ನೂತನ ಶಿಕ್ಷಣ ನೀತಿ ಜಾರಿಗೆ ಸಿದ್ಧತೆ


Team Udayavani, May 22, 2020, 7:33 AM IST

ashwath edu

ಬೆಂಗಳೂರು: ರಾಜ್ಯದಲ್ಲಿ ಹೊಸ ಶಿಕ್ಷಣ ನೀತಿ ಜಾರಿಗೊಳಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್‌. ಅಶ್ವತ್ಥನಾರಾಯಣ ತಿಳಿಸಿದ್ದಾರೆ. ಹುವೈ ಟೆಲಿ  ಕಮ್ಯುನಿಕೇಷನ್‌ ಮುಖ್ಯಸ್ಥ ಡೆರೆಕ್‌ ನೇತೃತ್ವದ ನಿಯೋಗದ ಜತೆ ಭೇಟಿ ನಂತರ ಸುದ್ದಿಗಾರರ ಜತೆ ಮಾತನಾಡಿ, ಹೊಸ ಶಿಕ್ಷಣ ನೀತಿ ಅನುಷ್ಠಾನಕ್ಕೆ ಅನುಕೂಲವಾಗುವಂತೆ ಕಾರ್ಯಪಡೆ ರಚನೆ ಮಾಡಲಾಗಿದೆ.

ಪದವಿ ತರಗತಿಗಳ  ಪಠ್ಯಕ್ರಮ ಪರಿಷ್ಕರಣೆಯೂ ಆಗಲಿದೆ ಎಂದು ಹೇಳಿದರು. ಡಿಪ್ಲೊಮಾ ಕೋರ್ಸ್‌ಗೆ ಬೇಡಿಕೆ ಕಡಿಮೆ ಇದ್ದು ಅದರ ಸ್ವರೂಪ ಬದಲಾವಣೆ ಮಾಡಿ ಅದನ್ನು ಉದ್ಯೋಗಾಧಾರಿತ ಕೋರ್ಸ್‌ ಆಗಿ ಪರಿವರ್ತಿಸಲಾಗುವುದು. ಈ ಸಂಬಂಧ  ನಾಸ್ಕಂ, ಮೈಕ್ರೋಸಾಫ್ಟ್ ಜತೆ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದರು. ಸರ್ಕಾರಿ ಡಿಪ್ಲೊಮಾ ಹಾಗೂ ಎಂಜಿನಿಯರಿಂಗ್‌ ವಿದ್ಯಾರ್ಥಿಗಳಿಗೆ ಹಾಗೂ ಮೂಲ ತಂತ್ರಜ್ಞಾನ ಹಾಗೂ ಕೌಶಲ ತರಬೇತಿ ನೀಡಲು ಹುವೈ ಸಂಸ್ಥೆ ಮುಂದಾಗಿದೆ.

ಕೃತಕ ಬುದ್ಧಿ ಮತ್ತೆಯಂತಹ ಆಧುನಿಕ ತಂತ್ರಜ್ಞಾನ ವಿಷಯಗಳ ಕುರಿತು 2 ಸಾವಿರ ವಿದ್ಯಾರ್ಥಿಗಳಿಗೆ ಸರ್ಟಿಫೀಕೇಟ್‌ ಕೋರ್ಸ್‌ ನಡೆಸಲು ಹುವೈ ಸಂಸ್ಥೆ ಒಪ್ಪಿಕೊಂಡಿವೆ ಎಂದು ಹೇಳಿದರು. ಶೈಕ್ಷಣಿಕ ವರ್ಷ ಆರಂಭದ ವೇಳೆಗೆ  ಉಪನ್ಯಾಸಕ ಹಾಗೂ ಪ್ರಾಂಶುಪಾಲರ ಹುದ್ದೆ ಭರ್ತಿಗೆ ಕ್ರಮ ಕೈಗೊಳ್ಳಲಾಗಿದೆ. ಈಗಾಗಲೇ 310 ಪ್ರಾಂಶುಪಾಲರ ಹುದ್ದೆ ತುಂಬುವ ಸಂಬಂಧ ಒಪ್ಪಿಗೆಯೂ ನೀಡಲಾಗಿದೆ ಎಂದು ಹೇಳಿದರು.

ಆನ್‌ಲೈನ್‌ ಮೂಲಕ ಪ್ರವೇಶ ಪ್ರಕ್ರಿಯೆಗೆ ಚಿಂತನೆ: ಮುಂದಿನ ಶೈಕ್ಷಣಿಕ ವರ್ಷದ ಪದವಿ ಪ್ರವೇಶ ಪ್ರಕ್ರಿಯೆಯನ್ನು ಆನ್‌ ಲೈನ್‌ ಮೂಲಕವೇ ನಡೆಸಲು ಕಾಲೇಜು ಶಿಕ್ಷಣ ಇಲಾಖೆ ಸಿದ್ಧತೆ ಮಾಡಿಕೊಂಡಿದೆ. 2019-20ನೇ ಸಾಲಿನಲ್ಲೇ  ಪ್ರವೇಶ ಪ್ರಕ್ರಿಯೆಯನ್ನು ಆನ್‌ಲೈನ್‌ ಮೂಲಕ ಆರಂಭಿಸಿತ್ತಾದರೂ, ಪೂರ್ಣ ಪ್ರಮಾಣದಲ್ಲಿ ಅನುಷ್ಠಾನ ಮಾಡಿರಲಿಲ್ಲ. ಆನ್‌ಲೈನ್‌ ಮತ್ತು ಆಫ್ಲೆ„ನ್‌ ಎರಡು ಆಯ್ಕೆಯನ್ನು ವಿದ್ಯಾರ್ಥಿಗಳಿಗೆ ನೀಡಲಾಗಿತ್ತು.

ಆದರೆ, ಮುಂದಿನ ಶೈಕ್ಷಣಿಕ  ವರ್ಷದ ಪ್ರವೇಶ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಆನ್‌ಲೈನ್‌ ಮೂಲಕವೇ ನಡೆಸಲು ಇಲಾಖೆ ನಿರ್ಧರಿಸಲಿದೆ. ಈ ಸಂಬಂಧ ಕಾಲೇಜುಗಳಿಗೆ ಸೂಚನೆಯನ್ನು ಶೀಘ್ರ ಕಳುಹಿಸಲಿದೆ ಎಂದು ಕಾಲೇಜು ಶಿಕ್ಷಣ ಇಲಾಖೆ ಅಧಿಕಾರಿಯೊಬ್ಬರು  ಮಾಹಿತಿ ನೀಡಿದರು. ಆನ್‌ಲೈನ್‌ ಪ್ರವೇಶ ಪ್ರಕ್ರಿಯೆಗೆ ಸಂಬಂಧಿಸಿದಂತೆ ಕಾಲೇಜು ಶಿಕ್ಷಣ ಇಲಾಖೆಯ ವೆಬ್‌ಸೈಟ್‌ ಉನ್ನತೀಕರಿಸಲಾಗಿದೆ.

ಇದಕ್ಕಾಗಿ ರಾಜ್ಯದ 430 ಸರ್ಕಾರಿ ಪದವಿ ಕಾಲೇಜು, ಮಹಿಳಾ ಕಾಲೇಜು ಹಾಗೂ ಕಾನೂನು ಕಾಲೇಜುಗಳ ಪ್ರತ್ಯೇಕ ವೆಬ್‌ಸೈಟ್‌ ಸಿದ್ಧಪಡಿಸಲಾಗಿದೆ. ವಿದ್ಯಾರ್ಥಿಗಳು  ಕಾಲೇಜು ಶಿಕ್ಷಣ ಇಲಾಖೆಯ ವೆಬ್‌ಸೈಟ್‌ ಮೂಲಕ ತಮಗೆ ಬೇಕಾದ ಕಾಲೇಜಿನ ವೆಬ್‌ಸೈಟ್‌ ವೀಕ್ಷಿಸಬಹುದಾಗಿದೆ. ಆಯಾ ಕಾಲೇಜುಗಳ ವೆಬ್‌ಸೈಟ್‌ನಲ್ಲಿ ಕಾಲೇಜು,  ಕೋರ್ಸ್‌ಗಳ ವಿವರ, ಕಾಯಂ ಪ್ರಾಧ್ಯಾಪಕರು ಹಾಗೂ ಅತಿಥಿ ಉಪನ್ಯಾಸಕರ ಮಾಹಿತಿ ಲಭ್ಯವಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಖಚಿತಪಡಿಸಿದರು.

ಟಾಪ್ ನ್ಯೂಸ್

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.