ಮುಸ್ಲಿಮರ ಓಲೈಕೆ ಬಿಜೆಪಿಗೆ ಶೋಭೆಯಲ್ಲ: ಪ್ರಮೋದ್ ಮುತಾಲಿಕ್
Team Udayavani, Feb 20, 2023, 6:15 AM IST
ಬಾಗಲಕೋಟೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರಕಾರ ಪ್ರಸಕ್ತ ಬಜೆಟ್ನಲ್ಲಿ ಮುಸ್ಲಿಮರ ಓಲೈಕೆ ಮಾಡಿರುವುದು ಖಂಡನೀಯ ಎಂದು ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ ಮುತಾಲಿಕ ಹೇಳಿದರು.
ರವಿವಾರ ಸುದ್ದಿಗಾರರ ಜತೆ ಮಾತನಾಡಿ, ಮುಸ್ಲಿಮರ ಖಬರಸ್ತಾನ ಅಭಿವೃದ್ಧಿಗೆ 10 ಕೋಟಿ ರೂ. ಘೋಷಣೆ ಮಾಡಲಾಗಿದೆ. ಈಗಾಗಲೇ ವಕ್ಫ್ ಬೋರ್ಡ್ನಲ್ಲಿ ಸಾವಿರಾರು ಕೋಟಿ ರೂ. ಮತ್ತೆ ಹೆಚ್ಚುವರಿಯಾಗಿ ಬಜೆಟ್ನಲ್ಲಿ 10 ಕೋಟಿ ರೂ. ಏಕೆ ಎಂದು ಪ್ರಶ್ನಿಸಿದರು.
ಬಿಜೆಪಿಯವರು ಹಿಂದೂ ಹೋರಾಟಗಾರರಿಗೆ ಟಿಕೆಟ್ ಕೊಡುವುದಿಲ್ಲ. ಅವರನ್ನು ಗದ್ದುಗೆಗೆ ಏರಿಸಿದವರೇ ನಾವು. ನನಗೆ ಟಿಕೆಟ್ ಕೇಳುವ ಹಕ್ಕಿದೆ. ನಿಮ್ಮನ್ನು ಟೀಕಿಸುವ-ಬೈಯುವ ಹಕ್ಕಿದೆ. ಬಿಜೆಪಿಯವರು ಹಿಂದೂ ಕಾರ್ಯಕರ್ತರು, ಹೋರಾಟಗಾರರಿಗೆ ದ್ರೋಹ ಮಾಡುತ್ತಿದ್ದಾರೆ. ಬಿಜೆಪಿಯ ಯಾರ್ಯಾರು ದ್ರೋಹ ಮಾಡಿದ್ದೀರಿ ಎಂಬುದನ್ನು ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ವಿಜಯ ಸಾಧಿಸಿ ತೋರಿಸುತ್ತೇನೆ ಎಂದರು.
ಎಸ್ಡಿಪಿಐ ದ್ರೇಶದ್ರೋಹಿ, ಸಮಾಜಘಾತುಕ ಪಕ್ಷ. ರಾಜ್ಯದಲ್ಲಿ ನಡೆದ 23 ಕೊಲೆ ಪ್ರಕರಣಗಳ ಪೈಕಿ 9 ರಲ್ಲಿ ಎಸ್ಡಿಪಿಐ ಹೆಸರಿದೆ.
ಪುತ್ತೂರಿನಲ್ಲಿ ಪ್ರವೀಣ್ ನೆಟ್ಟಾರು ಕೊಲೆ ಆರೋಪಿಯನ್ನು ಅಭ್ಯರ್ಥಿಯನ್ನಾಗಿ ಎಸ್ಡಿಪಿಐ ರಾಜ್ಯಾಧ್ಯಕ್ಷರು ಘೋಷಣೆ ಮಾಡಿದ್ದಾರೆ. ಇದು ಕೊಲೆ ಮಾಡಿದವರಿಗೆ ಪ್ರೋತ್ಸಾಹ ಕೊಟ್ಟಂತೆ ಅಲ್ಲವೇ ಎಂದು ಪ್ರಶ್ನಿಸಿದರು.
ನಾವು ಬಿಜೆಪಿ ವಿರೋಧಿಗಳಲ್ಲ. ಪ್ರಧಾನಿ ಮೋದಿಯವರೇ ನಮ್ಮ ನಾಯಕರು. ಅವರ ವಿಚಾರಧಾರೆಯನ್ನು ಕಾರ್ಕಳದ ಮೂಲಕ ತರುವುದಕ್ಕಾಗಿ ಚುನಾವಣೆ ಕಣಕ್ಕಿಳಿದಿದ್ದೇನೆ. ಬಿಜೆಪಿ ಹಿಂದುತ್ವದ ಪಕ್ಷ. ಆದರೆ ಅದರಲ್ಲಿರುವ ಕೆಲವರ ವಿಕೃತಿ, ಹಿಂದೂ ದ್ರೋಹ, ಭ್ರಷ್ಟತೆಯ ವಿರುದ್ಧ ನನ್ನ ಹೋರಾಟ. ಬಿಜೆಪಿ ವಿರುದ್ಧ ಅಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್ ಈಗ “ಸಂಯುಕ್ತ’
Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್
Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ
Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು
ತಾಕತ್ತಿದ್ದರೆ ಯತ್ನಾಳ್ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್
MUST WATCH
ಹೊಸ ಸೇರ್ಪಡೆ
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ