ತರಂಗ ವಾರಪತ್ರಿಕೆಗೆ ಪಿಆರ್ಸಿಐ ಚಾಣಕ್ಯ ಪ್ರಶಸ್ತಿ
ಪಿಆರ್ಸಿಐ - ವರ್ಷದ ವಾರ ಪತ್ರಿಕೆಯಾಗಿ ಆಯ್ಕೆ ; ಡಾ| ಸಂಧ್ಯಾ ಪೈ ಅವರಿಂದ ಪ್ರಶಸ್ತಿ ಸ್ವೀಕಾರ
Team Udayavani, Mar 7, 2020, 7:00 AM IST
ಬೆಂಗಳೂರು: ಭಾರತೀಯ ಸಾರ್ವಜನಿಕ ಸಂಪರ್ಕ ಮಂಡಳಿಯು (ಪಿಆರ್ಸಿಐ) ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸಂವಹನ ಸಾಧಕರಿಗೆ- ಸಂಸ್ಥೆಗಳಿಗೆ ಕೊಡ ಮಾಡುವ ಚಾಣಕ್ಯ ಪ್ರಶಸ್ತಿಗೆ ಮಣಿಪಾಲ್ ಮೀಡಿಯಾ ನೆಟ್ವರ್ಕ್ ಲಿಮಿಟೆಡ್ನ “ತರಂಗ’ ವಾರಪತ್ರಿಕೆ ಭಾಜನವಾಗಿದೆ. “ವರ್ಷದ ಸಂವಹನಕಾರ-ವರ್ಷದ ವಾರ ಪತ್ರಿಕೆ’ಯಾಗಿ ತರಂಗ ವಾರಪತ್ರಿಕೆ ಆಯ್ಕೆಯಾಗಿದೆ.
ಅರಮನೆ ರಸ್ತೆಯ ಜ್ಞಾನಜ್ಯೋತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಭಾರತೀಯ ಸಾರ್ವಜನಿಕ ಸಂಪರ್ಕ ಮಂಡಳಿಯ 11ನೇ ಆವೃತ್ತಿಯ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಿತು. ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು “ತರಂಗ’ ವಾರಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ| ಸಂಧ್ಯಾ ಎಸ್. ಪೈ ಅವರಿಗೆ ಚಾಣಕ್ಯ ಪ್ರಶಸ್ತಿ ನೀಡಿ ಗೌರವಿಸಿದರು.
ಶಕ್ತಿಶಾಲಿ ಸಂವಹನ ಅಗತ್ಯ
ಗೃಹ ಸಚಿವ ಬಸವರಾಜ ಬೊಮ್ಮಾಯಿ ಮಾತನಾಡಿ, ಉತ್ತಮ ಸಂವಹನಕಾರನಾಗಿದ್ದರೆ ಮಾತ್ರ ವಿಶ್ವ ನಾಯಕನಾಗಲು ಸಾಧ್ಯ. ಪರಿಣಾಮಕಾರಿ ಸಂವಹನ ರಾಜಕೀಯ ವ್ಯವಸ್ಥೆಯ ಅವಿಭಾಜ್ಯ ಅಂಗವಾಗಿದೆ. ಸಂವಹನದಲ್ಲಿ ಕಲಿಕೆಯು ನಿರಂತರವಾಗಿರುತ್ತದೆ. ಪ್ರಶಸ್ತಿಗೆ ಭಾಜನರಾದ ಎಲ್ಲರೂ ಅತ್ಯುತ್ತಮ ಸಂವಹನಕಾರರಾಗಿದ್ದು ಇತರರಿಗೆ ಮಾದರಿ ಎಂದರು.
ಹೈಕೋರ್ಟ್ ನಿವೃತ್ತ ಮುಖ್ಯ ನ್ಯಾಯಮೂರ್ತಿ ನಾಗ ಮೋಹನ್ದಾಸ್ ಮಾತನಾಡಿ, ಕಳೆದ 70 ವರ್ಷಗಳ ಪತ್ರಿಕಾ ಸ್ವಾತಂತ್ರ್ಯವನ್ನು ಬಳಸಿಕೊಂಡು ಅನೇಕ ಮಾಧ್ಯಮಗಳು ಸಮಾಜ ಕಟ್ಟಲು ನೆರವಾಗಿವೆ. ಪ್ರಮುಖವಾಗಿ ಸಮಾಜದಿಂದ ಹಿಂದುಳಿದ ವರನ್ನು ಮುಖ್ಯವಾಹಿನಿಗೆ ತರಲು, ಅನೇಕ ವಲಯಗಳ ಅಭಿವೃದ್ಧಿ, ವೈಜ್ಞಾನಿಕ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದವು. ಆದರೆ, ಇತ್ತೀಚಿನ ದಿನಗಳಲ್ಲಿ ಮಾಧ್ಯಮಗಳ ಪರಿಸ್ಥಿತಿ ಬದಲಾಗಿದೆ. ಬಹು ರಾಷ್ಟ್ರೀಯ ಕಂಪೆನಿಗಳು, ರಾಜಕಾರಣಿಗಳು ಮಾಧ್ಯಮ ವಲಯಕ್ಕೆ ಬಂದು ಅಲ್ಲಿನ ವ್ಯವಸ್ಥೆಯನ್ನು ನಿಯಂತ್ರಿಸುತ್ತಿವೆ. ಎಂದರು.
ಪ್ರಶಸ್ತಿ ಪ್ರದಾನ
ಇದೇ ಸಂದರ್ಭದಲ್ಲಿ ಉತ್ತಮ ಆಡಳಿತ ವಿಭಾಗ ದಲ್ಲಿ ವಾರ್ತಾ ಇಲಾಖೆ ಕಾರ್ಯದರ್ಶಿ ಕ್ಯಾಪ್ಟನ್ ಮಣಿವಣ್ಣನ್, ಡಿಜಿಟಲ್ ಸಂವಹನ ವಿಭಾಗದಲ್ಲಿ ತೆಲಂಗಾಣ ಸರಕಾರದ ಡಿಜಿಟಲ್ ಮೀಡಿಯಾ ನಿರ್ದೇಶಕ ದಿಲೀಪ್ ಕೊನಥಂ ಸೇರಿದಂತೆ 10ಕ್ಕೂ ಹೆಚ್ಚು ವಿಭಾಗದಲ್ಲಿ ಚಾಣಕ್ಯ ಪ್ರಶಸ್ತಿ ವಿತರಿಸಲಾಯಿತು. ಜತೆಗೆ ಯುವ ಸಂಪರ್ಕ ಸಾಧಕರಿಗೆ ಕೌಟಿಲ್ಯ ಪ್ರಶಸ್ತಿ, ಸಾರ್ವಜನಿಕ ಸಂಪರ್ಕ ಸಾಧಕರಿಗೆ “ಹಾಲ್ ಆಫ್ ಫೇಮ…’ ಪ್ರಶಸ್ತಿ ನೀಡಿ ಗೌರವಿಸಲಾಯಿತು.ಕಾರ್ಯಕ್ರಮದಲ್ಲಿ ಮೇಜರ್ ಜನರಲ್ ಸತ್ಯ ಪ್ರಕಾಶ್ ಯಾದವ್, ಎಂ.ಬಿ.ಜಯರಾಂ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು
Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
MUST WATCH
ಹೊಸ ಸೇರ್ಪಡೆ
ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ
ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ
Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ
ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು
Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು