ಬೇಸಗೆ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಪೂರ್ವ ಸಿದ್ಧತೆ


Team Udayavani, Apr 10, 2020, 6:26 AM IST

ಬೇಸಗೆ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಪೂರ್ವ ಸಿದ್ಧತೆ

ಉಡುಪಿ: ನಗರಸಭೆ ಹಾಗೂ ಆಸುಪಾಸಿನ ಗ್ರಾ.ಪಂ. ವ್ಯಾಪ್ತಿಯಲ್ಲಿ ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಅಭಾವ ಎದುರಾಗದಂತೆ ಜಿಲ್ಲಾಡಳಿತ, ನಗರಸಭೆ ಮುನ್ನೆಚ್ಚರಿಕೆ ವಹಿಸಿದ್ದು, ಬಜೆ ಡ್ಯಾಂಗೆ ಪಂಪಿಂಗ್‌ ಆರಂಭಿಸಿದೆ.

ಪಂಚನಬೆಟ್ಟು ಪರಿಸರದಿಂದ ನೀರನ್ನು ಪಂಪ್‌ ಮೂಲಕ ಮೇಲಕ್ಕೆತ್ತಿ ಬಜೆ ಡ್ಯಾಮ್‌ಗೆ ಹರಿಸುವ ಕಾರ್ಯ ಗುರುವಾರದಿಂದ ಆರಂಭಗೊಂಡಿದೆ.ಹಿರಿಯಡ್ಕ ಗ್ರಾ.ಪಂ. ವ್ಯಾಪ್ತಿಯ ಪಂಚನಬೆಟ್ಟುವಿನಲ್ಲಿ ಐದು ಪಂಪ್‌ಗ್ಳ ಮೂಲಕ ಶಿರೂರು ಡ್ಯಾಮ್‌ ವರೆಗೆ ನೀರು ಹರಿಸುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ. ಶಾಸಕ ರಘುಪತಿ ಭಟ್‌, ನಗರಸಭೆಯ ಆಯುಕ್ತರು ಹಾಗೂ ಅಭಿಯಂತರು ಉಪಸ್ಥಿತರಿದ್ದರು. ಈಗ ಮೂರು ಪಂಪು ಅಳವಡಿಸಿ ನೀರನ್ನು ಮೇಲಕ್ಕೆತ್ತಿ ಶಿರೂರು ಡ್ಯಾಮಿಗೆ ಹರಿಸಲಾಗುತ್ತದೆ. ಮುಂದಿನ ದಿನಗಳಲ್ಲಿ ಶಿರೂರು ಡ್ಯಾಮ್‌ ಬಳಿ ಮತ್ತೆರಡು ಪಂಪ್‌ ಅಳವಡಿಸಿ ಒಟ್ಟು ಐದು ಪಂಪ್‌ಗ್ಳನ್ನು ಬಳಸಿನೀರು ಮೇಲಕ್ಕೆತ್ತಿ, ಡ್ಯಾಂಗೆ ಹರಿಸಲಾಗು ತ್ತದೆ. ಇದರಿಂದ ಬಜೆಯಲ್ಲಿಯೇ ನೀರಿನ ಸಂಗ್ರಹ ಹೆಚ್ಚಾಗಲಿದೆ. ಇಲ್ಲಿಂದ ಎಂದಿನಂತೆ ಪಂಪಿಂಗ್‌ ಮಾಡಿ ನೀರು ಸರಬರಾಜು ಆಗಲಿದೆ.

ನೀರಿನ ಲಭ್ಯತೆ ಬಗ್ಗೆ ಪರಿಶೀಲನೆ
ಬೇಸಗೆಯಲ್ಲಿ ನಗರ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಈಗಾಗಲೇ ಸಭೆ ನಡೆಸಿ ಮುಂದಿನ ಯೋಜನೆಯ ಬಗ್ಗೆ ಚರ್ಚಿಸಲಾಗಿದೆ. ಜನವರಿಯಲ್ಲಿ ಡ್ಯಾಂ ಇರುವ ಪ್ರದೇಶಕ್ಕೆ ಶಾಸಕ ರಘುಪತಿ ಭಟ್‌ ಭೇಟಿ ನೀಡಿ ಪರಿಶೀಲಿಸಿ ಅಗತ್ಯ ಕ್ರಮಗಳನ್ನು ಕೂಡಲೇ ಕೈಗೊಳ್ಳುವಂತೆ ಸೂಚಿಸಿದ್ದರು.

ಬಜೆಯಲ್ಲಿ ಪ್ರಸ್ತುತ 4.49 ಮೀಟರ್‌ ನೀರಿದೆ. ಶಿರೂರಿನಲ್ಲಿ ನೀರು ಬಹುತೇಕ ಖಾಲಿಯಾಗಿದೆ. ಆದರೆ ಅಕ್ಕಪಕ್ಕದ 4-5
ಹೊಂಡಗಳಲ್ಲಿ ನೀರಿದೆ. ಇಲ್ಲಿಂದ ಪಂಪಿಂಗ್‌ ಮಾಡಲಾಗುತ್ತದೆ. ಇಲ್ಲವಾದರೆ ಈ ನೀರು ಬೇಸಗೆಯ ಬಿಸಿಗೆ ಬತ್ತಿ ಹೋಗಿ ಉಪಯೋಗಕ್ಕೆ ಸಿಗುವುದಿಲ್ಲ ಎಂದು ಈಗಲೇ ಪಂಪಿಂಗ್‌ ಮಾಡಿ ಇದನ್ನು ಡ್ಯಾಂನಲ್ಲಿ ಶೇಖರಿಸಿಡ ಲಾಗುತ್ತದೆ. ಸದ್ಯ ನೀರಿನ ಸಮಸ್ಯೆ ಇಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಮಸ್ಯೆ ಎದುರಾಗುವ ಮೊದಲೇ ಪರಿಹಾರ
ನಗರ ಸಭೆಗೆ ಈ ಬಾರಿ ಕುಡಿಯುವ ನೀರಿನ ಸಮಸ್ಯೆ ಬರಬಾರದು ಅನ್ನುವ ಕಾರಣಕ್ಕೆ ಪೂರ್ವ ತಯಾರಿಗಳನ್ನು ಮಾಡಿಕೊಂಡಿದ್ದೇವೆ. ಕಳೆದ ವರ್ಷ ಮೇ ತಿಂಗಳ ಆರಂಭದಲ್ಲಿಯೇ ಸಂಪೂರ್ಣ ನೀರು ಖಾಲಿಯಾಗಿತ್ತು. ಈ ಬಾರಿ ಎಪ್ರಿಲ್‌ನಲ್ಲಿಯೇ ಬತ್ತಿ ಹೋಗುವ ಗುಂಡಿಗಳ ನೀರು ಶೇಖರಿಸಿ ನಿರಂತರ ನೀರು ಕೊಡುವ ವ್ಯವಸ್ಥೆ ಆಗಲಿದೆ. ಇಲ್ಲಿರುವ ನೀರು ಒಂದು ಬಾರಿ ಸಂಪರ್ಕ ಕಡಿತಗೊಂಡರೆ ಮತ್ತೆ ಬಜೆಗೆ ಹರಿಸಲು ಸಾಧ್ಯವಾಗುವುದಿಲ್ಲ. ಸಂಪರ್ಕ ಕಡಿತವಾಗುವ ಮೊದಲೇ ನೀರನ್ನು ಪಂಪಿಂಗ್‌ ಮಾಡಿ ಶಿರೂರಿಗೆ ಹರಿಸಬೇಕಿದೆ. ನೀರು ಖಾಲಿ ಆದ ಮೇಲೆ ಮಾಡಿದರೆ ಪ್ರಯೋಜನ ಆಗುವುದಿಲ್ಲ. ಸಮಸ್ಯೆ ಎದುರಾಗುವ ಮೊದಲೇ ಪರಿಹಾರ ಮಾರ್ಗಗಳನ್ನು ಕಂಡುಕೊಂಡಿದ್ದೇವೆ.
ರಘುಪತಿ ಭಟ್‌ , ಶಾಸಕರು, ಉಡುಪಿ

ಟಾಪ್ ನ್ಯೂಸ್

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

S. Jaishankar: ಎ.19 ರಂದು ಕೇಂದ್ರ ಸಚಿವ ಜೈಶಂಕರ್ ಉಡುಪಿಗೆ ಭೇಟಿ

S. Jaishankar: ಎ.19 ರಂದು ಕೇಂದ್ರ ಸಚಿವ ಜೈಶಂಕರ್ ಉಡುಪಿಗೆ ಭೇಟಿ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

3-hegde

LS Polls: ಮಾಡಿದ ಕೆಲಸ ನೋಡಿ ಮತ ನೀಡಿ: ಜಯಪ್ರಕಾಶ್‌ ಹೆಗ್ಡೆ

Udupi-Chikkamagaluru ಲೋಕಸಭಾ ಕ್ಷೇತ್ರ: ಹಳೇ ಹುಲಿಗಳ ನಡುವೆ ಹೊಸ ಯುದ್ಧ

Udupi-Chikkamagaluru ಲೋಕಸಭಾ ಕ್ಷೇತ್ರ: ಹಳೇ ಹುಲಿಗಳ ನಡುವೆ ಹೊಸ ಯುದ್ಧ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.