ಮೇಕೆದಾಟು ಯೋಜನೆ ರಾಜ್ಯದ ಹಕ್ಕು
ತ.ನಾಡಿಗೆ ಅನ್ಯಾಯ ಆಗುವುದಿಲ್ಲ: ಲೋಕಸಭೆಯಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಪ್ರತಿಪಾದನೆ
Team Udayavani, Aug 5, 2021, 10:04 PM IST
ನವದೆಹಲಿ: ಮೇಕೆದಾಟು ಯೋಜನೆ ಕರ್ನಾಟಕದ ಹಕ್ಕು ಎಂದು ಎಂದು ಹಾಸನ ಲೋಕಸಭಾ ಕ್ಷೇತ್ರದ ಸಂಸದ ಪ್ರಜ್ವಲ್ ರೇವಣ್ಣ ಪ್ರತಿಪಾದಿಸಿದ್ದಾರೆ. ರಾಜ್ಯಕ್ಕೆ ಮೀಸಲಾಗಿ ಇರುವ ನೀರಿನ ಪ್ರಮಾಣ ಬಳಕೆ ಮಾಡಲಿದ್ದೇವೆ ಎಂದೂ ಹೇಳಿದ್ದಾರೆ. ಲೋಕಸಭೆಯಲ್ಲಿ ಗುರುವಾರ ಮಾತನಾಡಿದ ಅವರು, ಕರ್ನಾಟಕಕ್ಕೆ ಮೀಸಲಾಗಿ ಇರುವ ನೀರಿನ ಪ್ರಮಾಣ ಮಾತ್ರ ಮೇಕೆದಾಟು ಮೂಲಕ ಬಳಕೆ ಮಾಡಲಾಗುತ್ತದೆ. ಇದರಿಂದ ನೆರೆಯ ತಮಿಳುನಾಡಿಗೆ ಯಾವುದೇ ಅನ್ಯಾಯ ಆಗುವುದಿಲ್ಲ ಎಂದು ಪ್ರತಿಪಾದಿಸಿದ್ದಾರೆ.
ಕಾವೇರಿ ನ್ಯಾಯಾಧಿಕರಣ ನೀಡಿದ್ದ ತೀರ್ಪಿನ ಅನ್ವಯ ರಾಜ್ಯಕ್ಕೆ ದೊರಕಿರುವ ನೀರನ್ನು ಕುಡಿಯುವ ಮತ್ತು ವಿದ್ಯುತ್ ಉತ್ಪಾದಿಸಲು ಬಳಕೆ ಮಾಡುಲು ಉದ್ದೇಶಿಸಿದ್ದೇವೆ ಎಂದರು. ಸುಪ್ರೀಂ ಕೋರ್ಟ್ಗಾಗಲೀ ಅಥವಾ ಬೇರೆ ರಾಜ್ಯಕ್ಕಾಗಲಿ ಯಾವುದೇ ರೀತಿಯಲ್ಲಿ ಅಗೌರವ ಸೂಚಿ ಸುತ್ತಿಲ್ಲ. ನಮಗೆ ನೀಡಲಾಗಿರುವ ನೀರನ್ನು ಉಪಯೋಗಿಸಲು ತಮಿಳುನಾಡನ್ನು ಕೇಳುವ ಅವಶ್ಯಕತೆ ಏನಿದೆ ಎಂದು ರೇವಣ್ಣ ಕೇಂದ್ರ ಸಚಿವರಿಗೆ ಪ್ರಶ್ನಿಸಿದರು.
ಮೇಕೆದಾಟು ಯೋಜನೆಗೆ ಒಕ್ಕೂಟ ಸರ್ಕಾರ ಶೀಘ್ರವೇ ಅನುಮತಿ ನೀಡ ಬೇಕು. ರಾಜ್ಯದ ಬಿಜೆಪಿ ಸರ್ಕಾರ ಕೂಡ ಸರ್ಕಾರದ ಮೇಲೆ ಒತ್ತಡ ತಂದು ಯೋಜನೆಗೆ ಅನುಮತಿ ಸಿಗುವಂತೆ ಮಾಡ ಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಅನುಮತಿ ಬೇಕು: ರೇವಣ್ಣ ಪ್ರಶ್ನೆ ಉತ್ತರಿಸಿದ ಕೇಂದ್ರ ಜಲಶಕ್ತಿ ಖಾತೆ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಕರ್ನಾಟಕ ಸಲ್ಲಿರುವ ಸಮಗ್ರ ಯೋಜನಾ ವರದಿಗೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಅನುಮತಿ ಬೇಕು ಎಂದರು. ಡಿಪಿಆರ್ಗೆ ತಾತ್ವಿಕ ಒಪ್ಪಿಗೆ ನೀಡಲಾಗಿದೆ. ಆದರೆ, ಇದಕ್ಕೆ ಕಾವೇರಿ ಕಣಿವೆಯ ರಾಜ್ಯಗಳ ಸಮ್ಮತಿ ಬೇಕು. ಈ ಅಂಶದ ಬಗ್ಗೆ ರಾಜ್ಯ ಸರ್ಕಾರಕ್ಕೆ ಡಿಪಿಆರ್ ಸಿದ್ಧಪಡಿಸುವ ಬಗ್ಗೆ ಕೋರಿಕೆ ಸಲ್ಲಿಸಿದಾಗಲೇ ಸೂಚಿಸಲಾಗಿತ್ತು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ