ಪ್ರಣೀತಾ ಕಾರ್ಯಕ್ಕೆ ಮೆಚ್ಚುಗೆ
Team Udayavani, Jun 4, 2020, 4:57 AM IST
ಕೋವಿಡ್ 19ನಿಂದ ಇಡೀ ಜಗತ್ತೇ ತತ್ತರಿಸಿದೆ. ಈ ಸಂದರ್ಭದಲ್ಲಿ ಪ್ರತಿಯೊಬ್ಬರು ತಮ್ಮ ಕೈಲಾದ ಸಹಾಯ ಮಾಡುತ್ತಿದ್ದಾರೆ. ಇದರಲ್ಲಿ ಸಿನಿಮಾ ಮಂದಿ ಕೂಡಾ ಸೇರಿದ್ದಾರೆ. ಕನ್ನಡ ಚಿತ್ರರಂಗದ ನಟ-ನಟಿಯರು ಕೂಡಾ ಕೊರೊನಾ ಸಂಕಷಟಕ್ಕೆ ನಿರಂತರವಾಗಿ ತಮ್ಮಕೈಲಾದ ಸಹಾಯ ಮಾಡುತ್ತಿದ್ದಾರೆ. ಇದರಲ್ಲಿ ನಟಿ ಪ್ರಣೀತಾ ಕೂಡಾ ಸೇರಿದ್ದಾರೆ. ಕೋವಿಡ್ 19 ಸಂಕಷ್ಟ ಆರಂಭವಾದ ದಿನದಿಂದಲೂ ತಮ್ಮದೇ ರೀತಿಯಲ್ಲಿ ಸಹಾಯ ಮಾಡುತ್ತಾ ಬಂದಿರುವ ಪ್ರಣೀತಾ ಈಗ ಆಟೋ ಚಾಲಕರಿಗೆ ಸಹಾಯ ಮಾಡಿದ್ದಾರೆ.
ನೂರಕ್ಕೂ ಹೆಚ್ಚು ಆಟೋಗಳಿಗೆ ಫೈಬರ್ ಶೀಟ್ ಹಾಕಿಸಿ, ಚಾಲಕ ಹಾಗೂ ಪ್ರಯಾಣಿಕರ ಮಧ್ಯೆ ಅಂತರ ಕಾಯ್ದುಕೊಳ್ಳಲು ಸಹಾಯ ಮಾಡಿದ್ದಾರೆ. ಜೊತೆಗೆ ಸಾವಿರಕ್ಕೂ ಹೆಚ್ಚು ಆಟೋಗಳಿಗೆ ಈ ತರಹದ ಫೈಬರ್ ಶೀಟ್ ಹಾಕಿಸುವ ಗುರಿ ಹೊಂದಿದ್ದಾರೆ. ಇನ್ನು ಕೊರೊನಾಕೋವಿಡ್ 19 ಲಾಕ್ಡೌನ್ನಿಂದಾಗಿ ಅನೇಕ ಬಡವರು, ಕೂಲಿ ಕಾರ್ಮಿಕರ ಬದುಕು ದುಸ್ತರವಾಗಿದೆ. ಕೆಲಸವಿಲ್ಲದೆ ಅನೇಕ ಕುಟುಂಬಗಳು ಕಂಗಾಲಾಗಿವೆ. ಇಂಥವರ ನೆರವಿಗೆ ಮುಂದಾಗಿರುವ ಪ್ರಣೀತಾ, ಅವರಿಗಾಗಿ ಊಟದ ವ್ಯವಸ್ಥೆ ಮತ್ತು ಅಗತ್ಯವಿರುವ ದಿನಸಿ ಸಾಮಾನುಗಳನ್ನು ಒದಗಿಸಲು ಅನೇಕ ಸಂಘ-ಸಂಸ್ಥೆಗಳ ಜೊತೆಗೆ ಕೈ ಜೋಡಿಸಿದ್ದಾರೆ.
ಬಡವರು, ಕೂಲಿ ಕಾರ್ಮಿಕರಿಗೆ ಸಹಾಯವಾಗಲು ಕೆಲವು ಸಂಸ್ಥೆಗಳ ಜೊತೆ ಸೇರಿ ಕಾರ್ಯಕ್ರಮ ರೂಪಿಸಿ, ಬಿ.ಪಿ.ಎಲ್ ಕಾರ್ಡ್ ದಾರರಾಗಿರುವ ಸುಮಾರು 500ಕ್ಕೂ ಹೆಚ್ಚು ಕುಟುಂಬಗಳನ್ನು ಆಯ್ಕೆ ಮಾಡಿಕೊಂಡು ಅವರ ಕುಟುಂಬಕ್ಕೆ ಬೇಕಾದ ಅಗತ್ಯ ಸಾಮಗ್ರಿಗಳನ್ನು ಒದಗಿಸಿದ್ದಾರೆ. ಜೊತೆಗೆ 2 ಸಾವಿರ ಹಣವನ್ನು ಅವರ ಅಕೌಂಟ್ ಗೆ ಹಾಕಿದ್ದಾರೆ. ಇನ್ನು ಪ್ರಣೀತಾ ಮನೆಯಲ್ಲಿ ಅವರ ಪೋಷಕರು ಕೂಡ ವೈದ್ಯರಾಗಿರುವುದರಿಂದ, ಕೋವಿಡ್ 19 ಎಫೆಕ್ಟ್ ಹೇಗಿದೆ ಎನ್ನುವುದನ್ನ ಅವರು ಹತ್ತಿರದಿಂದ ನೋಡುತ್ತಿದ್ದಾರಂತೆ. ಸದ್ಯ ಎಲ್ಲರ ಲೈಫ್ ಗೂ ಕೋವಿಡ್ 19 ಬ್ರೇಕ್ ಹಾಕಿದಂತಿದೆ ಎನ್ನುವ ಪ್ರಣೀತಾ, ಆದಷ್ಟು ಬೇಗ ಎಲ್ಲವೂ ಸಹಜ ಸ್ಥಿತಿಗೆ ಬರಲಿ, ಎಲ್ಲರೂ ಇದರಿಂದ ಹೊರಗೆ ಬರಲಿ ಎನ್ನುತ್ತಾರೆ.
ಇದರ ಜೊತೆಗೆ ಪ್ರಣೀತಾ ಒಂದಷ್ಟು ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರಂತೆ. ಈ ಬಗ್ಗೆ ಅವರೇ ಹೇಳುವಂತೆ, ಈಗ ಮನೆಯಲ್ಲಿ ತುಂಬ ಸಮಯ ಸಿಗುತ್ತಿರುವುದರಿಂದ, ಜಿಮ್, ವರ್ಕೌಟ್, ಡ್ಯಾನ್ಸ್ ಪ್ರಾಕ್ಟೀಸ್ ಎಲ್ಲವೂ ಮನೆಯಲ್ಲೇ ನಡೆಯುತ್ತಿದೆ. ಈಗ ಮನೆಯಲ್ಲಿ ನಾನೇ ಅಡುಗೆ ಮಾಡುತ್ತಿದ್ದೇನೆ. ಒಳ್ಳೆಯ ಸಿನಿಮಾಗಳನ್ನ ನೋಡುತ್ತಿದ್ದೇನೆ. ಒಂದಷ್ಟು ಪುಸ್ತಕಗಳನ್ನು ಓದುತ್ತಿದ್ದೇನೆ. ಮನೆಯಲ್ಲೇ ಇದ್ದರೂ ಎಂಗೇಜ್ ಆಗಿರುತ್ತೇನೆ ಎನ್ನುವುದು ಪ್ರಣೀತಾ ಮಾತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?
Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Sandalwood; ಟ್ರೆಂಡ್ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…
MUST WATCH
ಹೊಸ ಸೇರ್ಪಡೆ
Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ
T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ