೆಗೆ ಜಿ20 ರಾಷ್ಟ್ರಗಳ ಸಮ್ಮೇಳನದ ವೇಳೆ ಕೆನಡಾ ಪ್ರಧಾನಿ ಜಸ್ಟಿನ್ ಟ್ರಾಡ್ನೂ ಜತೆಗೆ ಪ್ರಧಾನಿ ನರೇಂದ್ರ ಮೋದಿ ಕಠಿಣವಾಗಿ ಕೆನಡಾದಲ್ಲಿ ನಡೆಯುತ್ತಿರುವ ಭಾರತ ವಿರೋಧಿ ಘಟನೆಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದರು. ಅದರ ಬೆನ್ನಲ್ಲೇ ಕೆನಡಾ ತನ್ನ ನಿಯೋಗವನ್ನು ಭಾರತಕ್ಕೆ ಕಳುಹಿಸುವ ನಿರ್ಧಾರವನ್ನು ಮುಂದೂಡಿದೆ.
ಅ.9ರಿಂದ ಐದು ದಿನಗಳ ಕಾಲ ನವದೆಹಲಿಯಲ್ಲಿ ಮಾತುಕತೆಗೆ ಕೆನಡಾದ ಸಚಿವರ ಮಟ್ಟದ ನಿಯೋಗ ಆಗಮಿಸಬೇಕಾಗಿತ್ತು. ಪ್ರತ್ಯೇಕತಾವಾದಿ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುವ ಯಾವುದೇ ದೇಶದ ಜತೆಗೆ ವ್ಯಾಪಾರ ಒಪ್ಪಂದಕ್ಕೆ ಸಂಬಂಧಿಸಿದ ಮಾತುಕತೆಗಳನ್ನು ನಡೆಸುವುದಿಲ್ಲ ಎಂದು ಭಾರತದ ವಿದೇಶಾಂಗ ಸಚಿವಾಲಯ ಪ್ರಕಟಿಸಿದೆ. ಅದಕ್ಕೆ ಪೂರಕವಾಗಿ ಕೆನಡಾ ಸರ್ಕಾರದ ಮೂಲಗಳನ್ನು ಉಲ್ಲೇಖೀಸಿ ಉದ್ದೇಶಿತ ಮಾತುಕತೆ ಮುಂದೂಡಿಕೆಯಾಗಿದೆ ಎಂದು ಅಲ್ಲಿನ ಮಾಧ್ಯಮಗಳು ವರದಿ ಮಾಡಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
MUST WATCH
ಹೊಸ ಸೇರ್ಪಡೆ
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ