ಸಂಗಮೇಶ್ವರ ಜಾತ್ರೆಗೆ ಸಕಲ ಸಿದ್ಧತೆ

ಒಂದು ಲಕ್ಷಕ್ಕೂ ಅಧಿಕ ಭಕ್ತರು ಪಾಲ್ಗೊಳುವ ನಿರೀಕ್ಷೆ

Team Udayavani, Apr 21, 2022, 2:36 PM IST

15

ಕೂಡಲಸಂಗಮ: ಏಪ್ರಿಲ್‌ 21ರಂದು ನಡೆಯುವ ಕೂಡಲಸಂಗಮದ ಸಂಗಮೇಶ್ವರ ಜಾತ್ರೆಯ ಎಲ್ಲ ಸಿದ್ಧತೆಗಳು ಪೂರ್ಣಗೊಂಡಿದ್ದು ಈ ವರ್ಷ ಒಂದು ಲಕ್ಷಕ್ಕೂ ಅಧಿ ಕ ಭಕ್ತರು ರಥೋತ್ಸವದಲ್ಲಿ ಪಾಲ್ಗೊಳುವ ನಿರೀಕ್ಷೆ ಇದೆ ಎಂದು ಕೂಡಲಸಂಗಮ ಅಭಿವೃದ್ಧಿ ಮಂಡಳಿ ಆಯುಕ್ತ ಎ.ಇ. ರಘು ಹೇಳಿದರು.

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಮಾತ್ರವಲ್ಲದೆ ಮಹಾರಾಷ್ಟ್ರ, ತಮಿಳುನಾಡು, ತೆಲಂಗಾಣ, ಕೇರಳ, ಗೋವಾದಿಂದ ಅಪಾರ ಭಕ್ತರು ಆಗಮಿಸುವರು.

ಜಾತ್ರೆಗೆ ಆಗಮಿಸುವ ಭಕ್ತರಿಗೆ ದಾಸೋಹ ಭವನದಲ್ಲಿ ಪ್ರಸಾದ ವ್ಯವಸ್ಥೆ ಮಾಡಿದ್ದು ಬೆಳಗ್ಗೆ 10ರಿಂದ ರಾತ್ರಿ 11 ಗಂಟೆಯವರೆಗೆ ನಿರಂತರ ಕಾರ್ಯನಿರ್ವಹಿಸುವುದು. ಗೋಧಿ ಹುಗ್ಗಿ, ಬದನೆಕಾಯಿಪಲ್ಲೆ ಅನ್ನ ಸಾಂಬರ ತಯಾರಿಸಲು 15 ಬಾಣಸಿಗರು, 50 ಜನ ಸಹಾಯಕರನ್ನು ನಿಯೋಜಿಸಿದೆ.

ಬುಧವಾರ ಬೆಳಗ್ಗೆ 6 ಗಂಟೆಗೆ ಉತ್ಸವ ಮೂರ್ತಿ ರಥೋತ್ಸವ ನಡೆಯುವುದು, 7ರಿಂದ 8.30ರ ವರೆಗೆ ದೇವಾಲಯದ ಪಾದಗಟ್ಟೆಯ ಆವರಣದಲ್ಲಿ ರಂಗೋಲಿ ಸ್ಪರ್ಧೆ ನಡೆಯುವುದು. 9 ಗಂಟೆಯಿಂದ ದೇವಾಲಯ ಆವರಣದಲ್ಲಿ ವಿವಿಧ ತಂಡಗಳಿಂದ ಭಜನಾ ಕಾರ್ಯಕ್ರಮ ನಡೆಯುವುದು. ಸಂಜೆ 6 ಗಂಟೆಗೆ ಅಪಾರ ಭಕ್ತರ ಜಯಘೋಷದಲ್ಲಿ ಸಂಗಮೇಶ್ವರ ರಥೋತ್ಸವ ನಡೆಯವುದು. ರಾತ್ರಿ 8 ಗಂಟೆಗೆ ಚಿತ್ರದುರ್ಗದ ಜಮುರಾ ಕಲಾ ತಂಡದಿಂದ ಅವಿರಳ ಜ್ಞಾನಿ ಚನ್ನಬಸವಣ್ಣ ನಾಟಕ ಪ್ರದರ್ಶನಗೊಳ್ಳಲಿದೆ.

ಜಾತ್ರೆಗೆ ಆಗಮಿಸುವ ಭಕ್ತರ ವಾಹನಗಳಿಗೆ ಬಸ್‌ ನಿಲ್ದಾಣ ಬಳಿಯ ಆವರಣದಲ್ಲಿ ವ್ಯವಸ್ಥೆ ಮಾಡಿದೆ. ದ್ವಿಚಕ್ರವಾಹನಗಳಿಗೆ ಸಂಗಮೇಶ್ವರ ಕಲ್ಯಾಣ ಮಂಟಪ ಬಳಿಯ ಬಯಲು ಜಾಗದಲ್ಲಿ ವ್ಯವಸ್ಥೆ ಮಾಡಿದೆ. ಬಸವೇಶ್ವರ ವೃತ್ತದವರೆಗೆ ಮಾತ್ರ ಬಸ್‌, ವಾಹನಗಳು ಸಂಚರಿಸುವವು. ಅಡವಿಹಾಳ ಕೂಡಲಸಂಗಮ ಸೇತುವೆಯ ಮೂಲಕ ಭಕ್ತರು ಬರಲು ಅವಕಾಶ ಇದ್ದು, ಸೇತುವೆ ಪ್ರವೇಶ ದ್ವಾರದಲ್ಲಿಯೇ ವಾಹನ ನಿಲ್ಲಿಸಲು ವ್ಯವಸ್ಥೆ ಮಾಡಿದೆ. ಭಕ್ತರು ಸಹಕರಿಸಬೇಕು ಎಂದರು. ಭಕ್ತರ ಅನುಕೂಲಕ್ಕಾಗಿ ಟ್ಯಾಂಕರ್‌ ಮೂಲಕ ರಸ್ತೆಯಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡಿದೆ. ದೇವಾಲಯ ಆವರಣದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಇರುವುದು. ನದಿಯಲ್ಲಿ ನೀರು ಇಳಿಮುಖಗೊಂಡಿದ್ದರಿಂದ ಸ್ನಾನ ಮಾಡಲು ತಾತ್ಕಾಲಿಕ ಸ್ನಾನಘಟ್ಟ ನಿರ್ಮಿಸಲಾಗಿದೆ. ಜಾತ್ರೆಯ ನಿಮಿತ್ತ ಸಂಗಮೇಶ್ವರ ದೇವಾಲಯ, ಬಸವೇಶ್ವರ ಐಕ್ಯ ಮಂಟಪ, ಬಸವೇಶ್ವರ ವೃತ್ತ ವಿದ್ಯುತ್‌ ದೀಪಗಳಿಂದ ಶೃಂಗಾರಗೊಂಡು ಎಲ್ಲರ ಗಮನ ಸೆಳೆಯುತ್ತಿವೆ. ಗ್ರಾಮಸ್ಥರು ರಸ್ತೆಯುದ್ದಕ್ಕೂ ತಳಿರು ತೋರಣಗಳಿದ್ದ ಶೃಂಗರಿಸಿದ್ದಾರೆ.

ಟಾಪ್ ನ್ಯೂಸ್

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

Bagalkote; ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.