ಕಾರ್ಮಿಕರ ನೆರವಿಗೆ ಮುಂದಾದ “ನಟ ಭಯಂಕರ’
Team Udayavani, Jul 11, 2020, 7:25 AM IST
ಕೋವಿಡ್ 19ನಿಂದಾಗಿ ಅನೇಕ ಚಿತ್ರಗಳ ಚಿತ್ರೀಕರಣ ಅರ್ಧಕ್ಕೆ ನಿಂತಿದೆ. ಸರ್ಕಾರ ಮಾರ್ಗಸೂಚಿಗಳನ್ನು ಪಾಲಿಸಿ ಚಿತ್ರೀಕರಣಕ್ಕೆ ಅನುಮತಿ ನೀಡಿದರೂ, ಅನೇಕ ಚಿತ್ರಗಳ ನಿರ್ಮಾಪಕರು, ನಿರ್ದೇಶಕರು, ಕಲಾವಿದರು ಚಿತ್ರೀಕರಣಕ್ಕೆ ಹಿಂದೇಟು ಹಾಕುತ್ತಿದ್ದಾರೆ. ಇದೇ ವೇಳೆ ಚಿತ್ರ ರಂಗದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ತಂತ್ರಜ್ಞರು ಮತ್ತು ಕಾರ್ಮಿಕರ ನೆರವಿಗೆ ನಟ ಪ್ರಥಮ್ ಮುಂದಾಗಿದ್ದಾರೆ.
ತಮ್ಮ ನಟ ಭಯಂಕರ’ ಚಿತ್ರದಲ್ಲಿ ಕೆಲಸ ಮಾಡಿರುವ ತಂತ್ರ ಜ್ಞರು ಮತ್ತು ಕಾರ್ಮಿಕರಿಗೆ ದಿನಬಳಕೆಯ ಅಗತ್ಯ ವಸ್ತುಗಳ ಕಿಟ್ ಮತ್ತು 3 ಸಾವಿರ ರೂ. ನಗದು ವಿತರಿಸಿದ್ದಾರೆ. ಕೋವಿಡ್ 19 ಸಂದರ್ಭದಲ್ಲಿ ಚಿತ್ರರಂಗದ ಕಾರ್ಮಿಕರ ನೆರವಿಗೆ ಮುಂದಾಗಿರುವ ಪ್ರಥಮ್ ಕಾರ್ಯಕ್ಕೆ ಚಿತ್ರರಂಗದ ಅನೇಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇನ್ನು ಪ್ರಥಮ್ ಅಭಿನಯದ ನಟ ಭಯಂಕರ’ ಚಿತ್ರದ ಬಹುತೇಕ ಕೆಲಸಗಳು ಪೂರ್ಣಗೊಂಡಿದ್ದು, ಚಿತ್ರ ಕೊನೆಯ ಹಂತದಲ್ಲಿದೆ.
ಎಲ್ಲ ಅಂದುಕೊಂಡಂತೆ ನಡೆದಿದ್ದರೆ “ನಟ ಭಯಂಕರ’ ಇಷ್ಟೊತ್ತಿಗಾಗಲೇ ತೆರೆಗೆ ಬರಬೇಕಿತ್ತು. ಆದರೆ ಸದ್ಯಕ್ಕೆ ಕೋವಿಡ್ 19 ಅನಿಶ್ಚಿತತೆ ಇರುವುದರಿಂದ, ಎಲ್ಲವೂ ತಿಳಿಯಾದ ಬಳಿಕ ಚಿತ್ರವನ್ನು ಪ್ರೇಕ್ಷಕರ ಮುಂದೆ ತರಲಿದ್ದೇವೆ. ಇದೊಂದು ಹೊಸ ಶೈಲಿಯ ಚಿತ್ರವಾಗಿದ್ದು, ಪ್ರೇಕ್ಷಕರಿಗೆ ಇಷ್ಟವಾಗಲಿದೆ ಎನ್ನುವುದು ಪ್ರಥಮ್ ಮಾತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ