Transfer: ವರ್ಗಾವಣೆ ಅಧಿಕಾರ ಇರುವುದು ಸರಕಾರಕ್ಕೆ: ಸಿದ್ದರಾಮಯ್ಯ

ಅಂಥ ಅಧಿಕಾರ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯದ್ದೂ ಅಲ್ಲ, ಬಿಜೆಪಿಯದ್ದೂ ಅಲ್ಲ; ವೃಥಾ ಆರೋಪ ಮಾಡುವುದು ಸರಿಯಲ್ಲ

Team Udayavani, Nov 19, 2023, 11:11 PM IST

siddaramayya IMP

ಬೆಂಗಳೂರು: ಆಡಳಿತಯಂತ್ರದ ಸುಧಾರಣೆಗಾಗಿ ವರ್ಗಾವಣೆ ಮಾಡಬೇಕಾ ಗುತ್ತದೆ. ಅದೊಂದು ಸಹಜ ಪ್ರಕ್ರಿಯೆ ಅಷ್ಟೇ. ಅಷ್ಟಕ್ಕೂ ವರ್ಗಾವಣೆ ಮಾಡುವ ಅಧಿಕಾರ ಸರಕಾರಕ್ಕಿದೆ. ಆ ಅಧಿಕಾರ ಇರುವುದು ಇವರಿಗಾ (ಕುಮಾರಸ್ವಾಮಿಗೆ)? ಅಥವಾ ಬಿಜೆಪಿಗಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.

ಕೆಪಿಸಿಸಿ ಕಚೇರಿಯಲ್ಲಿ ರವಿವಾರ ಹಮ್ಮಿಕೊಂ ಡಿದ್ದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಜನ್ಮದಿನಾಚರಣೆ ಮತ್ತು ನಗರ ಜಿಲ್ಲೆಯ ಐದು ವಿಭಾಗಗಳ ನೂತನ ಜಿಲ್ಲಾಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ತಮ್ಮ ಕಾಲದಲ್ಲಿ ಇವರು (ಕುಮಾರಸ್ವಾಮಿ) ಲಂಚ ತೆಗೆದುಕೊಂಡು ವರ್ಗಾವಣೆ ಮಾಡುತ್ತಿ ದ್ದರು. ಅದೇ ಈಗಲೂ ಆಗುತ್ತಿರಬಹುದು ಅಂದುಕೊಂಡಿದ್ದಾರೋ ಅಥವಾ ಸರಕಾರದ ವಿರುದ್ಧ ಅಪಪ್ರಚಾರ ಮಾಡಬೇಕು ಅಂತ ಹೀಗೆ ಹೇಳಿಕೆ ನೀಡುತ್ತಿದ್ದಾರೋ ಗೊತ್ತಿಲ್ಲ. ಆದರೆ ಆಡಳಿತಯಂತ್ರ ಸುಧಾರಣೆಗಾಗಿ ವರ್ಗಾವಣೆ ಮಾಡುವುದು ಸಹಜ ಪ್ರಕ್ರಿಯೆ. ಅದನ್ನೇ ವರ್ಗಾವಣೆ ದಂಧೆ ಎಂದು ಬಿಂಬಿಸುವುದು ಸರಿ ಅಲ್ಲ ಎಂದು ವರ್ಗಾವಣೆಗೆ ಸಮರ್ಥನೆ ನೀಡಿದರು.

ಸಾಬೀತು ಮಾಡಿದರೆ ರಾಜಕೀಯ ನಿವೃತ್ತಿ
ತಮಗೆ ಈ ಹಿಂದೆ ಅಧಿಕಾರ ಕೊಟ್ಟರೂ ಸರಿಯಾಗಿ ಮಾಡಲಾಗದೆ ಜನರಿಂದ ತಿರಸ್ಕರಿಸಲ್ಪಟ್ಟರು. ಈಗ ಜನ ನಮಗೆ ಅಧಿಕಾರ ಕೊಟ್ಟಿದ್ದಾರೆ. ಆದರೆ ಇವರು ಹೊಟ್ಟೆಕಿಚ್ಚು, ದ್ವೇಷದ ರಾಜಕಾರಣದಿಂದ ಹೇಗಾದರೂ ಮಾಡಿ ಸರಕಾರಕ್ಕೆ ಮಸಿ ಬಳಿಯಲು ಪ್ರಯತ್ನಿಸುತ್ತಿದ್ದಾರೆ. ನಾನು ಒಂದೇ ಒಂದು ರೂಪಾಯಿ ಲಂಚ ತೆಗೆದುಕೊಂಡಿದ್ದೇನೆ ಎಂಬುದನ್ನು ಅವರು ಸಾಬೀತುಪಡಿಸಿದರೆ, ರಾಜಕೀಯ ನಿವೃತ್ತಿ ಘೋಷಿಸುತ್ತೇನೆಂದು ಸವಾಲು ಹಾಕಿದರು.

ಕುಮಾರಸ್ವಾಮಿ ನನ್ನ ಮತ್ತು ಡಿ.ಕೆ. ಶಿವಕುಮಾರ್‌ ವಿರುದ್ಧ ನಿರಂತರ ಆರೋಪಗಳನ್ನು ಮಾಡುತ್ತಲೇ ಇದ್ದಾರೆ. ಅದರಲ್ಲಿ ಒಂದಾದರೂ ಸಾಬೀತಾಗಿದೆಯೇ? ಒಂದಕ್ಕಾದರೂ ದಾಖಲೆ ನೀಡಿದ್ದಾರಾ? ಇಲ್ಲ. ಅವರದ್ದು ಬರೀ “ಹಿಟ್‌ ಆ್ಯಂಡ್‌ ರನ್‌’ ಕೇಸ್‌. ಸುಳ್ಳು ಅವರ ಮನೆದೇವರು. ಇನ್ನು ಸೋತು ಸುಣ್ಣವಾಗಿರುವ ಬಿಜೆಪಿಯವರಿಗೂ ಹೀಗೆ ಆರೋಪ ಮಾಡುವುದೇ ಬೇಕಾಗಿದೆ. ಇವೆರಡೂ (ಬಿಜೆಪಿ-ಜೆಡಿಎಸ್‌) ಒಂದು ರೀತಿ ಅನ್ನ ಹಳಸಿತ್ತು ಮತ್ತು ನಾಯಿ ಕಾದಿತ್ತು ಅನ್ನುವಂತಿದೆ ಎಂದು ಟೀಕಿಸಿದರು.

ಮುಂದೆ ನಮಗೆ ಲೋಕಸಭಾ ಚುನಾವಣೆಯ ದೊಡ್ಡ ಸವಾಲಿದೆ. ಬೆಂಗಳೂರಿನ ಮೂರು ಸ್ಥಾನಗಳು ಸಹಿತ ಎಲ್ಲ 28 ಸ್ಥಾನಗಳನ್ನು ಗೆಲ್ಲಲೇಬೇಕು. ಇದರ ಬೆನ್ನಲ್ಲೇ ಪಾಲಿಕೆ ಚುನಾವಣೆ ಬರಲಿದ್ದು, ಅಲ್ಲಿಯೂ ಅಧಿಕಾರ ಹಿಡಿಯಬೇಕು. ಈ ನಿಟ್ಟಿನಲ್ಲಿ ನೂತನವಾಗಿ ಪದಗ್ರಹಣ ಮಾಡಿದ ನಗರ ಜಿಲ್ಲೆಯ ಐದು ವಿಭಾಗಗಳ ನೂತನ ಜಿಲ್ಲಾಧ್ಯಕ್ಷರ ಮೇಲೆ ಹೊಣೆ ಹೆಚ್ಚಿದೆ ಎಂದರು.

ಬಿಜೆಪಿ ಗೆದ್ದರೆ ಗ್ಯಾರಂಟಿಗೆ ಕೊಕ್ಕೆ
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಮಾತನಾಡಿ, ಕಾಂಗ್ರೆಸ್‌ ಸರಕಾರವು ನುಡಿದಂತೆ ನಡೆದು, ನಾಲ್ಕು ಗ್ಯಾರಂಟಿಗಳನ್ನು ಜಾರಿಗೊಳಿಸಿದೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ವೋಟಿನ ಮೂಲಕ ಇದರ ಲಾಭ ಪಡೆಯಬೇಕು. ಬಿಜೆಪಿ ಅಥವಾ ಜೆಡಿಎಸ್‌ಗೆ ಮತ ಚಲಾಯಿಸಿದರೆ, ಈ ಗ್ಯಾರಂಟಿಗಳನ್ನು ನೀಡದಂತೆ ಯಾವುದಾದರೂ ಕಾನೂನು ತರಲಿದೆ ಎಂಬ ಸಂದೇಶವನ್ನು ಜನರಿಗೆ ತಲುಪಿಸಬೇಕು ಎಂದರು.

ನರೇಂದ್ರ ಮೋದಿ ಕಾಂಗ್ರೆಸ್‌ನ ಗ್ಯಾರಂಟಿ ಗಳನ್ನು ವಿರೋಧಿಸಿದ್ದರು. ಇದರಿಂದ ಆರ್ಥಿಕ ದಿವಾಳಿ ಆಗಲಿದೆ ಎಂದು ಆರೋಪಿಸಿದ್ದರು. ಆದರೆ ಈ ಯೋಜನೆಗಳನ್ನು ಕದ್ದು, ಅವರು ಪಂಚರಾಜ್ಯಗಳ ಚುನಾವಣೆ ಎದುರಿಸುತ್ತಿದ್ದಾರೆ ಎಂದು ಆರೋಪಿಸಿದರು.

ಕರೆಂಟ್‌ ಕದ್ದ ಕ್ಷುಲ್ಲಕ ವ್ಯಕ್ತಿ
ಎರಡು ಬಾರಿ ಮುಖ್ಯಮಂತ್ರಿ ಯಾಗಿದ್ದವರು ಕರೆಂಟ್‌ ಕದ್ದು ಕ್ಷುಲ್ಲಕ ವ್ಯಕ್ತಿ ಎನಿಸಿಕೊಂಡಿದ್ದಾರೆ ಎಂದು ಎಚ್‌.ಡಿ. ಕುಮಾರಸ್ವಾಮಿ ಅವರನ್ನು ಸಿದ್ದರಾಮಯ್ಯ ಮೂದಲಿಸಿದರು. ದಂಡ ಪಾವತಿಸಿದ್ದಾರೆ ಎಂದರೆ ತಪ್ಪು ಮಾಡಿದ್ದಾರೆ ಎಂದರ್ಥ ಅಲ್ಲವೇ? ಅಂಥವರು ನಮ್ಮ ಮೇಲೆ ವರ್ಗಾವಣೆ ದಂಧೆ ಆರೋಪ ಮಾಡುತ್ತಾರೆ ಎಂದು ವಾಗ್ಧಾಳಿ ನಡೆಸಿದರು.

ಟಾಪ್ ನ್ಯೂಸ್

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.