ಗರ್ಭಿಣಿ ಶುಶ್ರೂಷಕಿಗೆ ಸಿಎಂ ಅಭಿನಂದನೆ
Team Udayavani, May 11, 2020, 5:04 AM IST
ತೀರ್ಥಹಳ್ಳಿ: ಕೋವಿಡ್ -19 ಕಂಟಕದ ಮಧ್ಯೆ ತುಂಬು ಗರ್ಭಿಣಿಯಾಗಿದ್ದರೂ ರಜೆ ತೆಗೆದುಕೊಳ್ಳದೆ ಕಾರ್ಯನಿರ್ವಹಿಸುತ್ತಿರುವ ಶುಶ್ರೂಶಕಿಯೊಬ್ಬರಿಗೆ ಖುದ್ದು ಮುಖ್ಯಮಂತ್ರಿ ದೂರವಾಣಿ ಕರೆ ಮಾಡಿ ಅಭಿನಂದಿಸಿದರು.
ತೀರ್ಥಹಳ್ಳಿಯ ಶ್ರೀ ಜಯಚಾಮರಾಜೇಂದ್ರ ತಾಲೂಕು ಆಸ್ಪತ್ರೆಯಲ್ಲಿ ಶುಶ್ರೂಷಕಿಯಾಗಿ ಕಾರ್ಯ ನಿರ್ವಹಿಸುತ್ತಿರುವ ರೂಪಾ ಅವರಿಗೆ ಸಿಎಂ ಬಿ.ಎಸ್. ಯಡಿಯೂರಪ್ಪ ರವಿವಾರ ದೂರವಾಣಿ ಕರೆ ಮಾಡಿ ಅಭಿನಂದಿಸಿದರಲ್ಲದೆ, ಇನ್ನು ಮುಂದೆ ರಜೆ ಪಡೆಯುವಂತೆ ಸೂಚಿಸಿದರು. ರೂಪಾ ಅವರು ಪ್ರತಿದಿನ 110 ಕಿ.ಮೀ. ಪ್ರಯಾಣಿಸಿ ಆಸ್ಪತ್ರೆಗೆ ಬಂದು ಕಾರ್ಯನಿರ್ವಹಿಸುತ್ತಿದ್ದಾರೆ. ಶುಶ್ರೂಶಕಿ ರೂಪಾ ಅವರು ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದು, ಸಿಎಂ ಬಳಿ ತಮ್ಮ ಅಳಲನ್ನು ತೋಡಿಕೊಂಡರು. ಅದನ್ನು ಅನಂತರ ಬಗೆಹರಿಸೋಣ ಎಂದವರು ಭರವಸೆ ನೀಡಿದರು.
ಖುದ್ದು ಸಿಎಂ ಕರೆ ಮಾಡಿದಾಗ ನನಗೆ ನಂಬಲು ಆಗಲಿಲ್ಲ. ಅನಂತರ ಖುಷಿಯಾಯ್ತು. ರವಿವಾರದಿಂದಲೇ ವಿಶ್ರಾಂತಿ ತೆಗೆದುಕೊಳ್ಳಿ ಎಂದರು. ಅದರಂತೆ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದೇನೆ.
-ರೂಪಾ, ಶುಶ್ರೂಷಕಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!